Don't Miss!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳ ಯಾರು? ಮಾಹಿತಿ ಇಲ್ಲಿದೆ
- Automobiles ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖಾಸಗಿ ಬಸ್ ನಿಲ್ದಾಣಕ್ಕೆ ಚಿಂದೋಡಿ ಲೀಲಾ ಹೆಸರಿಡಲು ಒತ್ತಾಯ: ಹೋರಾಟದ ಎಚ್ಚರಿಕೆ
ದಾವಣಗೆರೆ ನಗರದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ ಖಾಸಗಿ ಬಸ್ ನಿಲ್ದಾಣಕ್ಕೆ ಖ್ಯಾತ ನಟಿ ಹಾಗೂ ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಚಿಂದೋಡಿ ಲೀಲಾರ ಹೆಸರು ಇಡಬೇಕು ಎಂದು ಸಮಗ್ರ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಾಧ್ಯಕ್ಷ ಅವಿನಾಶ್ ಬಿ. ಅಭಿ, 'ರಾಜಕಾರಣಿಗಳು, ಚುನಾಯಿತ ಜನಪ್ರತಿನಿಧಿಗಳು ಕ್ಷೇತ್ರದ ಅಭಿವೃದ್ಧಿಗೆ ಮನೆಯಿಂದ ಹಣ ತಂದಿಲ್ಲ. ಜನರ ತೆರಿಗೆ ಹಣದಿಂದ ಅಭಿವೃದ್ಧಿ ಮಾಡಿದ್ದಾರೆ. ಹಾಗಿದ್ದರೂ ಅವರವರ ಮನೆಯವರ, ತಂದೆ, ತಾಯಿ ಹೆಸರು ಇಡುವುದು ಸರಿಯಲ್ಲ' ಎಂದರು.
'ಗಂಧದ ಗುಡಿ' ಸ್ವಾಗತಕ್ಕೆ ಸಜ್ಜಾಗಿದೆ ದಾವಣಗೆರೆ: ನೀವು ರೆಡೀನಾ?
ಜಿಲ್ಲಾಧಿಕಾರಿ, ಸ್ಮಾರ್ಟ್ ಸಿಟಿ ಅಧಿಕಾರಿಗಳು, ನಗರಾಭಿವೃದ್ಧಿ ಸಚಿವರು ಸೇರಿದಂತೆ ಇತರೆ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗುವುದು. ಇದಕ್ಕೆ ಸ್ಪಂದನೆ ಸಿಗದಿದ್ದರೆ ಬಸ್ ನಿಲ್ದಾಣ ಉದ್ಘಾಟನೆ ವೇಳೆ ಉಗ್ರ ಹೋರಾಟ ನಡೆಸಲಾಗುವುದು. ಉದ್ಘಾಟನೆ ವೇಳೆ ಚಿಂದೋಡಿಲೀಲಾ ಹೆಸರು ಹೊರತುಪಡಿಸಿ ಬೇರೆ ಯಾವುದೇ ಹೆಸರು ಇಟ್ಟರೆ ನಾಮಫಲಕಕ್ಕೆ ಮಸಿ ಬಳಿಯಲಾಗುವುದು. ಅಲ್ಲದೇ ಕಪ್ಪು ಬಾವುಟ ಪ್ರದರ್ಶಿಸಲಾಗುವುದು. ಈ ವೇಳೆ ಅಹಿತಕರ ಘಟನೆ ನಡೆದರೆ ಅಧಿಕಾರಿಗಳೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಹಲವು ಪ್ರಶಸ್ತಿಗೆ ಭಾಜನರಾಗಿದ್ದ ಲೀಲಾ
ದಾವಣಗೆರೆಯಲ್ಲಿ 1937ರಲ್ಲಿ ಜನಿಸಿ 1949ರಲ್ಲಿ ರಂಗಭೂಮಿ ಕಲಾವಿದೆಯಾಗಿ ಜನ ಮನ ಗೆದ್ದ, ಸಾವಿರಾರು ನಾಟಕಗಳ ಮೂಲಕ ಕರ್ನಾಟಕಕ್ಕೆ ಪ್ರಖ್ಯಾತಿಯಾಗಿ ಚಿರಪರಿತರಾಗಿರುವ ಲೀಲಾ ಅವರು ಸುಮಾರು 17 ಕನ್ನಡ ಚಲನಚಿತ್ರಗಳಲ್ಲಿ ನಟಿಯಾಗಿ ಮತ್ತು ನಾಯಕಿ ನಟಿಯಾಗಿ ಅಭಿನಯಿಸಿದ್ದಾರೆ. ಆ ಕಲೆಯನ್ನು ಗುರುತಿಸಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ 1989ರಲ್ಲಿ ಕರ್ನಾಟಕ ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದರು. 1988 ರಲ್ಲಿ ಕೇಂದ್ರ ಸರ್ಕಾರದಿಂದ ಕೊಡಮಾಡಲ್ಪಡುವ "ಪದ್ಮಶ್ರೀ ಪ್ರಶಸ್ತಿ" ಪುರಸ್ಕಾರ ನೀಡಿ ಗೌರವಿಸಿದೆ ಎಂದು ತಿಳಿಸಿದರು.
