Don't Miss!
- News Neha Hiremath: ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡಲು ವಿಎಚ್ಪಿ ಒತ್ತಾಯ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣುವರ್ಧನ್ ಹುಟ್ಟುಹಬ್ಬಕ್ಕೆ ಸಂಚಾರಿ ವಿಜಯ್ 'ದಾದಾ ನೆನಪು'
ಇಂದು ನಟ ವಿಷ್ಣುವರ್ಧನ್ ಹುಟ್ಟುಹಬ್ಬ. ಸಾಹಸಸಿಂಹನ ಹುಟ್ಟುಹಬ್ಬವನ್ನು ಖುಷಿಯಿಂದ ಆಚರಿಸುತ್ತಿದ್ದಾರೆ ಅಭಿಮಾನಿಗಳು. ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ಸಹ ವಿಷ್ಣುವರ್ಧನ್ ಅವರ ಪಕ್ಕಾ ಅಭಿಮಾನಿಗಳು. ಹಲವರು ಇಂದು ವಿಷ್ಣು ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.
ನಟ ಸಂಚಾರಿ ವಿಜಯ್, ತಮ್ಮ ಮೆಚ್ಚಿನ ನಟನ ಹುಟ್ಟುಹಬ್ಬದ ದಿನದಂದು ತುಸು ಭಿನ್ನವಾಗಿ ಶುಭಾಶಯ ಸಲ್ಲಿಸಿದ್ದಾರೆ. ಸಂಚಾರಿ ವಿಜಯ್ ಅವರು ವಿಷ್ಣುವರ್ಧನ್ ಅವರ ದಾದಾ ಪೋಸ್ಟರ್ ಅನ್ನು ಚಿತ್ರ ಬಿಡಿಸಿ ತಮ್ಮ ಅಭಿಮಾನ ಪ್ರಕಟಿಸಿದ್ದಾರೆ.
'ಅಂಬಿಗೆ ವಿಷ್ಣು ಕೇವಲ ಸ್ನೇಹಿತರಾಗಿರಲಿಲ್ಲ, ಪ್ರಾಣವೇ ಆಗಿದ್ದರು'- ಸುಮಲತಾ
ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ವಿಷ್ಣು ಅವರ ಬಗ್ಗೆ ಅಭಿಮಾನ ಮೊಳೆತ ಬಗ್ಗೆ, ಹಾಗೂ ವಿಷ್ಣು ಅವರ ಸಿನಿಮಾಗಳೊಟ್ಟಿಗಿನ ನೆನಪನ್ನು ಹಂಚಿಕೊಂಡಿದ್ದಾರೆ ಸಂಚಾರಿ ವಿಜಯ್.
ಪೋಲಿಸರಿಂದ ಲಾಠಿ ಏಟು ತಿಂದು ಅಂತಿಮ ದರ್ಶನ
'ವಿಷ್ಣು ಸರ್ ಬದುಕಿದ್ದಾಗ ಒಮ್ಮೆಯೂ ಅವರನ್ನೂ ಹತ್ತಿರದಿಂದ ನೋಡಿ ಮಾತನಾಡಿಸುವ ಅವಕಾಶ ಒದಗಿಬರಲಿಲ್ಲ ಆದರೆ ಅವರು ಕಾಲವಾದ ಮಾರನೆಯ ದಿನ ಕೊನೆಯ ಅವಕಾಶ ಸಿಕ್ಕಿದ್ದು ನ್ಯಾಷನ್ ಕಾಲೇಜು ಮೈದಾನದಲ್ಲಿ, ಅಲ್ಲಿಯೂ ಆ ಜನ ಜಂಗುಳಿಯಲ್ಲಿ ಪೊಲೀಸರಿಂದ ಲಾಠಿ ಏಟು ತಿಂದು ಹರಿದ ಚಪ್ಪಲಿ ಎಳೆದಾಡಿಕೊಂಡು ಸಿಕ್ಕ ಅವಕಾಶದಲ್ಲೇ ಅಂತಿಮ ದರ್ಶನ ಮಾಡಿ ಸಮಾಧಾನ ಮಾಡಿಕೊಂಡಿದ್ದಾಯ್ತು' ಎಂದಿದ್ದಾರೆ ಸಂಚಾರಿ ವಿಜಯ್.
