Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಲ್ಮಾನ್ ಖಾನ್ ಗೆ ಸಿಕ್ತು ಜಾಮೀನು: ಇಂದೇ ರಿಲೀಸ್ ಸಾಧ್ಯತೆ.!
ಕಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಜೋಧ್ ಪುರ್ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
50 ಸಾವಿರ ಬಾಂಡ್ ನೀಡಬೇಕು ಎಂದು ಷರತ್ತು ವಿಧಿಸಿರುವ ನ್ಯಾಯಾಲಯ ಸಲ್ಮಾನ್ ಖಾನ್ ಅವರಿಗೆ ಬಿಡುಗಡೆ ಭಾಗ್ಯ ಕಲ್ಪಿಸಿದೆ. ಸಲ್ಲು ಜಾಮೀನು ಸಿಕ್ಕ ಬೆನ್ನಲ್ಲೆ ಬಾಲಿವುಡ್ ನಿರ್ಮಾಪಕರು ಹಾಗೂ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ವಿಚಾರಣೆ ವೇಳೆ, ಸಲ್ಮಾನ್ ಪರ ವಕೀಲರು, 1998ರ ಪ್ರಕರಣದಲ್ಲಿಯೂ ಅವರು ಶಸ್ತ್ರಾಸ್ತ್ರ ಬಳಸಿದ್ದಕ್ಕೆ ಯಾವುದೇ ಪುರಾವೆಯಿಲ್ಲ. ತನಿಖೆಯಲ್ಲಿ ಸಾಕಷ್ಟು ಲೋಪಗಳಾಗಿವೆ. ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳು ನಂಬುವಂತೆ ಇಲ್ಲ ಎಂದು ವಾದಿಸಿದ್ದರು. ಇದಕ್ಕೆ ಮನ್ನಣೆ ನೀಡಿರುವ ನ್ಯಾಯಾಲಯ ಜಾಮೀನು ನೀಡಿದೆ. ಆದ್ರೆ, ಬಿಷ್ಣೋಯಾ ಸಮುದಾಯ ಮತ್ತೆ ಮೇಲ್ಮನವಿ ಸಲ್ಲಿಸುವ ಅವಕಾಶ ಇದೆ.
ಸಲ್ಮಾನ್ ಖಾನ್ ಜೈಲು ಸೇರಿದ್ದಕ್ಕೆ ಅತೀವ ಸಂತಸಗೊಂಡ ನಟಿ.!
ಇನ್ನು ನ್ಯಾಯಾಲಯ ನೀಡಿರುವ ಅದೇಶದ ಪ್ರತಿಯನ್ನ ಸಲ್ಮಾನ್ ಖಾನ್ ಪರ ವಕೀಲರು ಸ್ವೀಕರಿಸಿ, ಇಂದೇ ಜೋಧ್ ಪುರ್ ಸೆಂಟ್ರಲ್ ಜೈಲಿನಲ್ಲಿ ನೀಡಲಿದ್ದಾರೆ. ನಂತರ ಅಲ್ಲಿ ಕೆಲವು ಕಾನೂನು ಕ್ರಮಗಳು ನಡೆದ ನಂತರವೇ ಸಲ್ಲು ಜೈಲಿನಿಂದ ಹೊರಬರಲಿದ್ದಾರೆ.
ಸಲ್ಮಾನ್ ಗೆ ಜಾಮೀನು ಸಿಕ್ಕಿಲ್ಲ ಅಂದ್ರೆ 800 ಕೋಟಿ ನಷ್ಟ.! ಎಲ್ಲಿಂದ ಎಷ್ಟು ಕೋಟಿ.?
1998ರಲ್ಲಿ ರಾಜಸ್ಥಾನದ ಜೋಧಪುರ ಬಳಿ ಕೃಷ್ಣ ಮೃಗಗಳ ಬೇಟೆ ಪ್ರಕರಣಕ್ಕೆ ಸಂಬಂಧಿಸಿ, ಜೋಧ್ ಪುರ ನ್ಯಾಯಾಲಯ, ಗುರುವಾರ ಖಾನ್ ಗೆ 5 ವರ್ಷಗಳ ಜೈಲು ಹಾಗೂ 10,000 ದಂಡ ವಿಧಿಸಿತ್ತು. ತೀರ್ಪಿನ ಬೆನ್ನಲ್ಲೇ ಅವರನ್ನು ಜೈಲಿಗೆ ರವಾನಿಸಲಾಗಿತ್ತು.