Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ಸುದ್ದಿಯಾದ ಕನ್ನಡದ ನಟಿ ಪವಿತ್ರ ಗೌಡ
Recommended Video
ಕನ್ನಡದ ನಟಿ ಪವಿತ್ರ ಗೌಡ ಈಗ ಮತ್ತೆ ಸುದ್ದಿಯಲ್ಲಿ ಇದ್ದಾರೆ. ಕಾರಣ ಅವರ ಹೊಸ ಸಿನಿಮಾ ಇದೇ ತಿಂಗಳು ಬಿಡುಗಡೆಯಾಗುತ್ತಿದೆ. ಪವಿತ್ರ ಗೌಡ ಅಭಿನಯಿಸಿರುವ 'ಸಾಗುವ ದಾರಿಯಲಿ' ಸಿನಿಮಾ ಏಪ್ರಿಲ್ ನಲ್ಲಿ ತೆರೆಗೆ ಬರುತ್ತಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ.ಗೋವಿಂದು ಅವರ ಪುತ್ರ ಅನೂಪ್ ಸಾ.ರಾ.ಗೋವಿಂದು ಚಿತ್ರದ ನಾಯಕರಾಗಿದ್ದಾರೆ.
ವಾಸ್ತವವಾಗಿ ಈ ಸಿನಿಮಾ ಅನೇಕ ವರ್ಷಗಳ ಹಿಂದೆಯೇ ಬಿಡುಗಡೆಯಾಗಬೇಕಿತ್ತು. ಆದರೆ ಅಂತೂ ಸಿನಿಮಾ ಈಗ ರಿಲೀಸ್ ಆಗುತ್ತಿದೆ. 'ಸಾಗುವ ದಾರಿಯಲಿ' ಬಂದ ಎಲ್ಲ ಅಡೆತಡೆಗಳನ್ನು ಎದುರಿಸಿ ಈ ಸಿನಿಮಾ ಚಿತ್ರಮಂದಿರ ತಲುಪಿದೆ. ಶಿವಶಂಕರ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಅವರ ಬದುಕಿನಲ್ಲಿ ಆದ ಘಟನೆಗಳನ್ನು ಇಟ್ಟುಕೊಂಡು ಕಥೆ ಮಾಡಿದ್ದಾರೆ. 2011 ನಡೆದ ನೈಜ ಘಟನೆಯ ಮೇಲೆ ಸಿನಿಮಾ ಸಾಗುತ್ತದೆ.
ದರ್ಶನ್ ಕುಟುಂಬದ ಜೊತೆ ಪವಿತ್ರ ಪೋಟೋ ವೈರಲ್
ಸೈನಿಕನ ಪಾತ್ರದಲ್ಲಿ ನಟ ದೇವರಾಜ್ ಕಾಣಿಸಿಕೊಂಡಿದ್ದಾರೆ. ಸಾಧುಕೋಕಿಲ, ಬುಲೇಟ್ ಪ್ರಕಾಶ್, ರಂಗಾಯಣ ರಘು, ಮಜಾ ಟಾಕೀಸ್ ಪವನ್, ಜಹಂಗೀರ್ ಚಿತ್ರದಲ್ಲಿ ನಗಿಸಲಿದ್ದಾರೆ. ಶರಣ್ ಲೋಹಿತಾಶ್ವ ಪೊಲೀಸ್ ಪಾತ್ರವನ್ನು ನಿರ್ವಹಿಸಿದ್ದಾರೆ. 'ಸಾಗುವ ದಾರಿಯಲಿ' ಸಿನಿಮಾ ಏಪ್ರಿಲ್ 20ಕ್ಕೆ ರಾಜ್ಯಾದಂತ್ಯ ಬಿಡುಗಡೆಯಾಗುತ್ತಿದೆ.
ದರ್ಶನ್ ಮತ್ತು ಪವಿತ್ರ ಗೌಡ ಬಗ್ಗೆ ಅಚ್ಚರಿ ಬೆಳವಣಿಗೆ.! ಯಾಕ್ಹೀಗಾಯ್ತು.?