ಮರಾಠಿ ಪುಂಡರ ವಿರುದ್ಧ ನಿಂತಿದ್ದ ಚಿಂದೋಡಿ ಲೀಲಾ
1991 ರಲ್ಲಿ ಮಹಾರಾಷ್ಟ್ರದಲ್ಲಿ ಮರಾಠಿಗರ ಪುಂಡಾಟಿಕೆನ್ನು ಬಗ್ಗೆ ಬಡಿಯುವ ಮೂಲಕ ಬೆಳಗಾವಿಯ ಕಾಸಬ್ಲಾಗ್ ವಾಡ್ ನ ಮಹಾನಗರ ನಗರ ಪಾಲಿಕೆಯ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ವೇಳೆ ಮರಾಠಿಗರ ವಿರುದ್ಧ ಕನ್ನಡಿಗರ ಕಂಪನ್ನು ಸಾರಿ, ಕನ್ನಡಗರಿ ಹೆಮ್ಮೆಯನ್ನು ತಂದುಕೊಟ್ಟು ಆ ಚುನಾವಣೆಯಲ್ಲಿ ಜಯಶೀಲರಾಗಿ ಐದು ವರ್ಷಗಳ ಕಾಲ ಅಧಿಕಾರ ನಡೆಸಲು ಕೈಜೋಡಿಸಿದ್ದರು. ಕೆಬಿಆರ್ ಡ್ರಾಮಾ ನಾಟಕ ಕಂಪನಿಯನ್ನು ಕಟ್ಟಿ ಕನ್ನಡದ ನಾಟಕಗಳನ್ನು ನಡೆಸಲು ಮೀಸಲಾಗಿಟ್ಟಿದ್ದರು ಎಂದಿದ್ದಾರೆ.
ಯಾವುದೇ ರಸ್ತೆಗೆ ಚಿಂದೋಡಿ ಲೀಲಾ ಹೆಸರಿಟ್ಟಿಲ್ಲ
ಇಷ್ಟೆಲ್ಲಾ ಸಾಧನೆ ಮಾಡಿರುವ ಚಿಂದೋಡಿ ಲೀಲಾರ ಹೆಸರು ಯಾವುದೇ ಮುಖ್ಯರಸ್ತೆಗೆ ಹಾಗೂ ವೃತ್ತಕ್ಕೆ ನಾಮಕರಣ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿ ನೂತನವಾಗಿ ಪುನರ್ ನಿರ್ಮಾಣಗೊಳ್ಳುತ್ತಿರುವ ಖಾಸಗಿ ಬಸ್ ನಿಲ್ದಾಣಕ್ಕೆ ಹೆಸರು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು. ಗೋಷ್ಟಿಯಲ್ಲಿ ಮಾಲಾ ನಾಗರಾಜ್, ಶಾಂತಮ್ಮ, ಎಸ್.ಗಣೇಶ್, ಬಿ.ಹೆಚ್.ಮಂಜುನಾಥ್, ಆನಂದ ಇಟ್ಟಿಗುಡಿ, ಅಕ್ಬರ್ ಭಾಷಾ, ಎನ್. ಎಸ್. ಈರಣ್ಣ, ರಾಜು ಅನೆಕೊಂಡ ಮತ್ತಿತರರು ಹಾಜರಿದ್ದರು.