twitter
    For Quick Alerts
    ALLOW NOTIFICATIONS  
    For Daily Alerts

    ಮೊದಲ ಗುರುವನ್ನು ಕಳೆದುಕೊಂಡ ನೋವಿನಲ್ಲಿ ಸಂಯುಕ್ತ

    |

    ಕನ್ನಡ ಸಾಹಿತ್ಯ ಲೋಕದ ಖ್ಯಾತ ಸಾಹಿತಿ ಗಿರೀಶ್ ಕಾರ್ನಾಡ್ ಇಂದು (ಜೂನ್ 10) ಬೆಳಗ್ಗೆ ವಿಧಿವಶರಾಗಿದ್ದಾರೆ. ಕಾರ್ನಾಡರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ನಟಿ ಸಂಯುಕ್ತ ಹೊರನಾಡು ಗಿರೀಶ್ ಕಾರ್ನಾಡ್ ರನ್ನು ಕಳೆದುಕೊಂಡ ನೋವನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಂಯುಕ್ತ ಹೊರನಾಡು ಅವರ ಮೊದಲ ಗುರು ಗಿರೀಶ್ ಕಾರ್ನಾಡ್ ಆಗಿದ್ದು, ಅವರ ಬದುಕಿನ ಪ್ರಮುಖ ಘಟ್ಟದಲ್ಲಿ ಕಾರ್ನಾಡ್ ಇದ್ದರಂತೆ.

    ಗಿರೀಶ್ ಕಾರ್ನಾಡ್ ನಿರ್ದೇಶನದ ಪ್ರಮುಖ ಸಿನಿಮಾಗಳ ಪಟ್ಟಿ ಗಿರೀಶ್ ಕಾರ್ನಾಡ್ ನಿರ್ದೇಶನದ ಪ್ರಮುಖ ಸಿನಿಮಾಗಳ ಪಟ್ಟಿ

    ಸಂಯುಕ್ತ ನಟಿಸಿದ್ದ ಮೊದಲ ಸಿನಿಮಾ, ಮೊದಲ ನಾಟಕ, ನಟನೆಯ ಕೋರ್ಸ್ ಎಲ್ಲವೂ ಶುರು ಆಗಿದ್ದು ಗಿರೀಶ್ ಕಾರ್ನಾಡ್ ಮೂಲಕವೇ ಅಂತೆ. ಹೀಗಾಗಿ ಕಾರ್ನಾಡರನ್ನು ಸಂಯುಕ್ತ ಮೊದಲ ಗುರುವಾಗಿ ಕಾಣುತ್ತಿದ್ದರು.

    samyukta hornad condolence for writer girish karnad death

    ಕಾರ್ನಾಡರ ನಿಧನರಾದ ವಿಷಯ ತಿಳಿದು ದುಃಖದಲ್ಲಿ ಇರುವ ಸಂಯುಕ್ತ ''ಅವರ ಆತ್ಮಕ್ಕೆ ಶಾಂತಿ ಸಿಗಲಿ'' ಎಂದು ಸಂತಾಪ ಸೂಚಿಸಿದ್ದಾರೆ.

    ಪ್ರಧಾನಿ ಮೋದಿರಿಂದ ಹಿಡಿದು, ನಟ ಕಮಲ್ ಹಾಸನ್, ಶಿವರಾಜ್ ಕುಮಾರ್, ಸುಮಲತಾ ಅಂಬರೀಶ್ ಹೀಗೆ ಅನೇಕರು ಕಾರ್ನಾಡರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

    ಗಿರೀಶ್ ಕಾರ್ನಾಡ್ ನಿಧನಕ್ಕೆ ಸಿಂಪಲ್ ಸುನಿ ಮತ್ತು ಪವನ್ ಒಡೆಯರ್ ಸಂತಾಪ ಗಿರೀಶ್ ಕಾರ್ನಾಡ್ ನಿಧನಕ್ಕೆ ಸಿಂಪಲ್ ಸುನಿ ಮತ್ತು ಪವನ್ ಒಡೆಯರ್ ಸಂತಾಪ

    ಕೆಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಇಂದು ಬೆಳಗ್ಗೆ ಬೆಂಗಳೂರಿನ ಲ್ಯಾವಲ್ಲೆ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    English summary
    Kannada actress Samyukta Hornad condolence for writer girish karnad death Kannada popular writer, Jnanpith award winner Girish Karnad passes away Today (June 10th) in Bengaluru.
    Monday, June 10, 2019, 11:37
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X