Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸಂಗೊಳ್ಳಿ ರಾಯಣ್ಣ' ಚಿತ್ರಕ್ಕೆ ರಾಜ್ಯ ಚಲನಚಿತ್ರ ಪ್ರಶಸ್ತಿ?
2012ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟಣೆಗೆ ಕ್ಷಣಗಣನೆ ಶುರುವಾಗಿದೆ. ವಾರ್ತಾ ಸಚಿವ ರೋಷನ್ ಬೇಗ್ ಅವರು ಚಲನಚಿತ್ರ ಪ್ರಶಸ್ತಿಗಳನ್ನು ಸೋಮವಾರ (ಆ.25) ವಾರ್ತಾಸೌಧದಲ್ಲಿ ಪ್ರಕಟಿಸಲಿದ್ದಾರೆ.
ಈ ಬಾರಿ ಪ್ರಶಸ್ತಿಗಾಗಿ 59 ಚಿತ್ರಗಳ ನಡುವೆ ತೀವ್ರ ಪೈಪೋಟಿ ನಡೆದಿದೆ. ಮುಖ್ಯವಾಗಿ ಐದು ಚಿತ್ರಗಳ ನಡುವೆ ಬಹುತೇಕ ಪ್ರಶಸ್ತಿಗಳಿಗಾಗಿ ಸ್ಪರ್ಧೆ ನಡೆದಿದೆ ಎನ್ನಲಾಗಿದೆ. ಅವುಗಳಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರವೂ ಒಂದು.
ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್ ಮತ್ತು ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗಳನ್ನೂ ಪ್ರಕಟಿಸಲಾಗುತ್ತಿದೆ. ಚಲನಚಿತ್ರ ನಿರ್ಮಾಪಕರಾದ ಕೆ.ಸಿ.ಎನ್.ಚಂದ್ರಶೇಖರ್ ಅವರ ನೇತೃತ್ವದ ಸಮಿತಿಯು 59 ಚಿತ್ರಗಳನ್ನು ವೀಕ್ಷಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಸಮಿತಿ ಶಿಫಾರಸು ಮಾಡಿರುವ ಚಲನಚಿತ್ರಗಳನ್ನು ವಾರ್ತಾ ಸಚಿವರಾದ ರೋಷನ್ ಬೇಗ್ ಅವರು ಇಂದು ಪ್ರಕಟಿಸಲಿದ್ದಾರೆ. ಪ್ರಮೀಳಾ ಜೋಷಾಯ್, ಮುರಳಿಧರ ಹಾಲಪ್ಪ, ಸತ್ಯಮೂರ್ತಿ ಆನಂದೂರು, ಸಾ.ರಾ.ಗೋವಿಂದು, ಯಾಕುಬ್ ಖಾದರ್ ಗುಲ್ವಾಡಿ, ಅಪ್ಪಗೆರೆ ತಿಮ್ಮರಾಜು, ಗೋಪಿ ಪೀಣ್ಯ ಹಾಗೂ ವಾರ್ತಾ ನಿರ್ದೇಶಕರು ಆಯ್ಕೆ ಸಮಿತಿಯ ಸದಸ್ಯರು.