Don't Miss!
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪಿ ಕೆ' ಅವತಾರದಲ್ಲಿ ಎಂಟ್ರಿ ಕೊಟ್ಟ ಸಾಧು ಮಹಾರಾಜ್
'ಪಿ ಕೆ' ಸಿನಿಮಾ ಅಂತ ಹೇಳಿದ ತಕ್ಷಣ ಆಮೀರ್ ಖಾನ್ ರವರ ಪೋಸ್ಟರ್ ನೆನಪಿಗೆ ಬರುತ್ತೆ. ಈಗ ಕಾಮಿಡಿ ಕಿಂಗ್ ಸಾಧು ಕೋಕಿಲ ಅದೇ ಗೆಟಪ್ ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಅಂದಹಾಗೆ, ಸಾಧು ಈ ಅವತಾರಕ್ಕೆ ಕಾರಣವಾಗಿರುವುದು 'ಧೈರ್ಯಂ' ಸಿನಿಮಾ.
ಥ್ರಿಲ್ ನೀಡುವ ಅಜೇಯ್ ರಾವ್ ಅಭಿನಯದ 'ಧೈರ್ಯಂ' ಟ್ರೈಲರ್, ನೀವೂ ನೋಡಿ..
ಅಜಯ್ ರಾವ್ ನಟನೆಯ 'ಧೈರ್ಯಂ' ಸಿನಿಮಾದ ಬಗ್ಗೆ ಅನೇಕ ಸಂಗತಿಗಳನ್ನು ಈಗಾಗಲೇ 'ಫಿಲ್ಮಿ ಬೀಟ್ ಕನ್ನಡ'ದಲ್ಲಿ ಓದಿರುತ್ತೀರಿ. ಅದೇ ರೀತಿ ಈಗ ಸಿನಿಮಾದಲ್ಲಿ ಸಾಧು ಅವರ ಪಾತ್ರ ಎಲ್ಲರ ಗಮನ ಸೆಳೆಯುತ್ತಿದೆ. 'ಪಿ ಕೆ' ಚಿತ್ರದಲ್ಲಿ ಆಮೀರ್ ಕಾಣಿಸಿಕೊಂಡಿದ್ದ ರೀತಿಯಲ್ಲಿ ಸಾಧು ಸ್ಲೇಟ್ ಹಿಡಿದು ನಿಂತಿದ್ದಾರೆ. ಜೊತೆಗೆ ಅದರಲ್ಲಿ 'ಭ್ರಷ್ಟ ಸರ್ಕಾರಕ್ಕೆ ಧಿಕ್ಕಾರ' ಅಂತ ಬರೆದಿದ್ದು, ಸಾಧು ಅವರ ಪಾತ್ರದ ಬಗ್ಗೆ ಕುತುಹಲ ಮೂಡಿಸಿದೆ.
ಅಂದಹಾಗೆ, 'ಧೈರ್ಯಂ' ಸಿನಿಮಾವನ್ನು 'ಮಳೆ' ಖ್ಯಾತಿಯ ಶಿವ ತೇಜಸ್ ನಿರ್ದೇಶನ ಮಾಡುತ್ತಿದ್ದು, ಡಾ.ಕೆ .ರಾಜು ನಿರ್ಮಾಣ ಮಾಡಿದ್ದಾರೆ. ಸಿನಿಮಾದ ಹಾಡುಗಳು ಈಗಾಗಲೇ ಎಲ್ಲರ ಮನ ಗೆದ್ದಿದೆ. ಸದ್ಯ ಸೆನ್ಸಾರ್ ಹಂತದಲ್ಲಿರುವ ಈ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ.