Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲವ್ಲಿ ಸ್ಟಾರ್ ಪ್ರೇಮ್ ಗೆ ಅರ್ಧ 'ಚಂದ್ರ' ಪ್ರಯೋಗ
ಕನ್ನಡ ಚಿತ್ರರಂಗದಲ್ಲಿ ವಿವಾದಗಳು ಹೊಸದಲ್ಲ, ನಿತ್ಯನೂತನ. ಇನ್ನೇನು ಚಿತ್ರ ಬಿಡುಗಡೆಯಾಗುತ್ತಿದೆ ಎಂದರೆ ವಿವಾದಗಳು ತಣ್ಣಗೆ ಭುಗಿಲೇಳುತ್ತವೆ. ಈಗ ರೂಪಾ ಅಯ್ಯರ್ ನಿರ್ದೇಶನದ 'ಚಂದ್ರ' ಚಿತ್ರವೂ ವಿವಾದಕ್ಕೆ ಗುರಿಯಾಗಿದೆ. ಅದೇನು ವಿವಾದ, ಯಾಕಾಯಿತು? ಬನ್ನಿ ಒಮ್ಮೆ ನೋಡಿ ಬರೋಣ.
ರೂಪಾ ಅಯ್ಯರ್ ನಿರ್ದೇಶನದ ಕನ್ನಡ, ತೆಲುಗು ಹಾಗೂ ತಮಿಳು ತ್ರಿಭಾಷಾ 'ಚಂದ್ರ' ಚಿತ್ರ ಇದೇ ಜೂ.27ಕ್ಕೆ ತೆರೆಕಾಣುತ್ತಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸೋಮವಾರ (ಜೂ.17) ಪತ್ರಿಕಾಗೋಷ್ಠಿ ಕರೆಯಲಾಗಿತ್ತು. ಚಿತ್ರತಂಡದ ಎಲ್ಲರೂ ಹಾಜರಿದ್ದರು. ಆದರೆ ನಾಯಕ ನಟ ಪ್ರೇಮ್ ಮಾತ್ರ ನಾಪತ್ತೆಯಾಗಿದ್ದರು.
ಚಿತ್ರದ ಪೋಸ್ಟರ್ ಗಳಲ್ಲಿ ಯಶ್ ಅವರನ್ನು ತೋರಿಸಲಾಗಿದೆ. ಇದೂ ಒಂದು ಕಾರಣ ಇರಬಹುದೇ ಎಂದರೆ, "ಯಶ್ ಸಣ್ಣ ಕಲಾವಿದರೇನು ಅಲ್ಲ. ಅವರೂ ಒಬ್ಬ ಹೀರೋ. ಪೋಸ್ಟರ್ ಗಳಲ್ಲಿ ಯಶ್ ಫೋಟೋ ಬಳಸಿಕೊಳ್ಳಬಾರದು ಎಂದೇನು ಇಲ್ಲವಲ್ಲಾ. ಚಿತ್ರದಲ್ಲಿ ಅವರೂ ಅಭಿನಯಿಸಿರುವ ಕಾರಣ ಯಶ್ ಫೋಟೋ ಬಳಸಿಕೊಂಡಿದ್ದೇವೆ" ಎಂದಿದ್ದಾರೆ.
ಎಲ್ಲರನ್ನೂ ಚಿತ್ರದ ಪ್ರಚಾರಕ್ಕೆ ಕರದಿದ್ದೇವೆ. ಪ್ರೇಮ್ ಅವರನ್ನೂ ಕರೆದಿದ್ದೇವೆ. ಪ್ರೇಮ್ ಅವರಿಗೆ ತಾಂಬೂಲ ಕೊಟ್ಟು ಸ್ಪೆಷಲ್ ಆಗಿ ಕರೆಯುವುದಕ್ಕೆ ಆಗುತ್ತದೆಯೇ? ಯಾಕೆ ಬರಲಿಲ್ಲ ಎಂಬುದು ನಮಗೆ ಗೊತ್ತಿಲ್ಲ ಎನ್ನುತ್ತಾರೆ ರೂಪಾ ಅಯ್ಯರ್.
ಇನ್ನು 'ಚಂದ್ರ' ಚಿತ್ರದ ನಾಯಕ ನಟ ಪ್ರೇಮ್ ಹೇಳುವುದೇನೆಂದರೆ, ಚಿತ್ರ ಆರಂಭವಾದ ದಿನಗಳಿಂದಲೂ ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯಗಳಿವೆ. ನಮ್ಮಿಬ್ಬರ ನಡುವೆ ಸಣ್ಣಪುಟ್ಟ ಗಲಾಟೆಗಳು ನಡೆಯುತ್ತಲೇ ಇವೆ. ನಮ್ಮಿಬ್ಬರ ಪರ್ಸನಲ್ ಗಲಾಟೆಯಲ್ಲಿ ಚಿತ್ರ ಬಡವಾಗುವುದು ಬೇಡ ಎಂದು ಎಲ್ಲವನ್ನೂ ಸಹಿಸಿಕೊಂಡಿದ್ದೇನೆ.