Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ಆಯ್ಕೆ ಆದ ನಿರ್ದೇಶಕ ಎಸ್.ನಾರಾಯಣ್
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಚಲನಚಿತ್ರ ರಂಗದಲ್ಲಿ ಸಾಧನೆ ಮಾಡಿದ ಸಾಧಕರಿಗೆ 2017 ನೇ ಕ್ಯಾಲೆಂಡರ್ ವರ್ಷದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಚಿತ್ರರಂಗದ ಸಮಗ್ರ ಬೆಳವಣಿಗೆಗೆ ಅಪೂರ್ವ ಕೊಡುಗೆ ನೀಡಿದ ಸಾಧಕರನ್ನು ಆಯ್ಕೆ ಮಾಡಲಾಗಿದೆ.
ಜೀವಿತಾವಧಿ ಸಾಧನೆಗೆ ನೀಡುವ ಡಾ.ರಾಜ್ ಕುಮಾರ್ ಪ್ರಶಸ್ತಿಗೆ ಹಿರಿಯ ಕಲಾವಿದೆ ಶ್ರೀಮತಿ ಲಕ್ಷ್ಮಿ, ಕನ್ನಡ ಚಿತ್ರರಂಗಕ್ಕೆ ಅಪೂರ್ವ ಕೊಡುಗೆ ನೀಡಿದ ನಿರ್ದೇಶಕರಿಗೆ ನೀಡುವ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ಎಸ್.ನಾರಾಯಣ್, ಮತ್ತು ಕನ್ನಡ ಚಲನಚಿತ್ರ ರಂಗದ ವಿವಿಧ ವಲಯಗಳಲ್ಲಿ ಅಪೂರ್ವ ಸಾಧನೆ ಮಾಡಿದ ಹಿರಿಯ ಚೇತನಗಳಿಗೆ ನೀಡುವ ಡಾ.ವಿಷ್ಣುವರ್ಧನ್ ಪ್ರಶಸ್ತಿಗೆ ನಿರ್ಮಾಪಕ ಜಿ.ಎನ್.ಲಕ್ಷ್ಮೀಪತಿ ರವರುಗಳನ್ನು ಆಯ್ಕೆ ಮಾಡಲಾಗಿದೆ.
2016 ರಾಜ್ಯ ಪ್ರಶಸ್ತಿ: 'ಅಮರಾವತಿ' ಅತ್ಯುತ್ತಮ ಚಿತ್ರ, ಅಚ್ಯುತ್ ಕುಮಾರ್ ಅತ್ಯುತ್ತಮ ನಟ
ಈ ಪ್ರಶಸ್ತಿಗಳು ತಲಾ 50 ಗ್ರಾಂ ಚಿನ್ನದ ಪದಕ ಹಾಗೂ ರೂ. 2.00 ಲಕ್ಷ ರೂಪಾಯಿ ನಗದು ಬಹುಮಾನ ಒಳಗೊಂಡಿದೆ.
2017 ನೇ ಕ್ಯಾಲೆಂಡರ್ ವರ್ಷದ ಜೀವಮಾನ ಸಾಧನೆ ಪ್ರಶಸ್ತಿ ಆಯ್ಕೆ ಮಾಡಲು ಅಧ್ಯಕ್ಷರನ್ನಾಗಿ ನಟ ಶ್ರೀ ಜೆ.ಕೆ.ಶ್ರೀನಿವಾಸ ಮೂರ್ತಿ ಹಾಗೂ ಛಾಯಾಗ್ರಾಹಕ ಬಿ.ಎಸ್.ಬಸವರಾಜು, ನಟಿ ಹೇಮಾ ಚೌಧರಿ, ಸುರೇಶ್ ಅರಸ್ ಮತ್ತು ಹುಣಸವಾಡಿ ರಾಜನ್ ಸಮಿತಿ ಸದಸ್ಯರುಗಳಾಗಿದ್ದರು.
2016ನೇ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸಮಿತಿಯ ಸದಸ್ಯರು ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ತಮ್ಮ ವರದಿ ಸಲ್ಲಿಸಿದರು.