Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಪುತ್ರ ಈಗ ನಿರ್ದೇಶಕ
ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಎರಡನೇ ಪುತ್ರ ಪವನ್ ನಾರಾಯಣ್ ನಿರ್ದೇಶಕರಾಗಿದ್ದಾರೆ. ಕಳೆದ ವರ್ಷದ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಪವನ್ ಈಗ ನಿರ್ದೇಶನದ ಕ್ಯಾಪ್ ಧರಿಸಿದ್ದಾರೆ.
ಕಳೆದ ವರ್ಷ ಮುತ್ತು ರತ್ನ ಸಿನಿಮಾ ಮೂಲಕ ಪವನ್ ಹೀರೋ ಆಗಿ ಬಣ್ಣಹಚ್ಚಿದ್ದರು. ಈ ಸಿನಿಮಾ ಈಗಾಗಲೇ ಸಂಪೂರ್ಣವಾಗಿದ್ದು, ಇನ್ನೇನು ರಿಲೀಸ್ ಆಗಬೇಕಿದೆ. ಈ ಮಧ್ಯೆ ಪವನ್ ನಿರ್ದೇಶನ ಮಾಡಲು ತಯಾರಿ ಮಾಡಿಕೊಂಡಿದ್ದರು, ನವಮಿ 9.9.1991 ಎಂಬ ಹಾರರ್ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ವಿಶೇಷ ಅಂದರೆ ಈಗ ನವಮಿ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಎಸ್ ನಾರಾಯಣ್, ಶಶಾಂಕ್, ರವಿ ಶ್ರೀವತ್ಸ, ಸಿಂಪಲ್ ಸುನಿ ಪವನ್ ಒಡೆಯರ್, ಎಪಿ ಅರ್ಜುನ್ ಸೇರಿದಂತೆ ಅನೇಕರು ನಿರ್ದೇಶಕರು ಪವನ್ ಹೊಸ ಸಿನಿಮಾದ ಟೈಟಲ್ ಪೋಸ್ಟರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.
ದಸರಾ ಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಚಿತ್ರದಲ್ಲಿ ನಾಯಕನಾಗಿ ಯಶಸ್ ಕಾಣಿಸಿಕೊಂಡಿದ್ದಾರೆ. ಈ ಮೊದಲು ಯಶಸ್ ಪ್ರಸೆಂಟ್ ಪ್ರಪಂಚ ಜೀರೋ ಪರ್ಸೆಂಟ್ ಲವ್ ಹಾಗೂ ಕ್ರಿಟಿಕಲ್ ಕೀರ್ತನೆಗಳು ಚಿತ್ರಗಳಲ್ಲಿ ನಟಿಸಿದ್ದರು.
Recommended Video
ಅಂದ್ಹಾಗೆ ನವಮಿ 9.9.1991 ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದೆಯಂತೆ. ಚಿತ್ರದಲ್ಲಿ ನಾಯಕಿಯಾಗಿ ನಂದಿನಿ ಗೌಡ ಕಾಣಿಸಿಕೊಂಡಿದ್ದಾರೆ. ಪುತ್ರನ ಸಿನಿಮಾದಲ್ಲಿ ಎಸ್ ನಾರಾಯಣ್ ಸಹ ಬಣ್ಣಹಚ್ಚಿದ್ದಾರೆ. ಇನ್ನು ಉಳಿದಂತೆ ಶಂಕರ್ ಅಶ್ವಥ್, ಓಂ ಪ್ರಕಾಶ್ ರಾವ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿದ್ದಾರೆ.