Don't Miss!
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- News BREAKING: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಸಾವು
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀಗಳ ಹುಟ್ಟುಹಬ್ಬಕ್ಕಾದರೂ ಭಾರತ ರತ್ನ ನೀಡಿ - ಲಿಂಗದೇವರು
ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಲಿಲ್ಲ ಎನ್ನುವ ಬಗ್ಗೆ ಸಾಕಷ್ಟು ಚರ್ಚೆ ಶುರುವಾಗಿದೆ. ಪ್ರಶಸ್ತಿ ನೀಡದ ಕೇಂದ್ರ ಸರ್ಕಾರದ ವಿರುದ್ಧ ಅನೇಕರು ಕಿಡಿಕಾರಿದ್ದಾರೆ.
ಇದೀಗ ನಿರ್ದೇಶಕ ಲಿಂಗದೇವರು ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ''ಶ್ರೀಗಳ ಹುಟ್ಟುಹಬ್ಬಕ್ಕಾದರು ಭಾರತ ರತ್ನ ನೀಡಿ, ಅನಾಹುತ ಸರಿಪಡಿಸಿ'' ಎಂದು ಮನವಿ ಮಾಡಿದ್ದಾರೆ.
ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ : ಬೆಂಬಲ ಸೂಚಿಸಿದ ಕಿಚ್ಚ
''ಒಂದು ಸಮಿತಿಯಿಂದ ಪ್ರಶಸ್ತಿಗೆ ಅರ್ಹರನ್ನ ಆಯ್ಕೆ ಮಾಡಿದ ನಂತರ ಸರ್ಕಾರ ಆ ಪ್ರಶಸ್ತಿ ಘೋಷಣೆ ಮಾಡುವುದು ಪರಂಪರೆ. ನಂತರ ಆ ಪ್ರಶಸ್ತಿ ಪಡೆದವರ ಬಗ್ಗೆ ಮತ್ತು ಪ್ರಕ್ರಿಯೆಯ ಬಗ್ಗೆ ಮಾತನಾಡುವುದು ಚರ್ಚೆಗೆ ಯೋಗ್ಯವಲ್ಲದ ಮಾತು. ಈ ಹಿನ್ನಲೆಯಲ್ಲಿ ಭಾರತ ರತ್ನ ಪ್ರಶಸ್ತಿ ಪಡೆದವರ ಹೋಲಿಕೆಗೆ ಮೀರಿದ ವ್ಯಕ್ತಿತ್ವ ನಮ್ಮ ಶ್ರೀಗಳು. ಏಪ್ರಿಲ್ ಒಂದನೇ ತಾರೀಖು ಶ್ರೀಗಳ ಹುಟ್ಟು ಹಬ್ಬದ ಪ್ರಯುಕ್ತ ಅವರ ನೆನಪಲ್ಲಿ ಭಾರತ ರತ್ನ ಪ್ರಶಸ್ತಿ ನೀಡಲಿ ಎನ್ನುವ ಒತ್ತಾಯ ಮಾಡೋಣ. ಆಗ ಮಾತ್ರ ಈಗ ಆಗಿರುವ ಅನಾಹುತ ತಪ್ಪಿಸಲು ಸಾಧ್ಯ'' ಎಂದು ಲಿಂಗದೇವರು ಬರೆದುಕೊಂಡಿದ್ದಾರೆ.
'ದೊಡ್ಮನೆ' ನಟರ ಮೇಲಿತ್ತು ಸಿದ್ಧಗಂಗಾ ಶ್ರೀಗಳ ಆಶೀರ್ವಾದ
'ನಾನು ಅವನಲ್ಲ ಅವಳು' ಸಿನಿಮಾದ ಖ್ಯಾತಿಯ ನಿರ್ದೇಶಕ ಲಿಂಗದೇವರು ತಮ್ಮ ಫೇಸ್ ಬುಕ್ ಖಾತೆಯ ಮೂಲಕ ವಿವಾದದ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀಗಳ ಹುಟ್ಟುಹಬ್ಬ ಏಪ್ರಿಲ್ 1 ರಂದು ಇದ್ದು, ಆ ದಿನವಾದರೂ ಭಾರತ ರತ್ನ ಸಿಗುತ್ತದೆಯೇ ಎನ್ನುವ ಆಸೆ ಅನೇಕರಲ್ಲಿ ಇದೆ.