twitter
    For Quick Alerts
    ALLOW NOTIFICATIONS  
    For Daily Alerts

    ನಟ ಯಶ್ ಹತ್ಯೆಗೆ ಸಂಚು ರೂಪಿಸಿದ್ದ ಕುಖ್ಯಾತ ರೌಡಿಯ ಎನ್‌ಕೌಂಟರ್.!

    By ಮಂಜುನಾಥ್ ಭದ್ರಶೆಟ್ಟಿ
    |

    ಬೆಂಗಳೂರು ಪೊಲೀಸರಿಂದ ಇಂದು ಎನ್‌ಕೌಂಟರ್‌ಗೆ ಒಳಗಾಗಿ ಮೃತನಾದ ಕುಖ್ಯಾತ ರೌಡಿ ಸ್ಲಂ ಭರತ್‌ ಈ ಹಿಂದೆ ಸುಪಾರಿ ಕಿಲ್ಲರ್ ಗಳ ಜೊತೆ ಸೇರಿ ರಾಕಿಂಗ್ ಸ್ಟಾರ್ ಯಶ್ ಹತ್ಯೆಗೆ ಸಂಚು ರೂಪಿಸಿದ್ದ ಎಂಬುದಾಗಿ ತಿಳಿದು ಬಂದಿದೆ.

    Recommended Video

    Encounter On Rowdy Slum Bharath By Bengaluru Police | Encounter | Bengaluru Police |Oneindia Kannada

    ಗುರುವಾರ ರಾತ್ರಿ ಪೊಲೀಸರು ಸ್ಲಂ ಭರತ್‌ನನ್ನು ವಿಚಾರಣೆಗೆ ಕರೆದೊಯ್ಯುವ ವೇಳೆ ಸಿನಿಮೀಯ ರೀತಿಯಲ್ಲಿ ನಡೆದ ಘಟನೆಯಲ್ಲಿ ರೌಡಿ ಭರತ್ ಹತನಾಗಿದ್ದಾನೆ.

    ಗುರುವಾರ ನಸುಕಿನ ಜಾವ 5 ಗಂಟೆ ಸುಮಾರು ಪೀಣ್ಯ ಬಳಿ ಸ್ಲಂ ಭರತನನ್ನು ಕರೆದೊಯ್ಯುತ್ತಿದ್ದಾಗ ಆತನ ಸ್ನೇಹಿತರು ಪೊಲೀಸರ ಮೇಲೆ ಹಲ್ಲೆ ಮಾಡಿ ಭರತನನ್ನು ಬಿಡಿಸಿಕೊಂಡು ಹೋಗುತ್ತಿದ್ದರು. ಬೆನ್ನತ್ತಿದ್ದ ಪೊಲೀಸರು ಪೀಣ್ಯದ ಜಾನುವಾರು ಸಂವರ್ಧನ ಕೇಂದ್ರದಲ್ಲಿ ಎನ್‌ಕೌಂಟರ್ ಮಾಡಿ ಆತನ ಕಥೆ ಮುಗಿಸಿದ್ದಾರೆ.

    ರಾಜಗೋಪಾಲ ನಗರ ಪೊಲೀಸ್ ಠಾಣೆಯ ರೌಡಿ ಶೀಟರ್ ಆಗಿದ್ದ ಭರತ್ ಬೆಂಗಳೂರಿನ ಕುಖ್ಯಾತ ರೌಡಿ. ನಟ ಯಶ್ ಹತ್ಯೆಗೆ ತನ್ನ ಸಹಚರರೊಂದಿಗೆ ಸೇರಿ ಸಂಚು ರೂಪಿಸಿದ್ದರ ಬಗ್ಗೆ ಆತನ ಮೇಲೆ ಆರೋಪವಿತ್ತು.

    ಸೈಕಲ್ ರವಿಯೊಂದಿಗೆ ನಂಟು

    ಸೈಕಲ್ ರವಿಯೊಂದಿಗೆ ನಂಟು

    ಕಳೆದ ವರ್ಷದ ಆರಂಭದಲ್ಲಿ ಸಿಸಿಬಿ ಪೊಲೀಸರಿಂದ ಸ್ಫೋಟಕ ಮಾಹಿತಿಯೊಂದು ಹೊರ ಬಿದ್ದಿತ್ತು. ಖ್ಯಾತ ನಟ ಯಶ್ ಹತ್ಯೆಗೆ ಬೆಂಗಳೂರಿನ ಕೆಲ ರೌಡಿಗಳು ಸಂಚು ರೂಪಿಸಿದ್ದು ಸೈಕಲ್ ರವಿ ಬಂಧನದಿಂದ ಗೊತ್ತಾಗಿತ್ತು. ಸ್ಲಂ ಭರತ್‌ ಹಾಗೂ ಸೈಕಲ್ ರವಿಗೆ ಯಶ್ ಕೊಲ್ಲಲು ಯಶ್ ಗೆ ಆಗದವರು ಸುಪಾರಿ ಕೊಟ್ಟಿದ್ದರು ಎಂದು ಆರೋಪಿಸಲಾಗಿತ್ತು.

    ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ರೌಡಿ ಶೀಟರ್ ಸ್ಲಂ ಭರತ್ ಸಾವು

    ನಾನೇನು ಕುರಿ-ಕೋಳಿಯಲ್ಲ ಎಂದಿದ್ದ ಯಶ್

    ನಾನೇನು ಕುರಿ-ಕೋಳಿಯಲ್ಲ ಎಂದಿದ್ದ ಯಶ್

    "ನನ್ನ​ ಹತ್ಯೆಗೆ ಸಂಚು ಸುದ್ದಿ ಕೇವಲ ವದಂತಿಯಷ್ಟೆ. ನನ್ನ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಸುದ್ದಿಯಿಂದ ನನ್ನ ಮನೆಯವರು, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ಕಿರಿಕಿರಿಯಾಗುತ್ತಿದೆ. ಪದೇ ಪದೇ ಮಾಧ್ಯಮಗಳಲ್ಲಿ ಈ ಕುರಿತ ಸುದ್ದಿ ನೋಡಿದಾಗ ನನ್ನನ್ನು ಇಷ್ಟಪಡುವವರ ಮೇಲೆ ಬೇರೆ ರೀತಿಯ ಪರಿಣಾಮ ಬೀರುತ್ತದೆ. ಯಾರೋ ಹತ್ಯೆ ಮಾಡಲು ನಾನೇನು ಕುರಿ ಕೋಳಿಯಲ್ಲ' ಎಂದು ಈ ಹಿಂದೆ ಯಶ್ ಹೇಳಿದ್ದರು.

    ಎನ್‌ಕೌಂಟರ್; ನಟ ಯಶ್ ಹತ್ಯೆಗೂ ಸ್ಕೆಚ್‌ ಹಾಕಿದ್ದ ರೌಡಿ ಸ್ಲಂ ಭರತ್

    ತಮಿಳುನಾಡು ಮೂಲದ ರೌಡಿ

    ತಮಿಳುನಾಡು ಮೂಲದ ರೌಡಿ

    ತಮಿಳುನಾಡು ಮೂಲದವನಾಗಿದ್ದ ಭರತ್ ಅಲಿಯಾಸ್ ಸ್ಲಂ ಭರತ್ ಬೆಂಗಳೂರಿನ ರಾಜಗೋಪಾಲ ನಗರದ ಸ್ಲಂ ನಿವಾಸಿಯಾಗಿದ್ದ. ಪುಡಿ ರೌಡಿ ಚಟುವಟಿಕೆಗಳ ಮೂಲಕ ಕುಖ್ಯಾತ ರೌಡಿಯಾಗಿ ಬೆಳೆದಿದ್ದ. ರೌಡಿ ಲಕ್ಷ್ಮಣ ಹತ್ಯೆಯ ನಂತರ ಬೆಂಗಳೂರಿನಲ್ಲಿ ಅವನ ಉಪಟಳ ಹೆಚ್ಚಾಗಿತ್ತು. ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆತ ಉತ್ತರ ಪ್ರದೇಶದಲ್ಲಿ ತಲೆ ಮರೆಸಿಕೊಂಡಿದ್ದ.

    ಪೊಲೀಸರ ಮೇಲೆ ಗುಂಡಿನ ದಾಳಿ

    ಪೊಲೀಸರ ಮೇಲೆ ಗುಂಡಿನ ದಾಳಿ

    "ಮಧ್ಯರಾತ್ರಿ ಪೊಲೀಸರ ವಾಹನದ ಮೇಲೆ ದಾಳಿ ಮಾಡಿ ಸ್ಲಂ ಭರತ್‌ನನ್ನು ಆತನ ಸ್ನೇಹಿತನನ್ನು ಬಿಡಿಸಿಕೊಂಡು ಹೋಗುತ್ತಿದ್ದರು. ಬೆನ್ನತ್ತಿದ ರಾಜಗೋಪಾಲ ನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಮೇಲೆಯೇ ರೌಡಿಗಳು ಗುಂಡಿನ ದಾಳಿ ಮಾಡಿದ್ದರು. ಈ ವೇಳೆ ಬುಲೆಟ್ ಪ್ರೂಫ್ ಜಾಕೆಟ್ ಧರಿಸಿದ್ದರಿಂದ ಇನ್ಸ್ ಪೆಕ್ಟರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲ್ಲದೇ ನಾಲ್ವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಕೂಡ ನಡೆದಿದೆ. ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ'' ಎಂದು ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    English summary
    Rowdy Slum Bharath encounter: Was he the one who planned to Murder Yash.?
    Thursday, February 27, 2020, 13:59
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X