Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಣ್ಣಿನಿಂದ ತಮ್ಮ ಕೈಯಾರೆ ಗಣೇಶನ ಮೂರ್ತಿ ತಯಾರಿಸಿದ ನಟಿ ಸಂಯುಕ್ತ
Recommended Video
ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ಎಲ್ಲೆಡೆ ಗೌರಿ-ಗಣೇಶ ಹಬ್ಬಕ್ಕೆ ತಯಾರಿ ನಡೆಯುತ್ತಿದೆ. ಬಣ್ಣ ಬಣ್ಣದ ಗಣೇಶನ ಮೂರ್ತಿಗಳು ಬೆಂಗಳೂರಿನ ರಸ್ತೆಗಳಲ್ಲಿ ರಾರಾಜಿಸುತ್ತಿವೆ. ಈ ನಡುವೆ ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಲು ನಟಿ ಸಂಯುಕ್ತ ಹೊರನಾಡು ಕರೆ ನೀಡಿದ್ದಾರೆ.
ಪ್ರಾಣಿ ಪ್ರಿಯೆ ಆಗಿರುವ ನಟಿ ಸಂಯುಕ್ತ ಹೊರನಾಡು, ಮಣ್ಣಿನಲ್ಲಿ ಗಣಪತಿ ತಯಾರು ಮಾಡುವ ತರಬೇತಿ ಪಡೆದು, ಬೆಂಗಳೂರಿನಲ್ಲಿ ಪರಿಸರ ಸ್ನೇಹಿ ಗಣಪತಿ ತಯಾರು ಮಾಡುವ ಕಾರ್ಯಾಗಾರ ಆರಂಭ ಮಾಡಿದ್ದಾರೆ.
ಮಣ್ಣಿನ ಗಣೇಶ ಮಾಡುವುದನ್ನು ಹೇಳಿ ಕೊಟ್ಟ ಗಣೇಶ್ ಪತ್ನಿ ಶಿಲ್ಪಾ
ಕಾರ್ಯಾಗಾರದಲ್ಲಿ ಶ್ಲೋಕವನ್ನು ಹೇಳುವ ಮೂಲಕ ಗಣಪತಿ ಮೂರ್ತಿ ತಯಾರು ಮಾಡಲಾಗುತ್ತದೆ. ಮಣ್ಣಿನಿಂದ ತಯಾರಿಸುವ ಈ ಮೂರ್ತಿಯಲ್ಲಿ ಬೀಜಗಳನ್ನು ಹಾಕುವುದರಿಂದ, ಮನೆಯ ಹೂಕುಂಡದಲ್ಲೇ ವಿಸರ್ಜನೆ ಮಾಡಿದರೆ, ಅದು ಗಿಡವಾಗಿ ಬೆಳೆಯುತ್ತದೆ.
ಈಗಾಗಲೇ ಇದೇ ರೀತಿ ಮಣ್ಣಿನ ಗಣಪತಿಯನ್ನು ತಯಾರಿಸಿ, ತಮ್ಮ ಮನೆಗೆ ಗಣೇಶನ ಮೂರ್ತಿಯನ್ನ ಸಂಯುಕ್ತ ಹೊರನಾಡು ತೆಗೆದುಕೊಂಡು ಹೋಗಿದ್ದಾರೆ. ಸಂಯುಕ್ತ ರಂತೆ ನೀವೂ ನಿಮ್ಮ ಕೈಯಾರೆ ಗಣೇಶ ಮೂರ್ತಿಯನ್ನ ತಯಾರಿಸಿ, ಪರಿಸರ ಸ್ನೇಹಿ ಗಣೇಶ ಹಬ್ಬವನ್ನ ಸಂಭ್ರಮದಿಂದ ಆಚರಿಸಬಹುದು.