Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೀರೋ ಆಗಿ ಲಾಂಚ್ ಆದ ಎಸ್ ನಾರಾಯಣ್ ಎರಡನೇ ಪುತ್ರ ಪವನ್
ನಿರ್ದೇಶಕ ಎಸ್ ನಾರಾಯಣ್ ಮೊದಲ ಮಗ ಪಂಕಜ್ ಈಗಾಗಲೇ ಸಿನಿಮಾ ಮಾಡುತ್ತಿದ್ದಾರೆ. ಇದೀಗ ಅವರ ಎರಡನೇ ಮಗ ಪವನ್ ಕೂಡ ಚಿತ್ರರಂಗ ಪ್ರವೇಶ ಮಾಡಿದ್ದಾರೆ.
ಪವನ್ ನಾರಾಯಣ್ ಹೀರೋ ಆಗಿ ಲಾಂಚ್ ಆಗಿದ್ದಾರೆ. ಅವರ ಮೊದಲ ಸಿನಿಮಾ ಇಂದು (ಡಿಸೆಂಬರ್ 2) ಲಾಂಚ್ ಆಗಿದೆ. ಪವನ್ ಮೊದಲ ಸಿನಿಮಾಗೆ 'ಮುತ್ತು ರತ್ನ' ಎಂದು ಶೀರ್ಷಿಕೆ ಇಡಲಾಗಿದೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸಿನಿಮಾ ಶುಭಾರಂಭವಾಗಿದೆ.
ಡಿ-ಬಾಸ್ ಅವರ ಈ ಗುಣ ಎಲ್ಲರಲ್ಲೂ ಇರಬೇಕು: 'ಒಡೆಯ'ನ ಬಗ್ಗೆ ಪಂಕಜ್ ಮಾತು
ನಟ ಶ್ರೀಮುರಳಿ ಹಾಗೂ ನಟಿ, ಸಂಸದೆ ಸುಮಲತಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪವನ್ ನಾರಾಯಣ್ ರಿಗೆ ಶುಭ ಹಾರೈಸಿದರು. ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ವಿಶ್ ಮಾಡಿದರು.
'ಮುತ್ತು ರತ್ನ' ಸಿನಿಮಾವನ್ನು ಶ್ರೀಕಾಂತ್ ಹುಣಸೂರು ನಿರ್ದೇಶನ ಮಾಡುತ್ತಿದ್ದಾರೆ. ಅಂಜನಾ ಗೌಡ ನಾಯಕಿ ಆಗಿದ್ದಾರೆ. ಇದು ನೈಜ ಘಟನೆ ಆಧಾರಿತ ಸಿನಿಮಾವಾಗಿದೆ. ಪವನ್ ಗೆ ತಕ್ಕ ಕಥೆಯನ್ನು ಶ್ರೀಕಾಂತ್ ಹುಣಸೂರು ಸಿದ್ಧ ಮಾಡಿಕೊಂಡಿದ್ದಾರಂತೆ.
ತಂದೆಯೇ ದೊಡ್ಡ ನಿರ್ದೇಶಕ ಆಗಿರುವ ಕಾರಣ ಪವನ್ ಚಿತ್ರರಂಗದ ಬಗ್ಗೆ ತಿಳಿದುಕೊಂಡಿದ್ದಾರೆ. ತಂದೆಯ ಜೊತೆಗೆ 'ದಕ್ಷ' ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ರಿಮೇಕ್ ರಾಜರು: ಇವರು ಕನ್ನಡದ ರಿಮೇಕ್ ಡೈರೆಕ್ಟರ್ ಗಳು
ಅಂದಹಾಗೆ, 2015ರಲ್ಲಿಯೇ ಪವನ್ ಚಿತ್ರರಂಗಕ್ಕೆ ಬರುತ್ತಾರೆ ಎನ್ನುವ ಸುದ್ದಿ ಇತ್ತು. ಈ ಸಿನಿಮಾವನ್ನು ಆರ್ ಚಂದ್ರು ನಿರ್ದೇಶನ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ, ನಾಲ್ಕು ವರ್ಷಗಳ ನಂತರ ಪವನ್ ಇಂಡಸ್ಟ್ರಿಗೆ ಬಂದಿದ್ದಾರೆ.