Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಉಮಾಪತಿ ಯಾರೋ ನನಗೆ ಗೊತ್ತಿಲ್ಲ': ದರ್ಶನ್ ಪರ ನಿಂತ ಸುಮಲತಾ
ನಟ ದರ್ಶನ್ ಹೆಸರು ದುರ್ಬಳಕೆ ಮಾಡಿಕೊಂಡು ಸುಮಾರು 25 ಕೋಟಿ ರೂಪಾಯಿ ವಂಚಿಸಲು ಯತ್ನ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಸಂಸದೆ ಸುಮಲತಾ ಪ್ರತಿಕ್ರಿಯಿಸಿದ್ದಾರೆ.
ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಂದರ್ಭದಲ್ಲಿ, ''ಕಳೆದ ವಾರ ದರ್ಶನ್ ಮನೆಗೆ ಬಂದಿದ್ದರು. ಆ ಸಂದರ್ಭದಲ್ಲಿ ಯಾರೋ 25 ಕೋಟಿ ಮೋಸ ಮಾಡಲು ಪ್ರಯತ್ನ ಮಾಡ್ತಿದ್ದಾರೆ ಎಂದು ಹೇಳಿದ್ರು. ಆದರೆ, ಪೂರ್ತಿ ವಿಷಯದ ಬಗ್ಗೆ ಮಾತನಾಡಿಲ್ಲ'' ಎಂದು ಸುಮಲತಾ ತಿಳಿಸಿದರು.
ದರ್ಶನ್ ಗೆಳೆಯರು ನನ್ನ ತೇಜೋವಧೆ ಮಾಡಲು ಹೂಡಿದ ಷಡ್ಯಂತ್ರ ಇದು: ಉಮಾಪತಿ
ಈ ವಿಚಾರದಲ್ಲಿ 'ನ್ಯಾಯ ದರ್ಶನ್ ಪರ ಇದೆ, ನಾನು ನ್ಯಾಯದ ಪರ ಇರ್ತೇನೆ' ಎಂದು ಡಿ ಬಾಸ್ಗೆ ಬೆಂಬಲ ವ್ಯಕ್ತಪಡಿಸಿದರು.
ಇನ್ನು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಕುರಿತು ಉಲ್ಲೇಖಿಸಿದಾಗ, ''ಉಮಾಪತಿ ಯಾರು ಎನ್ನುವುದು ನನಗೆ ತಿಳಿದಿಲ್ಲ. ಅವರನ್ನು ಭೇಟಿ ಸಹ ಮಾಡಿಲ್ಲ. ಈ ಬಗ್ಗೆ ನಾನು ಮಾತನಾಡುವುದಕ್ಕೆ ಇಷ್ಟ ಪಡಲ್ಲ'' ಎಂದು ತಿಳಿಸಿದರು.
ಕಳೆದ ಒಂದು ವಾರದಿಂದ ಮಂಡ್ಯ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ನಾಯಕರ ನಡುವೆ ಕೆಆರ್ಎಸ್ ಡ್ಯಾಂ, ಅಂಬರೀಶ್ ಸ್ಮಾರಕಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ನಡೆಯುತ್ತಿದೆ.
ಉಮಾಪತಿ ನನ್ನನ್ನು ಉಪಯೋಗಿಸಿಕೊಂಡಿದ್ದು ತಪ್ಪು, ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ; ಅರುಣಾ ಕುಮಾರಿ
ಸುಮಲತಾ ಹಾಗೂ ಅಂಬರೀಶ್ ಪರವಾಗಿ ಮಾತನಾಡಿದ್ದ ರಾಕ್ಲೈನ್ ವೆಂಕಟೇಶ್ ವಿರುದ್ಧ ತೀವ್ರ ಟೀಕೆ ಎದುರಾಗಿತ್ತು. ಈ ಹಿನ್ನೆಲೆ ದುಷ್ಕರ್ಮಿಗಳು ರಾಕ್ಲೈನ್ ಮನೆ ಮೇಲೆ ಕಲ್ಲು ಎಸೆದಿದ್ದರು.
Recommended Video
ಈ ಘಟನೆ ಸಂಬಂಧ ಮಾತನಾಡಿದ ಸುಮಲತಾ, ''ಇದು ಮಂಡ್ಯ ಚುನಾವಣೆ ವೇಳೆಯೂ ಆಗಿತ್ತು. ಆಗ ದರ್ಶನ್ ಮನೆ ಮೇಲೆ ಕಲ್ಲು ಹೊಡೆದಿದ್ದರು. ಯಶ್ ಬಗ್ಗೆ ನಿಂದಿಸಿದ್ದರು. ಆಗಲೇ ಭಯ ಪಟ್ಟಿಲ್ಲ. ಈಗ ಈ ಬಗ್ಗೆ ಏಕೆ ತಲೆಕೆಡಿಸಿಕೊಳ್ಳಬೇಕು'' ಎಂದರು.