Don't Miss!
- Sports IPL 2024: ಸೋತು ಸುಣ್ಣವಾದರೂ ಪಾರ್ಟಿ ಮಾಡಿದ ಆರ್ಸಿಬಿ ಪ್ಲೇಯರ್ಸ್; ಕೊಹ್ಲಿ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್
- News ನೇಹಾ ಹತ್ಯೆ: ಸಾವಿನ ಮನೆಯಲ್ಲಿ ರಾಜಕಾರಣ ಸರಿಯಲ್ಲ, 90 ದಿನದಲ್ಲಿ ನ್ಯಾಯ ಸಿಗಲಿದೆ: ಸುರ್ಜೇವಾಲ
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಧುಕೋಕಿಲರನ್ನ ಹುಡುಕಿ ಬಿಟ್ಟರು ನಾಗತಿಹಳ್ಳಿ ಚಂದ್ರಶೇಖರ್
ನಟ, ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕ ಸಾಧುಕೋಕಿಲ ಈ ಬಾರಿಯ ಚುನಾವಣಾ ಸ್ಟಾರ್ ಪ್ರಚಾರಕರಾಗಿದ್ದಾರೆ. ಅದೇ ಕಾರಣದಿಂದ ಸಿನಿಮಾಗಳ ಕೆಲಸಕ್ಕೆ ಕೆಲವು ದಿನಗಳು ಬ್ರೇಕ್ ಹಾಕಿದ್ದಾರೆ. ಅದಕ್ಕೆ ಸಾಕ್ಷಿ ಎನ್ನುವಂತೆ ಇತ್ತೀಚಿಗಷ್ಟೆ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸಾಧುಕೋಕಿಲರನ್ನ ಹುಡುಕಿಕೊಡಿ ಯಾರಾದರೂ ಎಂದು ತಮ್ಮ ಫೇಸ್ ಬುಕ್ ಹಾಗೂ ಟ್ವಿಟ್ಟರ್ ನಲ್ಲಿ ಸ್ಟೇಟಸ್ ಹಾಕಿದ್ದರು.
ಸ್ಟೇಟಸ್ ಹಾಕಿದ ಕೆಲವೇ ಗಂಟೆಗಳಲ್ಲಿ ಸಾಧು ಸಿಕ್ಕಿದ್ದಾರೆ. ಸ್ಟೇಟಸ್ ನೋಡಿದ ಸಾಧು ಕೋಕಿಲ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಫೋನ್ ಮಾಡಿ ನಾಳೆಯೇ ಹಾಡನ್ನು ಹಾಡುವುದಾಗಿ ತಿಳಿಸಿದ್ದಾರೆ. ಅದರಂತೆ ಇಂದು ಸಾಧು ಮೇಷ್ಟ್ರು ಬರೆದಿರುವ ಹಾಡಿಗೆ ಧ್ವನಿ ಆಗಿದ್ದಾರೆ.
ಯಾರಾದರೂ ಸಾಧುಕೋಕಿಲಾರನ್ನ ಹುಡುಕಿ ಕೊಡಿ !
ಹಾಡು ಹಾಡಿದ ನಂತರ 'ಇದು ಯಾವ ಸೀಮೆ ನ್ಯಾಯವೋ ದೇವರೇ' ಅಂತ ಕೊನೆಗೂ ಆರ್ದ್ರವಾಗಿ ಹಾಡಿದರು ಪ್ರೀತಿಯ ಸಾಧು ಕೋಕಿಲಾ ಮಹಾರಾಜ್. ನನ್ನ ಮಿತ್ರ 'ರಥಾವರ' ಖ್ಯಾತಿಯ ಚಂದ್ರು ನಿರ್ದೇಶನದ 'ತಾರಕಾಸುರ' ಚಿತ್ರ. ಧರ್ಮ ಅವರ ಸಂಗೀತ. ಪಂಚಭೂತಗಳನ್ನು ಹಂಚಿ ಉಣ್ಣದ ಮನುಷ್ಯನ ಲಾಲಸೆ ಕುರಿತ ಹಾಡು."ಭೈರಾಗಿ ನಿಂಗೆ ಭೂಮ್ತಾಯಿ ಹಾಸಿಗೆ" ಅ೦ತ ಶುರುವಾಗುತ್ತೆ. ಕೇಳುವಿರಂತೆ. ಎಂದು ಫೋಟೋ ಸಮೇತ ಸ್ಟೇಟಸ್ ಹಾಕಿದ್ದಾರೆ ನಾಗತಿಹಳ್ಳಿ ಚಂದ್ರಶೇಖರ್.
ಅಂದ್ಹಾಗೆ ಸಾಧುಕೋಕಿಲ ಹಾಡುತ್ತಿರುವ ಹಾಡನ್ನು ನಾಗತಿಹಳ್ಳಿ ಚಂದ್ರಶೇಖರ್ ಬರೆದಿದ್ದಾರೆ. ರಥಾವರ ಸಿನಿಮಾ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದ ಚಿತ್ರದಲ್ಲಿ ಹಾಡನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಚಿತ್ರದಲ್ಲಿ ವೈಭವ್ ಹಾಗೂ ಮಾನ್ವಿತಾ ಜೋಡಿಯಾಗಿ ಅಭಿನಯಿಸಿದ್ದಾರೆ. ಕುಮಾರ್ ಗೌಡ ಕ್ಯಾಮೆರಾ ವರ್ಕ್ ಮಾಡುತ್ತಿದ್ದು ಧರ್ಮ ವಿಶ್ ಸಂಗೀತ ಸಂಯೋಜನೆ ನೀಡಿದ್ದಾರೆ.