Don't Miss!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಗಾನಕೋಗಿಲೆ ಎಸ್ ಜಾನಕಿ
ಸುಪ್ರಸಿದ್ಧ ಹಿನ್ನಲೆ ಗಾಯಕಿ, ಗಾನಕೋಗಿಲೆ, ಗಾನ ಶಾರದೆ ಎಸ್ ಜಾನಕಿ ಅನಾರೋಗ್ಯದ ಕಾರಣ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸಂಬಂಧಿಕರ ಮನೆಗೆ ಭೇಟಿ ನೀಡಿದ್ದ ವೇಳೆ ಸೊಂಟ ಮುರಿತದಿಂದಾಗಿ ಕಳೆದೊಂದು ವಾರದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಮೈಸೂರಿನ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಎಸ್ ಜಾನಕಿಯವರು ಕಾಲು ಜಾರಿ ಬಿದ್ದು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದರು. ಈ ಹಿನ್ನೆಲೆ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕ್ಸಿತೆ ಪಡೆದು ಗುಣಮುಖರಾಗಿದ್ದಾರೆ. ಇನ್ನು ಜಾನಕಿಯವರನ್ನು ಪರೀಕ್ಷೆ ನಡೆಸಿದ ವೈದ್ಯರು ಸೊಂಟದ ಭಾಗದಲ್ಲಿ ಫ್ರಾಕ್ಚರ್ ಆಗಿರುವುದನ್ನು ದೃಢಪಡಿಸಿದ್ದರು. ತಕ್ಷಣ ಡಾ.ನಿತಿನ್ ಅವರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಇದೀಗ ಅವರು ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಟ್ರಾಜ್ ಆಗಿದ್ದಾರೆ.
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ ಜಾನಕಿ, ಕನ್ನಡ ಮಕ್ಕಳ ಕೃಪೆಯಿಂದ ನಾನು ಚೆನ್ನಾಗಿದ್ದೇನೆ. ಇಡೀ ಕನ್ನಡ ಮಕ್ಕಳು ನನ್ನ ಅತ್ಯಂತ ಪ್ರೀತಿಯಿಂದ ಕಾಣುತ್ತಾರೆ. ಅವರ ಪ್ರೀತಿಯಿಂದ ಚೆನ್ನಾಗಿಯೇ ಇರುತ್ತೇನೆ. ನಾನು ಸ್ನೇಹಿತರ ಮನೆಗೆ ಬಂದಿದ್ದೆ. ಅಲ್ಲಿ ಬಾಗಿಲ ಹೊಸಿಲು ದಾಟುವಾಗ ಜಾರಿ ಬಿದ್ದಿದ್ದೆ. ತುಂಬಾ ನೋವಾಯ್ತು ಆಗ. ನಂತರ ಆಸ್ಪತ್ರೆಗೆ ಕರೆದುಕೊಂಡು ಆಪರೇಷನ್ ಮಾಡಿದ್ದಾರೆ. ಇಲ್ಲಿ ಅದೇನೋ ಬದಲಾಯಿಸಿದ್ದಾರೆ. ಹಳೆದು ಮುರಿದುಹೋಯ್ತು ಎಂದು ನಡೆದ ಶಸ್ತ್ರಚಿಕಿತ್ಸೆ ಬಗ್ಗೆ ಸ್ವತಃ ಅವರೇ ವಿಶ್ಲೇಷಿಸಿದರು.
ನನಗೆ ಮೈಸೂರಿನ ಜೊತೆ ಜನ್ಮಂತರದ ಋಣ ಇದೆ. ಅದಕ್ಕೆ ಈ ಊರೆಂದರೇ ನನಗೆ ಇಷ್ಟ. ಡಿಸ್ಚಾರ್ಜ್ ಆಗಿ ಮೈಸೂರಿನಲ್ಲಿಯೇ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುತ್ತೇನೆ ಎಂದು ತಿಳಿಸಿದರು.