ನಟಿ ವಿಜಯಲಕ್ಷ್ಮಿ ಕಷ್ಟಕ್ಕೆ ಮಿಡಿದ ಕಾರುಣ್ಯ, ಸಂಚಾರಿ ವಿಜಯ್
ಆರ್ಥಿಕ ಸಂಕಷ್ಟದಿಂದ ನೋವು ಅನುಭವಿಸುತ್ತಿರುವ ಹಿರಿಯ ನಟಿ ವಿಜಯಲಕ್ಷ್ಮಿ ಅವರಿಗೆ ಬಿಗ್ ಬಾಸ್ ಖ್ಯಾತಿಯ ಕಾರುಣ್ಯ ರಾಮ್ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಸಹಾಯ ಹಸ್ತ ಚಾಚಿದ್ದಾರೆ.
ಅನಾರೋಗ್ಯದಿಂದ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯಲಕ್ಷ್ಮಿ ಅವರನ್ನ ಭೇಟಿ ಮಾಡಿದ್ದ ಕಾರುಣ್ಯ ರಾಮ್ 25 ಸಾವಿರ ದುಡ್ಡು ನೀಡಿ ಸಾಂತ್ವನ ಹೇಳಿದ್ದಾರೆ.
ಇನ್ನು ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರು ಕೂಡ ವಿಜಯಲಕ್ಷ್ಮಿ ಅವರ ಆರೋಗ್ಯ ವಿಚಾರಿಸಿ 30 ಸಾವಿರ ಹಣ ನೀಡಿ ಸಹಾಯ ಮಾಡಿದ್ದಾರೆ. ಖುದ್ದು ವಿಜಯಲಕ್ಷ್ಮಿ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದು, ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಸದ್ಯ ವಿಜಯಲಕ್ಷ್ಮಿ ಅವರು ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಯ ವೈದ್ಯರೇ ಒತ್ತಡ ಹೇರಿ ಡಿಸ್ಚಾರ್ಜ್ ಮಾಡಿದ್ದಾರೆ ಎಂದು ನಟಿ ವಿಜಯಲಕ್ಷ್ಮಿ ಆರೋಪಿಸಿದ್ದಾರೆ.
ಈ ಹಿಂದೆ ಕಿಚ್ಚ ಸುದೀಪ್ ಅವರು ವಿಜಯಲಕ್ಷ್ಮಿ ಅವರ ಚಿಕಿತ್ಸೆಗೆ 1 ಲಕ್ಷ ಹಣ ನೀಡಿ ನೆರವಾಗಿದ್ದಾರೆ. ಇನ್ನು ಕನ್ನಡ, ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿರುವ ವಿಜಯಲಕ್ಷ್ಮಿ ಸ್ವಸ್ತಿಕ್, ನಾಗಮಂಡಲ, ಸೂರ್ಯವಂಶ, ಹಬ್ಬ, ಜೋಡಿ ಹಕ್ಕಿ ಅಂತಹ ಚಿತ್ರಗಳಲ್ಲಿ ನಟಿಸಿದ್ದಾರೆ.


Click it and Unblock the Notifications











