Don't Miss!
- Automobiles ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- News Karnataka Lok Sabha Election 2024: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧ!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿಕಾಂತ್ ಅವರನ್ನ ಭೇಟಿ ಮಾಡಿದ ಸಾರಾ ಗೋವಿಂದು
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾರಾ ಗೋವಿಂದು ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನ ಭೇಟಿ ಮಾಡಿದ್ದಾರೆ. ಸಾರಾ ಗೋವಿಂದು ಅವರು ರಜನಿಯನ್ನ ಯಾಕೆ ಭೇಟಿ ಮಾಡಿದರು ಎಂಬುದು ಕಾಡುವ ಪ್ರಶ್ನೆ. ಸಾರಾ ಗೋವಿಂದು ಮಗನ ಮದುವೆಗೆ ರಜನಿಯನ್ನ ಆಹ್ವಾನಿಸಲು ಚೆನ್ನೈನಲ್ಲಿರುವ ರಜನಿ ನಿವಾಸಕ್ಕೆ ಸಾರಾ ಗೋವಿಂದು ಮಂಗಳವಾರ ಹೋಗಿದ್ದರು.
ಸಾರಾ ಗೋವಿಂದು ಅವರ ಮಗ ಅನೂಪ್ ಸಾರಾ ಗೋವಿಂದು ಹಾಗೂ ಮೇಘನಾ ಅವರ ಮದುವೆ ಇದೇ ಫೆಬ್ರವರಿ 19 ರಂದು ಬೆಂಗಳೂರಿನ ಯಲಹಂಕದಲ್ಲಿ ನಡೆಯಲಿದ್ದು, ಕನ್ನಡ ಚಿತ್ರರಂಗ ಸೇರಿದಂತೆ ತಮಿಳು, ತೆಲುಗಿನ ಹಲವು ಸಿನಿಮಾ ಕಲಾವಿದರು ಮದುವೆಗೆ ಭಾಗಿಯಾಗಲಿದ್ದಾರೆ.
'2.0', 'ಕಾಲ' ನಂತರ ರಜನಿಕಾಂತ್ ಕೊನೆಯ ಚಿತ್ರ ಘೋಷಣೆ
ಸಾರಾ ಗೋವಿಂದು ಅವರ ಆಹ್ವಾನವನ್ನ ಸ್ವೀಕರಿಸಿರುವ ರಜನಿಕಾಂತ್, ಮದುವೆಗೆ ಖಂಡಿತಾ ಬರುತ್ತೇನೆ ಎಂದು ಭರವಸೆಯನ್ನೂ ಕೊಟ್ಟಿದ್ದಾರೆ.
ರಜನಿಕಾಂತ್ ಮಾತ್ರವಲ್ಲದೇ, ತಮಿಳು ನಟ ಶರತ್ ಕುಮಾರ್, ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ, ಸೋನಿಯಾ ಅಗರ್ ವಾಲ್ ಸೇರಿದಂತೆ ಹಲವು ಹಿರಿಯ ನಟರನ್ನ ಮದುವೆಗೆ ಆಹ್ವಾನಿಸಲಾಗಿದೆ.