Don't Miss!
- News ಕರ್ನಾಟಕದ ಮೇಲೆ ವರುಣನ ಕೃಪೆ: ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಸ್ ನಾರಾಯಣ್ ಗೆ ಮುಜುಗರ ತರಿಸಿದ ಪುತ್ರನ ಬೆಡ್ ರೂಮ್ ಡೈಲಾಗ್
ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಮತ್ತು ನಟ ಕಲಾ ಸಾಮ್ರಾಟ್ ಎಸ್ ನಾರಾಯಣ್ ಸದ್ಯ ತಮ್ಮ ಪುತ್ರ ಪವನ್ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮಗನ ಸಿನಿಮಾದಲ್ಲಿ ಅಪ್ಪ ನಟಿಸುತ್ತಿರುವುದು ವಿಶೇಷ.
ಪವನ್ ನಾರಾಯಣ್ ನಿರ್ದೇಶನದ ಚೊಚ್ಚಲ ಸಿನಿಮಾಗೆ ನವಮಿ 9.9.1999 ಎಂದು ಟೈಟಲ್ ಇಡಲಾಗಿದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಮಾತಿನ ಭಾಗದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕ್ಷನ್ ದೃಶ್ಯ ಮತ್ತು ಹಾಡಿನ ಚಿತ್ರೀಕರಣ ಬಾಕಿಯುಳಿಸಿಕೊಂಡಿರುವ ಸಿನಿಮಾತಂಡ ಕೆಲವೇ ದಿನಗಳಲ್ಲಿ ಚಿತ್ರೀಕರಣ ಮಾಡಿ ಮುಗಿಸಿ, ಪೋಸ್ಟ ಪ್ರೊಡಕ್ಷನ್ ಕೆಲಸದಲ್ಲಿ ನಿತರರಾಗಲಿದೆ.
ಸ್ಯಾಂಡಲ್ ವುಡ್ ಕಲಾ ಸಾಮ್ರಾಟ್ ಎಸ್. ನಾರಾಯಣ್ ಅವರಿಗೆ ಗೌರವ ಡಾಕ್ಟರೇಟ್
ಅಪ್ಪನಿಗೆ ಬೆಡ್ ರೂಮ್ ದೃಶ್ಯದ ಡೈಲಾಗ್ ವಿವರಿಸಿದ ಪುತ್ರ
ಪುತ್ರ ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾದಲ್ಲಿ ಎಸ್ ನಾರಾಯಣ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪನಿಗೆ ಬೆಡ್ ರೂಮ್ ದೃಶ್ಯದ ಡೈಲಾಗ್ ವಿವರಿಸುತ್ತಿರುವ ಪುತ್ರ ಪವನ್ ವಿಡಿಯೋ ವೈರಲ್ ಆಗಿದೆ. ಈ ದೃಶ್ಯದಲ್ಲಿ ಬರುವ ರೊಮ್ಯಾಂಟಿಕ್ ಡೈಲಾಗ್ ಬಗ್ಗೆ ಪುತ್ರ ಪವನ್ ವಿವರಣೆ ನೀಡುತ್ತಿರುವುದನ್ನು ಕೇಳಿ ಎಸ್ ನಾರಾಯಣ್ ದಂಗಾಗಿದ್ದಾರೆ.
ಮಗನ ಡೈಲಾಗ್ ಕೇಳಿ ದಂಗಾದ ಎಸ್ ನಾರಾಯಣ್
ಒಬ್ಬ ಮಗ ಅಪ್ಪನಿಗೆ ಈ ರೀತಿಯ ಡೈಲಾಗ್ ಹೇಳಿಕೊಡುತ್ತಿಯಲ್ಲ, ಇದು ನ್ಯಾಯವೇ, ಧರ್ಮವೇ, ನೀತಿಯೇ ಎಂದು ಮಗನಿಗೆ ತಮಾಷೆ ಮಾಡಿದ್ದಾರೆ. ಅಪ್ಪನ ಮಾತಿಗೆ ಪವನ್, ನೀವು ಕಲಾವಿದರು ಈಗ, ನಾನು ನಿರ್ದೇಶಕ ಎಂದು ಹೇಳಿ ಬೆಡ್ ರೂಮ್ ದೃಶ್ಯ ಚಿತ್ರೀಕರಣ ಮಾಡಿ ಮುಗಿಸಿದ್ದಾರೆ ನಿರ್ದೇಶಕ ಪವನ್ ನಾರಾಯಣ್.
ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಪುತ್ರ ಈಗ ನಿರ್ದೇಶಕ
ಯಶಸ್ ಅಭಿ ನಾಯಕ
ನವಮಿ 9.9.1999 ಸಿನಿಮಾದಲ್ಲಿ ನಾಯಕನಾಗಿ ಯಶಸ್ ಅಭಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೊದಲು ಪ್ರಸೆಂಟ್ ಪ್ರಪಂಚ ಜೀರೋ ಪರ್ಸೆಂಟ್ ಲವ್ ಹಾಗೂ ಕ್ರಿಟಿಕಲ್ ಕೀರ್ತನೆಗಳು ಸಿನಿಮಾಗಳಲ್ಲಿ ನಟಿಸಿದ್ದರು. ಯಶಸ್ ಗೆ ನಾಯಕಿಯಾಗಿ ನಂದಿನಿ ಗೌಡ ಕಾಣಿಸಿಕೊಂಡಿದ್ದಾರೆ.
ಚಿತ್ರದಲ್ಲಿದೆ ದೊಡ್ಡ ತಾರಾಬಳಗ
ತಂದೆಯ ಗರಡಿಯಲ್ಲಿ ಬೆಳೆದಿರುವ ನಿರ್ದೇಶಕ ಪವನ್ ಈ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದು, ಚೊಚ್ಚಲ ಚಿತ್ರದ ಬಗ್ಗೆ ಸಖತ್ ಎಕ್ಸಾಯಿಟ್ ಆಗಿದ್ದಾರೆ. ಚಿತ್ರದಲ್ಲಿ ಶಂಕರ್ ಅಶ್ವಥ್, ಪ್ರಕಾಶ್ ರಾವ್ ಸೇರಿದಂತೆ ಅನೇಕ ಕಲಾವಿದರಿದ್ದಾರೆ. ಚಿತ್ರಕ್ಕೆ ಗಿರಿದರ್ ದಿವಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.
Recommended Video
ಫಸ್ಟ್ ಲುಕ್ ರಿಲೀಸ್ ಆಗಿದೆ
ಇತ್ತೀಚಿಗಷ್ಟೆ ಅಂದರೆ ನವರಾತ್ರಿ ಸಮಯದಲ್ಲಿ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, 9 ಜನ ನಿರ್ದೇಶಕರು ಫಸ್ಟ್ ಲುಕ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಸದ್ಯ ಬಹುತೇಕ ಚಿತ್ರೀಕರಣ ಮುಗಿಸಿರುವ ನವಮಿ 9.9.1999 ಸಿನಿಮಾ ಮುಂದಿನ ಫೆಬ್ರವರಿಯಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಎಸ್ ನಾರಾಯಣ್ ಪುತ್ರನ ಚೊಚ್ಚಲ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಕನ್ನಡ ಚಿತ್ರಪ್ರಿಯರಲ್ಲಿದೆ.