Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಗಾನಕೋಗಿಲೆ ಎಸ್ ಜಾನಕಿ
ಸುಪ್ರಸಿದ್ಧ ಹಿನ್ನಲೆ ಗಾಯಕಿ, ಗಾನಕೋಗಿಲೆ, ಗಾನ ಶಾರದೆ ಎಸ್ ಜಾನಕಿ ಅನಾರೋಗ್ಯದ ಕಾರಣ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸಂಬಂಧಿಕರ ಮನೆಗೆ ಭೇಟಿ ನೀಡಿದ್ದ ವೇಳೆ ಸೊಂಟ ಮುರಿತದಿಂದಾಗಿ ಕಳೆದೊಂದು ವಾರದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಮೈಸೂರಿನ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಎಸ್ ಜಾನಕಿಯವರು ಕಾಲು ಜಾರಿ ಬಿದ್ದು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದರು. ಈ ಹಿನ್ನೆಲೆ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕ್ಸಿತೆ ಪಡೆದು ಗುಣಮುಖರಾಗಿದ್ದಾರೆ. ಇನ್ನು ಜಾನಕಿಯವರನ್ನು ಪರೀಕ್ಷೆ ನಡೆಸಿದ ವೈದ್ಯರು ಸೊಂಟದ ಭಾಗದಲ್ಲಿ ಫ್ರಾಕ್ಚರ್ ಆಗಿರುವುದನ್ನು ದೃಢಪಡಿಸಿದ್ದರು. ತಕ್ಷಣ ಡಾ.ನಿತಿನ್ ಅವರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಇದೀಗ ಅವರು ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಟ್ರಾಜ್ ಆಗಿದ್ದಾರೆ.
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ ಜಾನಕಿ, ಕನ್ನಡ ಮಕ್ಕಳ ಕೃಪೆಯಿಂದ ನಾನು ಚೆನ್ನಾಗಿದ್ದೇನೆ. ಇಡೀ ಕನ್ನಡ ಮಕ್ಕಳು ನನ್ನ ಅತ್ಯಂತ ಪ್ರೀತಿಯಿಂದ ಕಾಣುತ್ತಾರೆ. ಅವರ ಪ್ರೀತಿಯಿಂದ ಚೆನ್ನಾಗಿಯೇ ಇರುತ್ತೇನೆ. ನಾನು ಸ್ನೇಹಿತರ ಮನೆಗೆ ಬಂದಿದ್ದೆ. ಅಲ್ಲಿ ಬಾಗಿಲ ಹೊಸಿಲು ದಾಟುವಾಗ ಜಾರಿ ಬಿದ್ದಿದ್ದೆ. ತುಂಬಾ ನೋವಾಯ್ತು ಆಗ. ನಂತರ ಆಸ್ಪತ್ರೆಗೆ ಕರೆದುಕೊಂಡು ಆಪರೇಷನ್ ಮಾಡಿದ್ದಾರೆ. ಇಲ್ಲಿ ಅದೇನೋ ಬದಲಾಯಿಸಿದ್ದಾರೆ. ಹಳೆದು ಮುರಿದುಹೋಯ್ತು ಎಂದು ನಡೆದ ಶಸ್ತ್ರಚಿಕಿತ್ಸೆ ಬಗ್ಗೆ ಸ್ವತಃ ಅವರೇ ವಿಶ್ಲೇಷಿಸಿದರು.
ನನಗೆ ಮೈಸೂರಿನ ಜೊತೆ ಜನ್ಮಂತರದ ಋಣ ಇದೆ. ಅದಕ್ಕೆ ಈ ಊರೆಂದರೇ ನನಗೆ ಇಷ್ಟ. ಡಿಸ್ಚಾರ್ಜ್ ಆಗಿ ಮೈಸೂರಿನಲ್ಲಿಯೇ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುತ್ತೇನೆ ಎಂದು ತಿಳಿಸಿದರು.