Don't Miss!
- Automobiles ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- News Zero Shadow Day: ನಾಳೆ ಬುಧವಾರ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ; ಸಮಯ, ವಿವರ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಎಫ್ಸಿಸಿ'ಗೆ ಮತ್ತೊಂದು ವರ್ಷ ಸಾ.ರಾ.ಗೋವಿಂದು ಅಧ್ಯಕ್ಷ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಸಾ.ರಾ.ಗೋವಿಂದು ಅವರೇ ಇನ್ನೊಂದು ವರ್ಷದ ಅವಧಿಗೆ ಮುಂದುವರೆಯಲಿ ಎಂದು ಚಿತ್ರರಂಗದ ಪ್ರಮುಖರ ಗುಂಪು ತೀರ್ಮಾನ ಕೈಗೊಂಡಿದೆ.
ಒಂದು ವರ್ಷ ಕಳೆದರು ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿಲ್ಲ ಎಂಬ ಕಾರಣದಿಂದ ನಿರ್ಮಾಪಕ ಭಾಮಾ ಹರೀಶ್ ಮತ್ತು ಅವರ ತಂಡ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಸಾ.ರಾ.ಗೋವಿಂದು ರವರ ಅಧಿಕಾರ ಅವಧಿ ಮುಗಿದರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುತ್ತಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ(ಮೇ 26) ರಾಕ್ ಲೈನ್ ವೆಂಕಟೇಶ್, ಕೆ ಮಂಜು, ಜಯಣ್ಣ, ನಟ ಜಗ್ಗೇಶ್ ಸೇರಿದಂತೆ ಹಲವರು ಚಲನಚಿತ್ರ ವಾಣಿಜ್ಯ ಮಂಡಳಿ ಆವರಣದಲ್ಲಿ ಸಭೆ ನಡೆಸಿ ಸಾ.ರಾ.ಗೋವಿಂದು ಅವರೇ ಇನ್ನೊಂದು ಅವಧಿಗೆ ಅಧ್ಯಕ್ಷರಾಗಿ ಮುಂದುವರೆಯಲು ಎಂಬ ನಿರ್ಣಯ ತೆಗೆದುಕೊಂಡಿದ್ದಾರೆ.
ಸಭೆಯ ನಂತರ ಮಾತನಾಡಿದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, 'ಸಾ.ರಾ.ಗೋವಿಂದು ರವರ ಅಧ್ಯಕ್ಷತೆಯಲ್ಲಿ ಸಾಕಷ್ಟು ಉತ್ತಮ ಕೆಲಸಗಳು ಆಗಿವೆ. ಅವರಿಂದ ಇಂತಹ ಮತ್ತಷ್ಟು ಉತ್ತಮ ಕೆಲಸಗಳು ಆಗಬೇಕಿದೆ. ಆದ್ದರಿಂದ ಅವರೇ ಅಧ್ಯಕ್ಷರಾಗಿ ಮುಂದುವರೆಯಲಿ' ಎಂದು ಹೇಳಿ ಚಿತ್ರರಂಗದ ವತಿಯಿಂದ ಸಾ.ರಾ.ಗೋವಿಂದು ಅವರೇ ಅಧ್ಯಕ್ಷರಾಗಿ ಮುಂದುವರೆಯಬೇಕಾಗಿದೆ ಎಂದು ಮನವಿ ಪತ್ರ ಸಲ್ಲಿಸಿದರು.
ಚಿತ್ರಕೃಪೆ:ಚಿತ್ರಲೋಕ.ಕಾಂ
ಚಲನಚಿತ್ರ ವಾಣಿಜ್ಯ ಮಂಡಳಿಯ ಇತರೆ ಅಂಗ ಸಂಸ್ಥೆಗಳು ಸಾ.ರಾ.ಗೋವಿಂದು ಅವರೇ ಅಧ್ಯಕ್ಷರಾಗಿ ಮುಂದುವರೆಯಲು ಬೆಂಬಲ ಸೂಚಿಸಿವೆ. ಆದರೇ ಜೂನ್ 16 ರಂದು ಸರ್ವ ಸದಸ್ಯರ ಸಭೆ ನಡೆಯಲಿದ್ದು ಅಂದು ಏನು ತೀರ್ಮಾನ ಕೈಗೊಳ್ಳಲಾಗುತ್ತದೋ ಅದರ ಆಧಾರದ ಮೇಲೆ ಸಾ.ರಾ.ಗೋವಿಂದು ರವರು ಅಧ್ಯಕ್ಷರಾಗಿ ಉಳಿಯುತ್ತಾರೋ ಇಲ್ಲವೋ ಎಂಬುದು ನಿರ್ಧಾರವಾಗಲಿದೆ.