Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೋಗಿ ಕಾದಂಬರಿ ಆಧಾರಿತ 'ಸಮಯದ ಹಿಂದೆ ಸವಾರಿ' ಚಿತ್ರ ಜೂನ್ 28ಕ್ಕೆ ಬಿಡುಗಡೆ
ಕಾದಂಬರಿ ಆಧಾರಿತ ಸಿನಿಮಾಗಳು ಕಡಿಮೆ ಆಗುತ್ತಿರುವ ಈ ಸಮಯದಲ್ಲಿ ಒಂದು ಕಾದಂಬರಿ ಇಟ್ಟುಕೊಂಡು ಸಿನಿಮಾ ಮಾಡಿ, ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. 'ಸಮಯದ ಹಿಂದೆ ಸವಾರಿ' ಸಿನಿಮಾ ಜೂನ್ 28ಕ್ಕೆ ಬಿಡುಗಡೆಯಾಗುತ್ತಿದೆ.
ಜೋಗಿ ರವರ 'ನದಿಯ ನೆನಪಿನ ಹಂಗು' ಕಾದಂಬರಿ ಈಗ ಸಿನಿಮಾ ರೂಪಕ್ಕೆ ಬಂದಿದೆ. ಕಾದಂಬರಿಯಲ್ಲಿ '' ರಘುನಂದನನಿಗೆ ಸುದ್ದಿ ತಿಳಿಯೋ ಹೊತ್ಗೆ ನಿರಂಜನ ಸತ್ತು 36 ಘಂಟೆಗಳಾಗಿತ್ತು'' ಎಂಬ ಸಾಲು ಓದಿದ ದಿನವೇ ಇದನ್ನ ಸಿನಿಮಾ ಮಾಡಬೇಕು ಎನ್ನುವ ನಿರ್ಧಾರವನ್ನು ನಿರ್ದೇಶಕರು ಮಾಡಿದ್ದರಂತೆ.
ಟಿ ಎಸ್ ನಾಗಾಭರಣ ಸಂಚಿಕೆಯ 'ವೀಕೆಂಡ್ ವಿತ್ ರಮೇಶ್' ಪ್ರೊಮೋ ನೋಡಿ
ರಂಗಭೂಮಿಯ ಪ್ರತಿಭಾವಂತ ನಟ, ಸಂಗೀತಗಾರ ಹಾಗೂ ನಿರ್ದೇಶಕ ರಾಜ್ ಗುರು ಹೊಸಕೋಟೆ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಚಿತ್ರಕಥೆ, ಸಾಹಿತ್ಯ, ಸಂಗೀತ, ಸಂಭಾಷಣೆಯ ಜವಾಬ್ದಾರಿಯನ್ನು ಕೂಡ ಅವರೇ ನಿರ್ವಹಿಸಿದ್ದಾರೆ. ಇದೆಲ್ಲದರ ನಡುವೆ ಒಂದು ಪಾತ್ರವನ್ನು ಮಾಡಿದ್ದಾರೆ.
ರಾಹುಲ್ ಹೆಗ್ಡೆ, ಪ್ರಕೃತಿ, ಕಿರಣ್ ವಟಿ, ರಂಜಿತ್ ಶೆಟ್ಟಿ, ಶಿವ ಶಂಕರ್, ಪ್ರವಿನ್ ಹೆಗ್ಡೆ ಚಿತ್ರದಲ್ಲಿ ನಟಿಸಿದ್ದಾರೆ. ರಾಹುಲ್ ಹೆಗ್ಡೆ ಚಿತ್ರದ ನಿರ್ಮಾಣ ಮಾಡಿದ್ದು, ರಂಜಿತ್, ಪ್ರವೀಣ್ ಹೆಗ್ಡೆ ಸಹ ನಿರ್ಮಾಪಕರಾಗಿದ್ದಾರೆ.
ಚಿತ್ರದ ಮತ್ತೊಂದು ಹೈಲೈಟ್ ಅಂದರೆ, ಗಾಯಕ ಎಲ್ ಎನ್ ಶಾಸ್ತ್ರಿ ಹಾಡಿರುವ ಹಾಡು. ಸಿನಿಮಾ ಮಾಡೋ ಮುಂಚೆ ಈ ಕಾದಂಬರಿ ನಾಟಕವಾಗಿತಂತೆ. ಆಗ ಎಲ್ .ಎನ್ ಶಾಸ್ತ್ರೀ ಅವರ ಧ್ವನಿಯಲ್ಲಿ 'ಸಮಯದ ಹಿಂದೆ ಸವಾರಿ ಹುಡುಕಿದರು ಸಿಗದೆ ಕಾಡೋ ದಾರಿ' ಎಂಬ ಹಾಡನ್ನು ಹಾಡಿಸಿದ್ದರು. ಈಗ ಆ ಹಾಡನ್ನು ಸಿನಿಮಾದಲ್ಲಿ ಸಹ ಬಳಸಿಕೊಳ್ಳಲಾಗಿದೆ.
ಅಂಹದಾಗೆ, ಚಿತ್ರದ ಉಳಿದ ಹಾಡುಗಳನ್ನು ವಸಿಷ್ಟ ಸಿಂಹ, ನವೀನ್ ಸಜ್ಜು, ಅನನ್ಯ ಭಟ್, ಶ್ವೇತಪ್ರಭು ಹಾಡಿದ್ದಾರೆ. ಇನ್ನು ಸಿನಿಮಾವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ "U" ಸರ್ಟೀಫಿಕೆಟ್ ಅನ್ನು ನೀಡಿದೆ. ಸಿನಿಮಾದ ಸವಾರಿ ಇದೇ ತಿಂಗಳ 28ಕ್ಕೆ ಪ್ರಾರಂಭ ಆಗಲಿದೆ.
ರಂಗಭೂಮಿಯಲ್ಲಿ ಸಕ್ರಿಯವಾಗಿ 6 ವರ್ಷಗಳಿಂದ ತನ್ನದೇ ಆದ ಛಾಪು ಮೂಡಿಸಿರುವ ರಂಗಪಯಣ ಮತ್ತು ಸಾತ್ವಿಕ ತಂಡ ಹೊಸದೊಂದು ಪ್ರಯೋಗ ಇದಾಗಿದೆ. ತಮ್ಮ ನಾಟಕಗಳಲ್ಲಿ ಸಿಕ್ಸರ್ ಬಾರಿಸುವ ರಾಜ್ ಗುರು ಸಿನಿಮಾವನ್ನು ಹೇಗೆ ನಿಭಾಹಿಸಿದ್ದಾರೆ ಎನ್ನುವ ನಿರೀಕ್ಷೆ ಇದೆ.