Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯುವರತ್ನ' ತಂಡ ಸೇರಿಕೊಂಡ ಸಾಯಿ ಕುಮಾರ್, ರಂಗಾಯಣ ರಘು
Recommended Video
ಪುನೀತ್ ರಾಜ್ ಕುಮಾರ್ ನಟನೆಯ 'ಯುವರತ್ನ' ಸಿನಿಮಾದ ಚಿತ್ರತಂಡಕ್ಕೆ ಒಬ್ಬರ ನಂತರ ಮತ್ತೊಬ್ಬರು ಕಲಾವಿದರು ಸೇರಿಕೊಳ್ಳುತ್ತಿದ್ದಾರೆ. ಈಗ ನಟ ಸಾಯಿ ಕುಮಾರ್ ಹಾಗೂ ರಂಗಾಯಣ ರಘು ಚಿತ್ರದಲ್ಲಿ ನಟಿಸುತ್ತಿದ್ದಾರೆ.
'ಯುವರತ್ನ' ಗ್ಯಾಂಗ್ ಸೇರಿದ ಮತ್ತೊಬ್ಬ ಹೀರೋಯಿನ್
ಇತ್ತೀಚಿಗಷ್ಟೆ ಸಿನಿಮಾದಲ್ಲಿ ನಟ ದಿಗಂತ್ ಹಾಗೂ ನಟಿ ಸೋನು ಗೌಡ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಬಂತು. ಅದರ ಬಳಿಕ ಸಾಯಿ ಕುಮಾರ್ ಹಾಗೂ ರಂಗಾಯಣ ರಘು ಸಿನಿಮಾದಲ್ಲಿ ಇದ್ದಾರೆ ಎಂದು ಹೊಂಬಾಳೆ ಫಿಲ್ಮ್ಸ್ ತಿಳಿಸಿದೆ.
ಇಂದು ನಟ ಸಾಯಿ ಕುಮಾರ್ ಅವರ ಹುಟ್ಟುಹಬ್ಬದ ವಿಶೇಷವಾಗಿ 'ಯುವರತ್ನ' ಚಿತ್ರತಂಡ ಈ ವಿಷಯವನ್ನು ಹಂಚಿಕೊಂಡಿದೆ. ವಿಶೇಷ ಅಂದರೆ, ಇದೇ ಮೊದಲ ಬಾರಿಗೆ ಪುನೀತ್ ಜೊತೆಗೆ ಸಾಯಿ ಕುಮಾರ್ ತೆರೆ ಹಂಚಿಕೊಳ್ಳುತ್ತಿದ್ದಾರೆ.
'ಯುವರತ್ನ' ಚಿತ್ರತಂಡದಲ್ಲಿ ಹರಿಕೃಷ್ಣ ಇಲ್ಲ : ಪುನೀತ್ ಚಿತ್ರಕ್ಕೆ ಬೇರೆ ಮ್ಯೂಸಿಕ್ ಡೈರೆಕ್ಟರ್
ನಟ ರಂಗಾಯಣ ರಘು ಹಾಗೂ ಪುನೀತ್ ರಾಜ್ ಕುಮಾರ್ ಈ ಹಿಂದೆ 'ರಾಮ್', 'ಪವರ್ ಸ್ಟಾರ್', 'ರಾಜಕುಮಾರ' ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದರು.
ನಾಯಕಿಯಾಗಿ ಸಯ್ಯೇಶಾ ಚಿತ್ರದ ಲೀಡ್ ರೋಲ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ, ಧನಂಜಯ್, ವಸಿಷ್ಟ, ರಾಧಿಕಾ ಶರತ್ ಕುಮಾರ್, ಪ್ರಕಾಶ್ ರಾಜ್, ದಿಗಂತ್, 'ಟಗರು' ಖ್ಯಾತಿಯ ನಟಿ ತ್ರಿವೇಣಿ, ಅರು ಗೌಡ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಸಂತೋಷ್ ಆನಂದ್ ರಾಮ್ ನಿರ್ದೇಶನದ ಮೂರನೇ ಸಿನಿಮಾ ಇದಾಗಿದೆ. ತಮನ್ ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ.