Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ ಡೌನ್ ನಡುವೆಯೂ ಕಿತ್ತಾಟ: ಜೈ ಜಗದೀಶ್ ವಿರುದ್ಧ ಪೊಲೀಸರಿಗೆ ಸಾ.ರಾ ಗೋವಿಂದು ದೂರು
ಲಾಕ್ ಡೌನ್ ನಡುವೆ ಸಿನಿಮಾ ಚಿತ್ರೀಕರಣ ಸಂಬಂಧಿತ ಚಟುವಟಿಕೆಗಳು ಸ್ಥಗಿತಗೊಂಡು ಎರಡು ತಿಂಗಳಾಗಿವೆ. ಸಿನಿಮಾ ಕಾರ್ಮಿಕರಿಗೆ ಸಹಾಯ ಮಾಡುವಂತಹ ಕಾರ್ಯಗಳಷ್ಟೇ ನಡೆಯುತ್ತಿದೆ. ಸೆಲೆಬ್ರಿಟಿಗಳು ಜನರಿಗೆ ಸಂದೇಶ ನೀಡುತ್ತಾ, ಮನೆಯಲ್ಲಿಯೇ ಕುಳಿತು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಆದರೆ ಚಿತ್ರರಂಗದ ಇತರೆ ಜಂಜಾಟಗಳು ಮಾತ್ರ ನಿಂತಿಲ್ಲ.
Recommended Video
ಹಿರಿಯ ನಿರ್ಮಾಪಕ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಹಾಗೂ ಹಿರಿಯ ನಟ, ನಿರ್ಮಾಪಕ ಜೈ ಜಗದೀಶ್ ನಡುವೆ ಜಗಳ ನಡೆದಿದ್ದು, ಇದು ಪೊಲೀಸರ ತನಕವೂ ಹೋಗಿದೆ. ಜೈ ಜಗದೀಶ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಾ.ರಾ. ಗೋವಿಂದು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಮುಂದೆ ಓದಿ...
ಸಾ.ರಾ ಗೋವಿಂದು-ಜೈ ಜಗದೀಶ್ ಜಗಳ?
ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಸಿನಿಮಾ ಕಾರ್ಮಿಕರಿಗೆ ದಿನಸಿ ಹಂಚಿಕೆ ಮತ್ತು ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ವಿಚಾರವಾಗಿ ಕಳೆದ ಮಂಗಳವಾರ ಇಬ್ಬರು ಪರಸ್ಪರ ಕೈ ಕೈ ಮಿಲಾಯಿಸಿದ್ದರು. ಸ್ಥಳದಲ್ಲಿದ್ದ ಇತರರು ಅವರ ಜಗಳ ಬಿಡಿಸಿ ಸಮಾಧಾನ ಪಡಿಸಿದ್ದಾರೆ ಎನ್ನಲಾಗಿದೆ.
ಆಡಿಯೋ ಕ್ಲಿಪ್ ವೈರಲ್
ವಾಣಿಜ್ಯಮಂಡಳಿಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಸಾ.ರಾ. ಗೋವಿಂದು ಕೆಲವು ಕೆಲಸಗಳನ್ನು ಮಾಡಿದ್ದರು. ಈ ಬಗ್ಗೆ ಜೈ ಜಗದೀಶ್ ಇತ್ತೀಚೆಗೆ ಟೀಕೆ ಮಾಡಿದ್ದರು. ಸಾ.ರಾ. ಗೋವಿಂದು ಬಗ್ಗೆ ಅವರು ಅವಾಚ್ಯವಾಗಿ ಮಾತನಾಡಿದ್ದರು ಎನ್ನಲಾದ ಆಡಿಯೋ ಕ್ಲಿಪ್ ಒಂದು ಹರಿದಾಡಿತ್ತು.
ದೂರು ನೀಡಿದ ಸಾ.ರಾ. ಗೋವಿಂದು
ಜೈ ಜಗದೀಶ್ ಅವರ ವರ್ತನೆಯಿಂದ ಕೋಪಗೊಂಡಿರುವ ಸಾ.ರಾ. ಗೋವಿಂದು, ಪೊಲೀಸ್ ಆಯುಕ್ತ ಭಾಸ್ಕರ ರಾವ್ ಅವರಿಗೆ ದೂರು ನೀಡಿದ್ದಾರೆ. ಜೈ ಜಗದೀಶ್ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಅಬಾಚ್ಯ ಶಬ್ಧಗಳಿಂದ ನಿಂದನೆ
'ಜೈ ಜಗದೀಶ್ ಅವರು ನನ್ನ ಹಾಗೂ ನನ್ನ ಸ್ನೇಹಿತರ ವಿರುದ್ಧ ಉದ್ದೇಶಪೂರ್ವಕವಾಗಿ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ, ತೀರಾ ಕೆಳಮಟ್ಟದಲ್ಲಿ ಮಾತನಾಡಿದ್ದಾರೆ. ಬಾಯಿಗೆ ಬಂದಂತೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ. ಈ ಸಂಭಾಷಣೆಯನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ನನ್ನ ತೇಜೋವಧೆ ಮಾಡಲಾಗಿದೆ' ಎಂದು ಆರೋಪಿಸಿದ್ದಾರೆ.
ಮಾನಸಿಕ ನೆಮ್ಮದಿ ಹಾಳು ಮಾಡಿದ್ದಾರೆ
'ಇದರಿಂದ ನನ್ನ ಕುಟುಂಬದವರು, ಹಿತೈಷಿಗಳು ಮತ್ತು ಸಹೋದ್ಯೋಗಿಗಳು ಮಾನಸಿಕವಾಗಿ ಜರ್ಝರಿತರಾಗಿದ್ದಾರೆ. ನಾನು ಇಷ್ಟ ವರ್ಷ ಸಂಪಾದಿಸಿದ ಮಾನ ಮರ್ಯಾದೆ ಹಾಳಾಗಿದೆ. ಅವರು ಉದ್ದೇಶಪೂರ್ವಕವಾಗಿ ನನ್ನ ತೇಜೋವಧೆ, ಮಾನನಷ್ಟ, ಮಾನಸಿಕ ನೆಮ್ಮದಿ ಹಾಳು ಮಾಡಿದ್ದಾರೆ. ಅದಕ್ಕಾಗಿ ಅವರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು' ಎಂದು ದೂರಿನಲ್ಲಿ ಬರೆದಿದ್ದಾರೆ. ಪತ್ರದ ಜತೆಗೆ ಆಡಿಯೋ ಕ್ಲಿಪ್ ಅನ್ನು ಕೂಡ ನೀಡಿದ್ದಾರೆ.