Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಎಫ್ಸಿಸಿ'ಗೆ ಮತ್ತೊಂದು ವರ್ಷ ಸಾ.ರಾ.ಗೋವಿಂದು ಅಧ್ಯಕ್ಷ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಸಾ.ರಾ.ಗೋವಿಂದು ಅವರೇ ಇನ್ನೊಂದು ವರ್ಷದ ಅವಧಿಗೆ ಮುಂದುವರೆಯಲಿ ಎಂದು ಚಿತ್ರರಂಗದ ಪ್ರಮುಖರ ಗುಂಪು ತೀರ್ಮಾನ ಕೈಗೊಂಡಿದೆ.
ಒಂದು ವರ್ಷ ಕಳೆದರು ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿಲ್ಲ ಎಂಬ ಕಾರಣದಿಂದ ನಿರ್ಮಾಪಕ ಭಾಮಾ ಹರೀಶ್ ಮತ್ತು ಅವರ ತಂಡ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಸಾ.ರಾ.ಗೋವಿಂದು ರವರ ಅಧಿಕಾರ ಅವಧಿ ಮುಗಿದರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುತ್ತಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ(ಮೇ 26) ರಾಕ್ ಲೈನ್ ವೆಂಕಟೇಶ್, ಕೆ ಮಂಜು, ಜಯಣ್ಣ, ನಟ ಜಗ್ಗೇಶ್ ಸೇರಿದಂತೆ ಹಲವರು ಚಲನಚಿತ್ರ ವಾಣಿಜ್ಯ ಮಂಡಳಿ ಆವರಣದಲ್ಲಿ ಸಭೆ ನಡೆಸಿ ಸಾ.ರಾ.ಗೋವಿಂದು ಅವರೇ ಇನ್ನೊಂದು ಅವಧಿಗೆ ಅಧ್ಯಕ್ಷರಾಗಿ ಮುಂದುವರೆಯಲು ಎಂಬ ನಿರ್ಣಯ ತೆಗೆದುಕೊಂಡಿದ್ದಾರೆ.
ಸಭೆಯ ನಂತರ ಮಾತನಾಡಿದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, 'ಸಾ.ರಾ.ಗೋವಿಂದು ರವರ ಅಧ್ಯಕ್ಷತೆಯಲ್ಲಿ ಸಾಕಷ್ಟು ಉತ್ತಮ ಕೆಲಸಗಳು ಆಗಿವೆ. ಅವರಿಂದ ಇಂತಹ ಮತ್ತಷ್ಟು ಉತ್ತಮ ಕೆಲಸಗಳು ಆಗಬೇಕಿದೆ. ಆದ್ದರಿಂದ ಅವರೇ ಅಧ್ಯಕ್ಷರಾಗಿ ಮುಂದುವರೆಯಲಿ' ಎಂದು ಹೇಳಿ ಚಿತ್ರರಂಗದ ವತಿಯಿಂದ ಸಾ.ರಾ.ಗೋವಿಂದು ಅವರೇ ಅಧ್ಯಕ್ಷರಾಗಿ ಮುಂದುವರೆಯಬೇಕಾಗಿದೆ ಎಂದು ಮನವಿ ಪತ್ರ ಸಲ್ಲಿಸಿದರು.
ಚಿತ್ರಕೃಪೆ:ಚಿತ್ರಲೋಕ.ಕಾಂ
ಚಲನಚಿತ್ರ ವಾಣಿಜ್ಯ ಮಂಡಳಿಯ ಇತರೆ ಅಂಗ ಸಂಸ್ಥೆಗಳು ಸಾ.ರಾ.ಗೋವಿಂದು ಅವರೇ ಅಧ್ಯಕ್ಷರಾಗಿ ಮುಂದುವರೆಯಲು ಬೆಂಬಲ ಸೂಚಿಸಿವೆ. ಆದರೇ ಜೂನ್ 16 ರಂದು ಸರ್ವ ಸದಸ್ಯರ ಸಭೆ ನಡೆಯಲಿದ್ದು ಅಂದು ಏನು ತೀರ್ಮಾನ ಕೈಗೊಳ್ಳಲಾಗುತ್ತದೋ ಅದರ ಆಧಾರದ ಮೇಲೆ ಸಾ.ರಾ.ಗೋವಿಂದು ರವರು ಅಧ್ಯಕ್ಷರಾಗಿ ಉಳಿಯುತ್ತಾರೋ ಇಲ್ಲವೋ ಎಂಬುದು ನಿರ್ಧಾರವಾಗಲಿದೆ.