Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ಸಚಿನ್ ತೆಂಡೂಲ್ಕರ್ ಚಾಲನೆ
ಈ ಬಾರಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಹಲವು ವಿಶೇಷಗಳಿಂದ ಕೂಡಿದೆ. ಈ ಹಿಂದಿನ ಆವೃತ್ತಿಗಳಿಗೆ ಹೋಲಿಸಿದರೆ ನಾಲ್ಕನೇ ಆವೃತ್ತಿಯನ್ನು ಇನ್ನಷ್ಟು ವರ್ಣರಂಜಿತವಾಗಿ ನಡೆಸಲು ಉದ್ದೇಶಿಸಲಾಗಿದೆ. ನಾಲ್ಕನೆ ಆವೃತ್ತಿಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಶುಕ್ರವಾರ (ಡಿಸೆಂಬರ್ 20) ಚಾಲನೆ ನೀಡಿದರು.
ಈ ವರ್ಣರಂಜಿತ ಉದ್ಘಾಟನಾ ಸಮಾರಂಭಕ್ಕೆ ಬಾಲಿವುಡ್ ನಟ ಸಲ್ಮಾನ್ ಖಾನ್ ಸೇರಿದಂತೆ ವಿವಿಧ ಭಾಷೆಯ ಚಿತ್ರರಂಗದ 200ಕ್ಕೂ ಹೆಚ್ಚು ಕಲಾವಿದರು ಉಪಸ್ಥಿತರಿದ್ದರು. ಮುಂಬೈನ ಗ್ರ್ಯಾಂಡ್ ಹ್ಯಾತ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮಕ್ಕೆ ಹಲವಾರು ತಾರೆಗಳು ಇನ್ನಷ್ಟು ಬಣ್ಣ ತುಂಬಿದರು.
'ಕಾಮಿಡಿ ನೈಟ್ಸ್' ಕಾರ್ಯಕ್ರಮದ ಕಪಿಲ್ ಶರ್ಮಾ ಹಾಗೂ ಗಾಯಕಿ ಉಷಾ ಉಥುಪ್ ಕಾರ್ಯಕ್ರವನ್ನು ನಿರೂಪಿಸಿದರು. ಈ ಬಾರಿಯೂ ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಸುದೀಪ್ ನಾಯಕತ್ವ ವಹಿಸುತ್ತಿದ್ದಾರೆ.
ಎಲ್ಲವೂ ಸುಸೂತ್ರವಾಗಿ ನಡೆದರೆ 2014ರ ಜನವರಿ ಕೊನೆಗೆ ಆಟ ಶುರುವಾಗಲಿದೆ. ಫೈನಲ್ ಮ್ಯಾಚ್ ಫೆಬ್ರವರಿ ಕೊನೆಗೆ ನಡೆಯಲಿದೆ. ಇದೊಂದು ನಾನ್ ಪ್ರೊಫೆಷನಲ್ ಪುರುಷರ ಕ್ರಿಕೆಟ್ ಮ್ಯಾಚ್ ಅನ್ನಿಸಿಕೊಂಡಿದ್ದರೂ, ನಾವೂ ಯಾರಿಗೂ ಕಮ್ಮಿ ಇಲ್ಲ ಎಂಬಂತೆ ತಾರೆಗಳು ಆಡಿದ್ದಾರೆ. ಪಕ್ಕಾ ಪ್ರೊಫೆಷನಲ್ ಆಟ ಅಲ್ಲದಿದ್ದರೂ ಒಂದು ಮಟ್ಟಕ್ಕೆ ಅಭಿಮಾನಿಗಳನ್ನು ರಂಜಿಸಿದ್ದಾರೆ.
2011ರಲ್ಲಿ ಆರಂಭವಾದ ಸಿಸಿಎಲ್ ಲೀಗ್ ಗಳು ಬರುಬರುತ್ತಾ ಜನಪ್ರಿಯತೆ ಗಳಿಸಿಕೊಂಡವು. ಐಸಿಸಿ ಕ್ರಿಕೆಟ್ ಮ್ಯಾಚ್ ಗಳಿಗೂ ಇದರಿಂದ ಕೊಂಚ ಹೊಡೆತಬಿತ್ತು. ಸಿಸಿಎಲ್ ಮ್ಯಾಚ್ ಗಳಿಗೆ ಮಾಧ್ಯಮಗಳು ಸಾಕಷ್ಟು ಪ್ರಚಾರ ಕೊಡುವ ಮೂಲಕ ಇನ್ನಷ್ಟು ಜನಪ್ರಿಯತೆ ಸಿಕ್ಕಿತು.
ಇದುವರೆಗೂ ನಡೆದ ಮೂರು ಆವೃತ್ತಿಗಳಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ಫೈನಲ್ ಹಂತ ತಲುಪಿರುವುದು ವಿಶೇಷ. 2013ರಲ್ಲಿ ನಡೆದ ಮೂರನೇ ಆವೃತ್ತಿಯಲ್ಲಿ ತೆಲುಗು ವಾರಿಯರ್ಸ್ ತಂಡವನ್ನು ಮಣ್ಣುಮುಕ್ಕಿಸಿ ಸಿಸಿಎಲ್ ಕಪ್ ತನ್ನದಾಗಿಸಿಕೊಂಡಿದೆ. (ಒನ್ಇಂಡಿಯಾ ಕನ್ನಡ)