Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನ.1ರಂದು ಸದಾಶಿವನಗರದಲ್ಲಿ ಪಿಬಿಎಸ್ ಉದ್ಯಾನವನ ಲೋಕಾರ್ಪಣೆ
ನಾಡಿನೆಲ್ಲೆಡೆ 'ಕನ್ನಡ ರಾಜ್ಯೋತ್ಸವ'ಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ನವೆಂಬರ್ ತಿಂಗಳು ಪೂರ್ತಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಯಾವುದೇ ಅಭ್ಯಂತರ ಇಲ್ಲ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಇದೀಗ ಕನ್ನಡ ರಾಜ್ಯೋತ್ಸವದ ಅಂಗವಾಗಿ 'ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ' ಸಹಯೋಗದೊಂದಿಗೆ 'ಗಾನಕಲಾ ಸಾರ್ವಭೌಮ, ನಾಡೋಜ, ಡಾ. ಪಿ.ಬಿ.ಶ್ರೀನಿವಾಸ್ ಅವರ 'ಉದ್ಯಾನವನ ಲೋಕಾರ್ಪಣೆ ಹಾಗೂ ಗೀತ ನಮನ' ಎಂಬ ವಿಶೇಷ ಕಾರ್ಯಕ್ರಮವು ದಿನಾಂಕ 01/11/2015 ರಂದು ಸಂಜೆ 6 ಘಂಟೆಗೆ, ಸದಾಶಿವನಗರದ ಪೂರ್ಣ ಪ್ರಜ್ಞ ಶಾಲೆ ಎದುರು ನಡೆಯಲಿದೆ.[ಆಡಿಸಿ ನೋಡು ಬೀಳಿಸಿ ನೋಡು ಮರೆತು ಹೋಗದು]
ಇನ್ನು ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿರುವ ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಮ್ಮುಖದಲ್ಲಿ ಗಾನಗಂಧರ್ವ ಪಿ.ಬಿ ಶ್ರೀನಿವಾಸ್ ಅವರು ಹಾಡಿರುವ ಹಾಡುಗಳನ್ನು ಸ್ಯಾಂಡಲ್ ವುಡ್ ನ ವಿವಿಧ ಖ್ಯಾತ ಗಾಯಕರು ಹಾಡಲಿದ್ದು, ಸಂಗೀತ ರಸಸಂಜೆಯ ಮೂಲಕ ನೆರೆದಿರುವವರನ್ನು ರಂಜಿಸಲಿದ್ದಾರೆ.[ರಾಜ್ ಚಿತ್ರದಲ್ಲಿ ಪಿಬಿಎಸ್ ಹಾಡು ನಿಂತಿದ್ದು ಯಾಕೆ: ಕಾರಣ ಇಲ್ಲಿದೆ]
ಸಂಗೀತ ರಸಸಂಜೆ ಕಾರ್ಯಕ್ರಮದಲ್ಲಿ ಮಲ್ನಾಡ್ ಸಿಸ್ಟರ್ಸ್ ತಂಡದ ಅರ್ಚನಾರವಿ, ಅಜಯ್ ವಾರಿಯರ್, ಚಿನ್ಮಯ್, ಶ್ರೀನಾಥ್, ರಾಜೀವ್, ರವಿ, ಸುಪ್ರೀಯ ಆಚಾರ್ಯ, ರಮಾಅರವಿಂದ್ ಮುಂತಾದವರ ಸಿರಿಕಂಠದಲ್ಲಿ, ಜೀ ಟಿವಿಯ ಸರಿಗಮಪ ಖ್ಯಾತಿಯ ಕಬೀರ್ ಮತ್ತು ತಂಡದ ವಾದ್ಯ ವೃಂದದೊಂದಿಗೆ ಸಂಗೀತ ಕಾರ್ಯಕ್ರಮ ಮೂಡಿಬರಲಿದೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಗಾನಗಂಧರ್ವ, ನಟಸಾರ್ವಭೌಮ ಡಾ.ರಾಜ್ ಕುಮಾರ್ ಮತ್ತು ಗಾನಭೀಷ್ಮ ಡಾ. ಪಿ.ಬಿ ಶ್ರೀನಿವಾಸ್ ಅವರ ಸಮಕಾಲೀನ ಕಲಾವಿದರು ಹಾಗೂ ಗೌರವಾನ್ವಿತ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಎಲ್ಲರಿಗೂ ತುಂಬು ಹೃದಯದ ಆಹ್ವಾನವಿದ್ದು, ಎಲ್ಲರೂ ಭಾಗವಹಿಸಬೇಕು ಎಂದು ಮಲ್ಲೇಶ್ವರಂ ಎಮ್.ಎಲ್.ಎ ಡಾ.ಅಶ್ವತ್ ನಾರಾಯಣ ಸಿ.ಎನ್ ಅವರು ಕೋರಿದ್ದಾರೆ.