Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ದೇಶಕ ಎಸ್.ನಾರಾಯಣ್ ಮುಂದಿನ ಚಿತ್ರ ಯಾವ್ದು?
ಇತ್ತೀಚೆಗೆ ಗಾಂಧಿನಗರದ ಕಡೆ ನಿರ್ದೇಶಕ ಎಸ್.ನಾರಾಯಣ್ ತುಂಬಾ ವಿರಳವಾಗಿದ್ದಾರೆ. ದುನಿಯಾ ವಿಜಯ್ ಗಾಗಿ 'ದಕ್ಷ' ಚಿತ್ರ ನಿರ್ದೇಶನ ಮಾಡಿದ ನಂತ್ರ ಬೇರೆ ಯಾವ ಚಿತ್ರವನ್ನೂ ಕಲಾಸಾಮ್ರಾಟ್ ಎಸ್.ನಾರಾಯಣ್ ಅನೌನ್ಸ್ ಮಾಡಿರಲಿಲ್ಲ.
ಮಗಳ ಮದುವೆಯಲ್ಲಿ ಬಿಜಿಯಾಗಿದ್ದ ಎಸ್.ನಾರಾಯಣ್ ಇದೀಗ ಹೊಸ ಪ್ರತಿಭೆಗಳಿಗೆ ಮಣೆ ಹಾಕುವುದಕ್ಕೆ ಮುಂದಾಗಿದ್ದಾರೆ. ವರದಿಗಳ ಪ್ರಕಾರ, ಹಿಟ್ ಸಿನಿಮಾ 'ಗೆಜ್ಜೆನಾದ' ಚಿತ್ರದ ನಿರ್ದೇಶಕ ವಿಜಯ್ ಕುಮಾರ್ ಪುತ್ರನನ್ನ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುವ ತಯಾರಿಯಲ್ಲಿ ತೊಡಗಿದ್ದಾರೆ ಎಸ್.ನಾರಾಯಣ್. [ಬೆಂಗಳೂರಲ್ಲಿ 3 ಲಕ್ಷ ಹಣ ಕಳೆದುಕೊಂಡ ಎಸ್.ನಾರಾಯಣ್]
ಇದೇ ತಿಂಗಳ ಕೊನೆಗೆ ಎಸ್.ನಾರಾಯಣ್ ನಿರ್ದೇಶನದ ಹೊಸ ಚಿತ್ರದ ಮುಹೂರ್ತ ನಡೆಯಲಿದ್ದು, ನಿರ್ದೇಶಕ ವಿಜಯ್ ಕುಮಾರ್ ಪುತ್ರನ ಪರಿಚಯ ಅಂದೇ ಆಗಲಿದೆ. [ತಮಿಳು 'ಪುಲಿ' ಬಾಲ ಹಿಡಿದು ನಿಂತ ಕಲಾ ಸಾಮ್ರಾಟ್]
'ಚೈತ್ರದ ಪ್ರೇಮಾಂಜಲಿ' ಖ್ಯಾತಿಯ ರಘುವೀರ್, ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಿದ್ದು ಇದೇ ಎಸ್.ನಾರಾಯಣ್ ರವರ ಸಿನಿಮಾದಿಂದ. ಎಸ್.ನಾರಾಯಣ್ ನಿರ್ದೇಶನದ ಹೊಸ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 'ಫಿಲ್ಮಿಬೀಟ್ ಕನ್ನಡ' ಓದುತ್ತಿರಿ.