Don't Miss!
- News ಲೋಕಸಭಾ ಚುನಾವಣೆಯಲ್ಲಿ ಕೊಡಗಿನಲ್ಲಿ ಮತ್ತೆ ‘ಕೈ’ ಕಮಾಲ್?: ಒಂದಷ್ಟು ನಾಯಕರು ಮೌನವಾಗಿದ್ದೇಕೆ?
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಕೀಯ ತಿರುವು ಪಡೆದ ಸಲ್ಮಾನ್ ಖಾನ್ ದಬಾಂಗ್ 3 ವಿವಾದ
Recommended Video
ನಟ ಸಲ್ಮಾನ್ ಖಾನ್ ಅಭಿನಯದ ಬಹುನಿರೀಕ್ಷೆಯ ದಂಬಾಂಗ್-3 ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಮಧ್ಯ ಪ್ರದೇಶದ ಇಂದೋರ್ ನಲ್ಲಿ ಚಿತ್ರದ ಹಾಡಿನ ಚಿತ್ರೀಕರಣ ಮಾಡಲಾಗುತ್ತಿದೆ. ನರ್ಮದಾ ನದಿ ತೀರದಲ್ಲಿ ಸೆಟ್ ಹಾಕಿ ದಂಬಾಂಗ್-3 ಚಿತ್ರದ ಅದ್ಧೂರಿ ಶೂಟಿಂಗ್ ಮಾಡಲಾಗುತ್ತಿದೆ.
ಆದ್ರೀಗ ಈ ಚಿತ್ರೀಕರಣ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಕಾರಣ ಚಿತ್ರದಲ್ಲಿ ಶಿವಲಿಂಗವನ್ನು ಬಳಸಲಾಗಿದ್ದು ಈ ಶಿವಲಿಂಗವನ್ನು ಮರದ ಹಲಗೆಗಳ ಅಡಿ ಇಡಲಾಗಿದೆ. ಈ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಶಿವಲಿಂಗಕ್ಕೆ ಅವಮಾನ ಮಾಡಲಾಗಿದೆ, ಹಿಂದೂ ಧಾರ್ಮಿಕ ಭಾವನೆಗಳಿಗೆ ಸಲ್ಮಾನ್ ಖಾನ್ ಧಕ್ಕೆ ತರುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
'ದಬಾಂಗ್ 3' ಚಿತ್ರೀಕರಣಕ್ಕೆ ಸುದೀಪ್ ಯಾವಾಗ ಹೋಗ್ತಾರೆ?
ಈ ಘಟನೆ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಇದೇ ವಿವಾದವನ್ನು ಬಳಸಿಕೊಂಡು ರಾಜಕೀಯ ಲಾಭ ಪಡೆಯಲು ಕಿತ್ತಾಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬೋಪಾಲ್ ಜಿಲ್ಲೆಯ ಹಾಜಿಪುರ್ ಬಿಜೆಪಿ ಶಾಸಕ ರಾಮೇಶ್ವರ್ ಶರ್ಮಾ, 'ಕಾಂಗ್ರೆಸ್ ನೇತೃತ್ವದ ಕಮಲ್ ನಾಥ್ ಸರ್ಕಾರ ಬಂದ ಮೇಲೆ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹ ಕೆಲಸಗಳು ಹೆಚ್ಚಾಗುತ್ತಿವೆ. ಶಿವನಿಗೆ ಅಪಮಾನ ಮಾಡಿದವರ ವಿರುದ್ದ ಎಫ್ ಐ ಆರ್ ಧಾಖಲಿಸಬೇಕೆಂದು' ಎಂದು ಒತ್ತಾಯಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರೆ ಶೋಭ ಓಝಾ. 'ಬಿಜೆಪಿ ಮುಖಂಡರು ಸಂಕುಚಿತ ಮನೋಭಾವದವರು. ನಾವು ಶರ್ಮ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸಲ್ಮಾನ್ ಖಾನ್ ಒಬ್ಬ ಅದ್ಭುತ ಹಾಗೂ ಧಾರ್ಮಿಕ ಸಾಮರಸ್ಯ ಹೊಂದಿರುವ ನಟ. ಆದ್ರೆ ಬಿಜೆಪಿ ಈ ಘಟನೆಯನ್ನು ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ' ಎಂದು ಹೇಳಿದ್ದಾರೆ.
ಸಲ್ಮಾನ್ ಮತ್ತು ಸುದೀಪ್ ಜೋಡಿಯ 'ದಬಾಂಗ್ 3' ಚಿತ್ರಕ್ಕೆ ಮುಹೂರ್ತ
ಈ ವಿವಾದ ದೊಡ್ಡದಾಗುತ್ತಿದ್ದಂತೆ ನಟ ಸಲ್ಮಾನ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. 'ಶಿವಲಿಂಗ ಹಾಳಾಗಬಾರದು ಎನ್ನುವ ಕಾರಣಕ್ಕೆ ಮರದ ಹಲಗೆ ಕೆಳಗೆ ಇಟ್ಟಿರುವುದು. ಚಿತ್ರೀಕರಣ ಮುಗಿದ ಬಳಿಕ ತೆಗೆಯುತ್ತೇವೆ' ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.
ದಬಾಂಗ್-3 ಪ್ರಭುದೇವ ನಿರ್ದೇಶದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.