Don't Miss!
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Sports Rishabh Pant: ಟಿ20 ವಿಶ್ವಕಪ್ಗೆ ರಿಷಭ್ ಪಂತ್ ಭಾರತ ತಂಡದಲ್ಲಿರಬೇಕು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟೂರಲ್ಲಿ ಮಣ್ಣು ಸೇರಿದ ಸಂಚಾರಿ ವಿಜಯ್: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
ರಸ್ತೆ ಅಪಘಾತದಿಂದ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಸಂಚಾರಿ ವಿಜಯ್ರ ಅಂತ್ಯಕ್ರಿಯೆ ಹುಟ್ಟೂರಾದ ಪಂಚನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
Recommended Video
ಇಂದು ಬೆಳಿಗ್ಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಚಾರಿ ವಿಜಯ್ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಸಿನಿಮಾ ಗಣ್ಯರು, ರಂಗಭೂಮಿ ಗಣ್ಯರು, ರಾಜಕಾರಣಿಗಳು ವಿಜಯ್ರ ಅಂತಿಮ ದರ್ಶನ ಪಡೆದುಕೊಂಡರು.
ಅದರ ಬಳಿಕ ಆಂಬುಲೆನ್ಸ್ನಲ್ಲಿ ವಿಜಯ್ರನ್ನು ಹುಟ್ಟೂರಿಗೆ ತೆಗೆದುಕೊಂಡು ಹೋಗಲಾಯಿತು. ಆಂಬುಲೆನ್ಸ್ ಹೋಗುತ್ತಿದ್ದ ದಾರಿಯುದ್ದಕ್ಕೂ ಗ್ರಾಮಸ್ಥರು, ವಿಜಯ್ ಅಭಿಮಾನಿಗಳು ಕೈಮುಗಿದು ವಿಜಯ್ಗೆ ಅಂತಿಮ ವಿದಾಯ ಹೇಳಿದರು.
ಸಂಜೆ ವೇಳೆಗೆ ಹುಟ್ಟೂರಿಗೆ ವಿಜಯ್ ಪಾರ್ಥಿವ ಶರೀರ ತಲುಪಿತು. ಊರ ಹೆಮ್ಮೆಯ ಮಗನನ್ನು ಕೊನೆಯ ಬಾರಿ ನೋಡಲು ಜನಸಾಗರವೇ ಹರಿದುಬಂದಿತ್ತು. ಆಂಬುಲೆನ್ಸ್ ನಿಲ್ಲಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು.
ಆ ವೇಳೆಗಾಗಲೇ ವಿಜಯ್ರ ಗೆಳೆಯ ರಘು ಅವರ ತೋಟದಲ್ಲಿ ಅಂತಿಮ ಸಂಸ್ಕಾರಕ್ಕೆ ಅಣಿ ಮಾಡಲಾಗಿತ್ತು. ಹಿಂದು ಲಿಂಗಾಯತ ಪದ್ಧತಿಯಂತೆ ಅಂತಿಮ ವಿಧಿ-ವಿಧಾನಗಳನ್ನು ಮಾಡಲಾಯಿತು. ಕುಪ್ಪೂರು ಗದ್ದುಗೆ ಮಠದ ಡಾ.ಯತೀಶ್ವರ್ ಶಿವಾಚಾರ್ಯರ ನೇತೃತ್ವದಲ್ಲಿ ಅಂತಿಮ ವಿಧಿ-ವಿಧಾನಗಳನ್ನು ಪೂರೈಸಲಾಯಿತು. ಸಕಲ ಸರ್ಕಾರಿ ಗೌರವದೊಂದಿಗೆ ವಿಜಯ್ ಪಾರ್ಥಿವ ಶರೀರವನ್ನು ಮಣ್ಣು ಮಾಡಲಾಯಿತು. ಊರ ಜನರು, ವಿಜಯ್ ಸ್ನೇಹಿತರು, ಕುಟುಂಬದವರು ಭಾರವಾದ ಹೃದಯದಿಂದ ವಿಜಯ್ ಅನ್ನು ಬೀಳ್ಕೊಟ್ಟರು.