Just In
Don't Miss!
- News
ಕರ್ನಾಟಕದಲ್ಲಿ 573 ಕೊರೊನಾ ಸೋಂಕಿತರು ಪತ್ತೆ
- Finance
ಬಜೆಟ್ 2021: ಐ.ಟಿ. ಫೈಲಿಂಗ್ ನಲ್ಲಿ PAN ಕಾರ್ಡ್ ಗೆ ಏಕಿಷ್ಟು ಮಹತ್ವ, ಏನಿದರ ವಿಶೇಷ?
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಗಕ್ಕರ ಬಲ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ 'ಸಲಗ' ಟೀಂ
ನಟ ದುನಿಯ ವಿಜಯ್ ಬಹುದಿನಗಳ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. 'ಕುಸ್ತಿ' ಅಖಾದಲ್ಲಿ ಬ್ಯುಸಿ ಇದ್ದ ವಿಜಿ 'ಕುಸ್ತಿ'ಯನ್ನು ಅರ್ಧಕ್ಕೆ ನಿಲ್ಲಿಸಿ ಈಗ 'ಸಲಗ' ಆಗಲು ಹೊರಟಿದ್ದಾರೆ. ಅಚ್ಚರಿ ಅಂದ್ರೆ 'ಸಲಗ'ಗೆ ದುನಿಯ ವಿಜಯ್ ಅವರೆ ಮಾವುತ. ಹೌದು, 'ಸಲಗ' ಚಿತ್ರದಲ್ಲಿ ನಾಯಕನಾಗಿ ಮಿಂಚುವ ಜೊತೆಗೆ ವಿಜಿ ಮತ್ತೊಂದು ದೊಡ್ಡ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.
'ಸಲಗ' ಚಿತ್ರದ ಮೂಲಕ ನಿರ್ದೇಶಕನಾಗಿ ಎಂಟ್ರಿ ಕೊಡುತ್ತಿದ್ದಾರೆ ವಿಜಿ. ಈಗಾಗಲೆ ಚಿತ್ರದ ಒಂದಿಷ್ಟು ಕೆಲಸಗಳು ಪೂರ್ಣಡೊಂಡಿದ್ದು ಇತ್ತೀಚಿಗಷ್ಟೆ ಚಿತ್ರತಂಡ ಸ್ಕ್ರಿಪ್ಟ್ ಪೂಜೆ ಮಾಡಿದೆ ಚಿತ್ರತಂಡ. ವಿಶೇಷ ಅಂದ್ರೆ ಸವದತ್ತಿ ಯಲ್ಲಮ್ಮನ ಸನ್ನಿಧಿಗೆ ಭೇಟಿ ನೀಡಿ ಯಲ್ಲಮ್ಮನ ಬಳಿ ಸ್ಕ್ರಿಪ್ಟ್ ಇಟ್ಟು ಪೂಜೆ ಮಾಡಿದೆ ಚಿತ್ರತಂಡ.
ಡೈರೆಕ್ಟರ್ ಆದ ದುನಿಯಾ ವಿಜಯ್ ಗೆ ಸುದೀಪ್ ಸಲಹೆ
ಈ ಸಂದರ್ಭದಲ್ಲಿ ಇಡೀ ಚಿತ್ರತಂಡ ಹಾಜರಿತ್ತು. ನಿರ್ಮಾಪಕ ಕೆ ಪಿ ಶ್ರೀಕಾಂತ್, ನಟ ಮತ್ತು ನಿರ್ದೇಶಕ ದುನಿಯ ವಿಜಯ್, ಪತ್ನಿ ಕೀರ್ತಿ ಮತ್ತು ಮಗ ಸಾಮ್ರಾಟ್ ಸೇರಿದಂತೆ ಇಡಿ ಚಿತ್ರತಂಡ ವಿಶೇಷ ಪೂಜೆ ಮಾಡಿ ದೇವಿ ದರ್ಶನ ಪಡೆದು ಸಂತಸಪಟ್ಟಿದ್ದಾರೆ.
ಒಂದೊಳ್ಳೆ ಕತೆ ರೆಡಿ ಮಾಡಿಕೊಂಡು ಚಿತ್ರೀಕರಣಕ್ಕೆ ಸಜ್ಜಾಗುತ್ತಿರುವ 'ಸಲಗ' ಟೀಂಗೆ ಯಲ್ಲಮ್ಮನ ಆಶೀರ್ವಾದ ಸಿಕ್ಕಿದೆ. 'ಟಗರು' ಸಿನಿಮಾದಲ್ಲಿ ಕೆಲಸ ಮಾಡಿದ ಬಹುತೇಕರು 'ಸಲಗ' ಚಿತ್ರಕ್ಕೂ ಕೆಲಸಮಾಡುತ್ತಿದ್ದಾರೆ. ಮಾಸ್ತಿ ಸಂಭಾಷಣೆ, ಚರಣ್ ರಾಜ್ ಸಂಗೀತ ಮತ್ತು ನಟರಾದ ಡಾಲಿ ಧನಂಜಯ್, ಕಾಕ್ರೋಚ್ ಸುಧೀಂದ್ರ ಕೂಡ ಸೇರ್ಪಡೆಯಾಗಿದ್ದಾರೆ.
ಈಗಾಗಲೆ ಸ್ಯಾಂಡಲ್ ವುಡ್ ನಲ್ಲಿ ಕುತೂಹಲ ಮೂಡಿಸಿರುವ 'ಸಲಗ' ಚಿತ್ರದಲ್ಲಿ ದೊಡ್ಡ ತಂತ್ರಜ್ಞರ ಬಳಗವೆ ಇದೆ. ಸದ್ಯ ಪೂಜೆ ಮುಗಿಸಿರುವ ಚಿತ್ರತಂಡ ಜೂನ್ 6ರಿಂದ ಚಿತ್ರೀಕರಣಕ್ಕೆ ಹೊರಡುವ ಸಾಧ್ಯತೆ ಇದೆ.