Don't Miss!
- News ಬಂಡೀಪುರ: ಹುಲಿ ದಾಳಿಯಿಂದ ಮರಿಯಾನೆ ಸಾವು, ನಡುರಸ್ತೆಯಲ್ಲೇ ಮುಗಿಲು ಮುಟ್ಟಿದ ತಾಯಿಯ ಆಕ್ರಂದನ, ವಿಡಿಯೋ ವೈರಲ್
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೊದಲ ಗುರುವನ್ನು ಕಳೆದುಕೊಂಡ ನೋವಿನಲ್ಲಿ ಸಂಯುಕ್ತ
ಕನ್ನಡ ಸಾಹಿತ್ಯ ಲೋಕದ ಖ್ಯಾತ ಸಾಹಿತಿ ಗಿರೀಶ್ ಕಾರ್ನಾಡ್ ಇಂದು (ಜೂನ್ 10) ಬೆಳಗ್ಗೆ ವಿಧಿವಶರಾಗಿದ್ದಾರೆ. ಕಾರ್ನಾಡರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನಟಿ ಸಂಯುಕ್ತ ಹೊರನಾಡು ಗಿರೀಶ್ ಕಾರ್ನಾಡ್ ರನ್ನು ಕಳೆದುಕೊಂಡ ನೋವನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಂಯುಕ್ತ ಹೊರನಾಡು ಅವರ ಮೊದಲ ಗುರು ಗಿರೀಶ್ ಕಾರ್ನಾಡ್ ಆಗಿದ್ದು, ಅವರ ಬದುಕಿನ ಪ್ರಮುಖ ಘಟ್ಟದಲ್ಲಿ ಕಾರ್ನಾಡ್ ಇದ್ದರಂತೆ.
ಗಿರೀಶ್ ಕಾರ್ನಾಡ್ ನಿರ್ದೇಶನದ ಪ್ರಮುಖ ಸಿನಿಮಾಗಳ ಪಟ್ಟಿ
ಸಂಯುಕ್ತ ನಟಿಸಿದ್ದ ಮೊದಲ ಸಿನಿಮಾ, ಮೊದಲ ನಾಟಕ, ನಟನೆಯ ಕೋರ್ಸ್ ಎಲ್ಲವೂ ಶುರು ಆಗಿದ್ದು ಗಿರೀಶ್ ಕಾರ್ನಾಡ್ ಮೂಲಕವೇ ಅಂತೆ. ಹೀಗಾಗಿ ಕಾರ್ನಾಡರನ್ನು ಸಂಯುಕ್ತ ಮೊದಲ ಗುರುವಾಗಿ ಕಾಣುತ್ತಿದ್ದರು.
ಕಾರ್ನಾಡರ ನಿಧನರಾದ ವಿಷಯ ತಿಳಿದು ದುಃಖದಲ್ಲಿ ಇರುವ ಸಂಯುಕ್ತ ''ಅವರ ಆತ್ಮಕ್ಕೆ ಶಾಂತಿ ಸಿಗಲಿ'' ಎಂದು ಸಂತಾಪ ಸೂಚಿಸಿದ್ದಾರೆ.
My first movie, my first play, my first acting course, my first Guru, #GirishKarnad is no more. Rest in peace Sir :( ahhhhhh pic.twitter.com/CtQ7zzQyjO
— Samyukta Hornad (@samyuktahornad) June 10, 2019
ಪ್ರಧಾನಿ ಮೋದಿರಿಂದ ಹಿಡಿದು, ನಟ ಕಮಲ್ ಹಾಸನ್, ಶಿವರಾಜ್ ಕುಮಾರ್, ಸುಮಲತಾ ಅಂಬರೀಶ್ ಹೀಗೆ ಅನೇಕರು ಕಾರ್ನಾಡರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಗಿರೀಶ್ ಕಾರ್ನಾಡ್ ನಿಧನಕ್ಕೆ ಸಿಂಪಲ್ ಸುನಿ ಮತ್ತು ಪವನ್ ಒಡೆಯರ್ ಸಂತಾಪ
ಕೆಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಇಂದು ಬೆಳಗ್ಗೆ ಬೆಂಗಳೂರಿನ ಲ್ಯಾವಲ್ಲೆ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.