ಚಿತ್ರರಂಗದವರಿಗೆ ಕೋವಿಡ್ ಲಸಿಕೆ ಒದಗಿಸಲು ಕೆಎಫ್ಸಿಸಿ ನಿಯೋಗದ ಮನವಿ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷ ನಾಗಣ್ಣ, ನಿರ್ಮಾಪಕ ಸಾರಾ ಗೋವಿಂದು, ಖಜಾಂಚಿ ವೆಂಕಟೇಶ್ ಅವರ ನಿಯೋಗ ಇಂದು (ಮೇ 17) ಸಚಿವ ಸುಧಾಕರ್ ಅವರನ್ನು ಭೇಟಿ ಮಾಡಿದೆ.
ಚಿತ್ರರಂಗದವರಿಗೆ ಕೋವಿಡ್ ಲಸಿಕೆ ಒದಗಿಸಿ ಎಂದು ಸಚಿವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಸುಧಾಕರ್ ಅವರನ್ನು ಭೇಟಿ ಮಾಡಿರುವ ಫೋಟೋಗಳು ಫಿಲ್ಮಿಬೀಟ್ಗೆ ಲಭ್ಯವಾಗಿದೆ.
18 ವರ್ಷ ಮೇಲ್ಪಟ್ಟವರಿಗೆ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಚಿತ್ರರಂಗದಿಂದ ಈಗಾಗಲೇ ಕೆಲವು ಸ್ಟಾರ್ ಕಲಾವಿದರು ಲಸಿಕೆ ಪಡೆದುಕೊಂಡಿದ್ದಾರೆ.

ಇದೀಗ, ನಿರ್ದೇಶಕ, ನಿರ್ಮಾಪಕ, ಕಾರ್ಮಿಕರ ಹಾಗೂ ಇತರೆ ಕಲಾವಿದರಿಗಾಗಿ ಪ್ರತ್ಯೇಕವಾಗಿ ಕೋವಿಡ್ ಲಸಿಕೆ ನೀಡುವ ಬಗ್ಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
Recommended Video
'ಮದಗಜ' ಚಿತ್ರದ ನಾಯಕ ಶ್ರೀಮುರಳಿ, ನಟಿ ಆಶಿಕಾ ರಂಗನಾಥ್, ನಿರ್ದೇಶಕ ಮಹೇಶ್ ಕುಮಾರ್ ಕೋವಿಡ್ ಲಸಿಕೆ ಪಡೆದಿದ್ದರು. ಸೂಪರ್ ಸ್ಟಾರ್ ರಜನಿಕಾಂತ್, ನಟಿ ರಮ್ಯಾಕೃಷ್ಣ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಸೇರಿದಂತೆ ಹಲವು ಸಿನಿಮಾ ಕಲಾವಿದರು ಲಸಿಕೆ ಹಾಕಿಸಿಕೊಂಡಿದ್ದಾರೆ.


Click it and Unblock the Notifications











