Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಉಮಾಪತಿ ಯಾರೋ ನನಗೆ ಗೊತ್ತಿಲ್ಲ': ದರ್ಶನ್ ಪರ ನಿಂತ ಸುಮಲತಾ
ನಟ ದರ್ಶನ್ ಹೆಸರು ದುರ್ಬಳಕೆ ಮಾಡಿಕೊಂಡು ಸುಮಾರು 25 ಕೋಟಿ ರೂಪಾಯಿ ವಂಚಿಸಲು ಯತ್ನ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಸಂಸದೆ ಸುಮಲತಾ ಪ್ರತಿಕ್ರಿಯಿಸಿದ್ದಾರೆ.
ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಂದರ್ಭದಲ್ಲಿ, ''ಕಳೆದ ವಾರ ದರ್ಶನ್ ಮನೆಗೆ ಬಂದಿದ್ದರು. ಆ ಸಂದರ್ಭದಲ್ಲಿ ಯಾರೋ 25 ಕೋಟಿ ಮೋಸ ಮಾಡಲು ಪ್ರಯತ್ನ ಮಾಡ್ತಿದ್ದಾರೆ ಎಂದು ಹೇಳಿದ್ರು. ಆದರೆ, ಪೂರ್ತಿ ವಿಷಯದ ಬಗ್ಗೆ ಮಾತನಾಡಿಲ್ಲ'' ಎಂದು ಸುಮಲತಾ ತಿಳಿಸಿದರು.
ದರ್ಶನ್ ಗೆಳೆಯರು ನನ್ನ ತೇಜೋವಧೆ ಮಾಡಲು ಹೂಡಿದ ಷಡ್ಯಂತ್ರ ಇದು: ಉಮಾಪತಿ
ಈ ವಿಚಾರದಲ್ಲಿ 'ನ್ಯಾಯ ದರ್ಶನ್ ಪರ ಇದೆ, ನಾನು ನ್ಯಾಯದ ಪರ ಇರ್ತೇನೆ' ಎಂದು ಡಿ ಬಾಸ್ಗೆ ಬೆಂಬಲ ವ್ಯಕ್ತಪಡಿಸಿದರು.
ಇನ್ನು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಕುರಿತು ಉಲ್ಲೇಖಿಸಿದಾಗ, ''ಉಮಾಪತಿ ಯಾರು ಎನ್ನುವುದು ನನಗೆ ತಿಳಿದಿಲ್ಲ. ಅವರನ್ನು ಭೇಟಿ ಸಹ ಮಾಡಿಲ್ಲ. ಈ ಬಗ್ಗೆ ನಾನು ಮಾತನಾಡುವುದಕ್ಕೆ ಇಷ್ಟ ಪಡಲ್ಲ'' ಎಂದು ತಿಳಿಸಿದರು.
ಕಳೆದ ಒಂದು ವಾರದಿಂದ ಮಂಡ್ಯ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ನಾಯಕರ ನಡುವೆ ಕೆಆರ್ಎಸ್ ಡ್ಯಾಂ, ಅಂಬರೀಶ್ ಸ್ಮಾರಕಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ನಡೆಯುತ್ತಿದೆ.
ಉಮಾಪತಿ ನನ್ನನ್ನು ಉಪಯೋಗಿಸಿಕೊಂಡಿದ್ದು ತಪ್ಪು, ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ; ಅರುಣಾ ಕುಮಾರಿ
ಸುಮಲತಾ ಹಾಗೂ ಅಂಬರೀಶ್ ಪರವಾಗಿ ಮಾತನಾಡಿದ್ದ ರಾಕ್ಲೈನ್ ವೆಂಕಟೇಶ್ ವಿರುದ್ಧ ತೀವ್ರ ಟೀಕೆ ಎದುರಾಗಿತ್ತು. ಈ ಹಿನ್ನೆಲೆ ದುಷ್ಕರ್ಮಿಗಳು ರಾಕ್ಲೈನ್ ಮನೆ ಮೇಲೆ ಕಲ್ಲು ಎಸೆದಿದ್ದರು.
Recommended Video
ಈ ಘಟನೆ ಸಂಬಂಧ ಮಾತನಾಡಿದ ಸುಮಲತಾ, ''ಇದು ಮಂಡ್ಯ ಚುನಾವಣೆ ವೇಳೆಯೂ ಆಗಿತ್ತು. ಆಗ ದರ್ಶನ್ ಮನೆ ಮೇಲೆ ಕಲ್ಲು ಹೊಡೆದಿದ್ದರು. ಯಶ್ ಬಗ್ಗೆ ನಿಂದಿಸಿದ್ದರು. ಆಗಲೇ ಭಯ ಪಟ್ಟಿಲ್ಲ. ಈಗ ಈ ಬಗ್ಗೆ ಏಕೆ ತಲೆಕೆಡಿಸಿಕೊಳ್ಳಬೇಕು'' ಎಂದರು.