Don't Miss!
- News Lok Sabha Election 2024: ಬೆಂಗಳೂರು ಉತ್ತರದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಶೋಭಾ ಎದುರು ‘ಕೈ’ ಅಸ್ತ್ರ ವರ್ಕೌಟ್ ಆಗುತ್ತಾ?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೈಕ್ ಅಪಘಾತ: ದೂರು ದಾಖಲಿಸಿದ ಸಂಚಾರಿ ವಿಜಯ್ ಸಹೋದರ
ಬೈಕ್ನಲ್ಲಿ ತೆರಳುತ್ತಿದ್ದಾಗ ನಡೆದ ಅಪಘಾತದಿಂದ ನಟ ಸಂಚಾರಿ ವಿಜಯ್ ಮತ್ತು ಸ್ನೇಹಿತ ನವೀನ್ಗೆ ಗಂಭೀರ ಗಾಯವಾಗಿದೆ. ಸದ್ಯ, ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮತ್ತೊಂದೆಡೆ ಸಂಚಾರಿ ವಿಜಯ್ ಸಹೋದರ ಸಿದ್ದೇಶ್ ಕುಮಾರ್ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
Breaking: ಸಂಚಾರಿ ವಿಜಯ್ಗೆ ಅಪಘಾತ, ಐಸಿಯುನಲ್ಲಿ ಚಿಕಿತ್ಸೆ
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ 'ಸಂಚಾರಿ ವಿಜಯ್ ಮತ್ತು ನವೀನ್ ಇಬ್ಬರು ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದರು. ಶನಿವಾರ ರಾತ್ರಿ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅಪಘಾತದ ಬಗ್ಗೆ ನನಗೂ ಸ್ಪಷ್ಟವಾದ ಮಾಹಿತಿ ಇಲ್ಲ. ಆಕ್ಸಿಡೆಂಟ್ ಕುರಿತು ದೂರು ನೀಡಿದ್ದೇನೆ' ಎಂದು ತಿಳಿಸಿದ್ದಾರೆ.
ಶನಿವಾರ ರಾತ್ರಿ ಅಪಘಾತ ನಡೆದಿದೆ. ಮುಂಜಾನೆ ಆಸ್ಪತ್ರೆಯಿಂದ ಮೆಮೋ ಬಂದಾಗ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಕೂಡಲೇ ಆಸ್ಪತ್ರೆಗೆ ತೆರಳಿ ಮಾಹಿತಿ ಕಲೆಹಾಕಿರುವ ಜಯನಗರ ಸಂಚಾರಿ ಪೊಲೀಸರು ಅಪಘಾತ ಆದ ಬೈಕ್ ವಶಕ್ಕೆ ಪಡೆದಿದ್ದಾರೆ.
ಬೈಕ್ ಚಾಲನೆ ಮಾಡ್ತಿದ್ದ ನವೀನ್ ಪೊಲೀಸರ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದಿರುವುದಾಗಿ ಹೇಳಿಕೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಂಚಾರಿ ವಿಜಯ್ಗೆ ಏನಾಗಿದೆ, ವೈದ್ಯರು ಏನು ಹೇಳಿದ್ರು?
ಇನ್ನು ಸಹೋದರ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ ಸಹೋದರ ಸಿದ್ದೇಶ್, ''ಸಂಚಾರಿ ವಿಜಯ್ಗೆ ಏನು ಆಗಬಾರದು, ದಯವಿಟ್ಟು ಎಲ್ಲರೂ ಅವರಿಗಾಗಿ ಪ್ರಾರ್ಥಿಸಿ, ಅವರೊಬ್ಬ ಒಳ್ಳೆಯ ವ್ಯಕ್ತಿ'' ಎಂದು ಭಾವುಕರಾದರು.