ವಿಷ್ಣುವರ್ಧನ್ ಅವರನ್ನು ಅನುಕರಣೆ ಮಾಡುತ್ತಿದ್ದರಂತೆ ಸಂಚಾರಿ ವಿಜಯ್
'ಚಿಕ್ಕಂದಿನಲ್ಲಿ "ದಾದಾ" ಚಿತ್ರ ತೆರೆಕಂಡಾಗ ನೋಡಿ ಹೊರಬಂದು ಅದೇ ಭಂಗಿಯಲ್ಲಿ ನಡೆಯೋದು, ಮಾತಾಡುವುದು, ಕೈ ತಿರುಗಿಸಿ ಅನುಕರಣೆ ಮಾಡೋ ಹುಚ್ಚು ಹತ್ತಿಸ್ಕೊಂಡಿದ್ವಿ . ಕನ್ನಡ ಸಿನೆಮಾಗಳ ಶೀರ್ಷಿಕೆಯನ್ನು ಮುದ್ದಾಗಿ ಬರೆಯೋ ಅಭ್ಯಾಸ ಬೆಳೆಸಿಕೊಂಡು ಬಂದಿದ್ದ ನಾನು ಈ ಚಿತ್ರದ ಶೀರ್ಷಿಕೆಯನ್ನು ಪೋಸ್ಟರ್ ನಲ್ಲಿ ಹೇಗಿತ್ತೋ ಹಾಗೆ ಬರೆಯುವುದನ್ನು ರೂಢಿಸಿಕೊಂಡಿದ್ದೆ, ಯಾರೇ ಬಂದು ಕೇಳಿದರೂ ಸಹ ಇಲ್ಲಾ ಅನ್ನದೆ ಬರೆದು ಕೊಡುತ್ತಿದ್ದೆ' ಎಂದಿರುವ ಸಂಚಾರಿ ವಿಜಯ್ ಫೇಸ್ಬುಕ್ನಲ್ಲಿ ದಾದಾ ಪೋಸ್ಟರ್ ಅನ್ನು ತಿದ್ದಿದ ಚಿತ್ರ ಹಂಚಿಕೊಂಡಿದ್ದಾರೆ.
ಶಿವಣ್ಣ ಫೇವರೆಟ್, ರಚಿತಾ ರಾಮ್-ಸುದೀಪ್ ಬಗ್ಗೆ ಶ್ರುತಿ ಹೇಳಿದ್ದೇನು?
ವಿಷ್ಣು ಗುಣಗಳಿಂದ ಪ್ರಭಾವಿತರಾಗಿದ್ದ ಸಂಚಾರಿ ವಿಜಯ್
'ಹೀಗೆ ತಿಳುವಳಿಕೆಯಿಲ್ಲದ ವಯಸ್ಸಲ್ಲೇ ಗೊತ್ತಿಲ್ಲದೇ ಅವರ ಚಿತ್ರದ ಶೀರ್ಷಿಕೆಗಳನ್ನು ಬರೆಯುತ್ತ ಸಿನಿಮಾಗಳನ್ನು ನೋಡುತ್ತಾ ಸಾವಿರಾರು ಜನರಲ್ಲಿ ನಾನೂ ಒಬ್ಬ ವಿಷ್ಣು ಸರ್ ಅಭಿಮಾನಿಯಾದೆ. ಮುಂದೆ ಅವರ ನಡೆ-ನುಡಿ ಕಷ್ಟದಲ್ಲಿರುವವರನ್ನು ಕಂಡು ಮರುಗುವ ಮನಸ್ಸು, ಹೊಸಬರನ್ನು ಪ್ರೋತ್ಸಾಹಿಸಿ ಬೆನ್ನು ತಟ್ಟುವ ಮಾನವೀಯ ಗುಣಗಳನ್ನು ಕೇಳಿ ತುಂಬಾ ಪ್ರಭಾವಿತನಾಗಿದ್ದೆ' ಎಂದು ನೆನಪಿಸಿಕೊಂಡಿದ್ದಾರೆ ವಿಜಯ್.
Recommended Video
ವಿಷ್ಣುವರ್ಧನ ಹೇಳಿದ್ದ ಮಾತು ವಿಜಯ್ಗೆ ಸ್ಪೂರ್ತಿ
'ವಿಷ್ಣುವರ್ಧನ್ ಅವರು ಹೇಳಿದ ಮಾತೊಂದು, 'ಯಾರಿಗಾದರೂ ಸಹಾಯ ಮಾಡಿದರೆ ಅದನ್ನು ಅಲ್ಲಿಗೇ ಮರೆತುಬಿಡು, ಸಹಾಯ ಮಾಡಿದೆನೆಂಬ ಸಣ್ಣ ಅಹಂ ಕೂಡ ನಿನ್ನೊಳಗೆ ಇರದಂತೆ'. ಈ ಮಾತು ನನ್ನಂತಹ ಹಲವಾರು ಜನರ ಮೇಲೆ ಪ್ರಭಾವ ಬೀರಿದೆ. ಇಂದು ನಮ್ಮೊಂದಿಗೆ ನೀವಿದ್ದಿದ್ದರೆ ಇಂದಿನ ಯುವ ಪೀಳಿಗೆಗೆ ಮತ್ತಷ್ಟು ಸ್ಪೂರ್ತಿಯಾಗುತ್ತಿದ್ದೀರಿ. ಸ್ನೇಹಜೀವಿ ಕರುನಾಡ ಯಜಮಾನರೇ ನಿಮಗೆ ಮತ್ತೊಮ್ಮೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು' ಎಂದು ಶುಭಾಶಯ ಕೋರಿದ್ದಾರೆ ವಿಜಯ್.
'ವಿಷ್ಣು ಸಹೋದರ ರವಿ ಹೇಳಿದ 'ಆ ಮಾತು' ನನ್ನ ಕಿವಿಯಲ್ಲಿ ರಿಂಗಣಿಸುತ್ತಿದೆ'