Don't Miss!
- News Karnataka LS Election 2024 LIVE: ಇಂದು ಮೊದಲ ಹಂತದ ಮತದಾನಕ್ಕೆ ಸಿದ್ಧವಾದ ರಾಜ್ಯದ 14 ಕ್ಷೇತ್ರಗಳು
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟೂರಲ್ಲಿ ಮಣ್ಣು ಸೇರಿದ ಸಂಚಾರಿ ವಿಜಯ್: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
ರಸ್ತೆ ಅಪಘಾತದಿಂದ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಸಂಚಾರಿ ವಿಜಯ್ರ ಅಂತ್ಯಕ್ರಿಯೆ ಹುಟ್ಟೂರಾದ ಪಂಚನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
Recommended Video
ಇಂದು ಬೆಳಿಗ್ಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಚಾರಿ ವಿಜಯ್ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಸಿನಿಮಾ ಗಣ್ಯರು, ರಂಗಭೂಮಿ ಗಣ್ಯರು, ರಾಜಕಾರಣಿಗಳು ವಿಜಯ್ರ ಅಂತಿಮ ದರ್ಶನ ಪಡೆದುಕೊಂಡರು.
ಅದರ ಬಳಿಕ ಆಂಬುಲೆನ್ಸ್ನಲ್ಲಿ ವಿಜಯ್ರನ್ನು ಹುಟ್ಟೂರಿಗೆ ತೆಗೆದುಕೊಂಡು ಹೋಗಲಾಯಿತು. ಆಂಬುಲೆನ್ಸ್ ಹೋಗುತ್ತಿದ್ದ ದಾರಿಯುದ್ದಕ್ಕೂ ಗ್ರಾಮಸ್ಥರು, ವಿಜಯ್ ಅಭಿಮಾನಿಗಳು ಕೈಮುಗಿದು ವಿಜಯ್ಗೆ ಅಂತಿಮ ವಿದಾಯ ಹೇಳಿದರು.
ಸಂಜೆ ವೇಳೆಗೆ ಹುಟ್ಟೂರಿಗೆ ವಿಜಯ್ ಪಾರ್ಥಿವ ಶರೀರ ತಲುಪಿತು. ಊರ ಹೆಮ್ಮೆಯ ಮಗನನ್ನು ಕೊನೆಯ ಬಾರಿ ನೋಡಲು ಜನಸಾಗರವೇ ಹರಿದುಬಂದಿತ್ತು. ಆಂಬುಲೆನ್ಸ್ ನಿಲ್ಲಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು.
ಆ ವೇಳೆಗಾಗಲೇ ವಿಜಯ್ರ ಗೆಳೆಯ ರಘು ಅವರ ತೋಟದಲ್ಲಿ ಅಂತಿಮ ಸಂಸ್ಕಾರಕ್ಕೆ ಅಣಿ ಮಾಡಲಾಗಿತ್ತು. ಹಿಂದು ಲಿಂಗಾಯತ ಪದ್ಧತಿಯಂತೆ ಅಂತಿಮ ವಿಧಿ-ವಿಧಾನಗಳನ್ನು ಮಾಡಲಾಯಿತು. ಕುಪ್ಪೂರು ಗದ್ದುಗೆ ಮಠದ ಡಾ.ಯತೀಶ್ವರ್ ಶಿವಾಚಾರ್ಯರ ನೇತೃತ್ವದಲ್ಲಿ ಅಂತಿಮ ವಿಧಿ-ವಿಧಾನಗಳನ್ನು ಪೂರೈಸಲಾಯಿತು. ಸಕಲ ಸರ್ಕಾರಿ ಗೌರವದೊಂದಿಗೆ ವಿಜಯ್ ಪಾರ್ಥಿವ ಶರೀರವನ್ನು ಮಣ್ಣು ಮಾಡಲಾಯಿತು. ಊರ ಜನರು, ವಿಜಯ್ ಸ್ನೇಹಿತರು, ಕುಟುಂಬದವರು ಭಾರವಾದ ಹೃದಯದಿಂದ ವಿಜಯ್ ಅನ್ನು ಬೀಳ್ಕೊಟ್ಟರು.