Don't Miss!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- News ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನ ಇಳಿಸಲು ಕಾಯುತ್ತಿದ್ದಾರೆ: ಕಾರಣ ಬಿಚ್ಚಿಟ್ಟ ಜನಾರ್ದನ ರೆಡ್ಡಿ
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Technology Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ, ಅಂಗಾಂಗ ದಾನ ಮಾಡಲು ಕುಟುಂಬ ನಿರ್ಧಾರ
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತಿಲ್ಲ ಎಂದು ವೈದ್ಯ ಡಾ ಅರುಣ್ ನಾಯಕ್ ಸೋಮವಾರ ಬೆಳಗ್ಗೆ ಮಾಹಿತಿ ನೀಡಿದ್ದಾರೆ. ಶಸ್ತ್ರ ಚಿಕಿತ್ಸೆ ಬಳಿಕ ಸುಮಾರು 36 ಗಂಟೆಗಳು ಆಗಿವೆ. ಇದುವರೆಗೂ ವಿಜಯ್ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಮೆದುಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಆಘಾತಕಾರಿ ವಿಷಯ ತಿಳಿಸಿದರು.
ವೈದ್ಯರು ಹೇಳಿಕೆ ಪ್ರಕಾರ ನಟ ಸಂಚಾರಿ ವಿಜಯ್ ಬದುಕುಳಿಯುವ ಸಾಧ್ಯತೆ ಬಹಳ ಕಡಿಮೆ ಇದೆ. ಈ ಬಗ್ಗೆ ವಿಜಯ್ ಸಹೋದರ ಸಿದ್ದೇಶ್ ಸಹ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, 'ವಿಜಯ್ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದೇವೆ'' ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಸಂಚಾರಿ ವಿಜಯ್ ಚಿಕಿತ್ಸಾ ವೆಚ್ಚ ಭರಿಸಿದ ಡಾ ಅಶ್ವಥ್ ನಾರಾಯಣ
'ವೈದ್ಯರ ಹೇಳಿಕೆ ಪ್ರಕಾರ ವಿಜಯ್ ಬದುಕಿ ಬರುವ ಸಾಧ್ಯತೆ ಬಹಳ ಕಡಿಮೆ. ಒಂದು ವೇಳೆ ಏನಾದರು ಅನಾಹುತ ಆದರೆ ಸಹೋದರನ ಅಂಗಾಂಗಗಳನ್ನು ದಾನ ಮಾಡುತ್ತೇವೆ. ರಾಷ್ಟ್ರ ಪ್ರಶಸ್ತಿ, ರಾಜ್ಯಪ್ರಶಸ್ತಿ ಎಂಬ ಅಹಂ ಇಲ್ಲದೇ ಜನರ ಜೊತೆ ಇದ್ದ. ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದ. ಕೋವಿಡ್ ಸಂದರ್ಭದಲ್ಲಿ 24 ಗಂಟೆಗೂ ಕೆಲಸ ಮಾಡಿದ್ದ. ಹಾಗಾಗಿ, ಅವನ ದೇಹದ ಅಂಗಾಂಗಗಳು ಸಮಾಜಕ್ಕೆ ಬಳಕೆಯಾಗಲಿ'' ಎಂದು ಗದ್ಗದಿತರಾದರು.
'ವಿಜಯ್ ಬರ್ತಾರೆ ಎಂಬ ಭರವಸೆ ಬಹಳ ಕುಗ್ಗಿದೆ. ಇನ್ನು ತಡವಾದರೆ ಅಂಗಾಂಗಗಳು ದಾನ ಮಾಡಲು ಆಗಲ್ಲ. ವೈದ್ಯಕೀಯ ಕಾರಣಕ್ಕಾಗಿ ಅಂಗಾಂಗಳನ್ನು ದಾನ ಮಾಡುವ ಬಗ್ಗೆ ಬೇಗ ನಿರ್ಣಯ ಮಾಡಲಾಗಿದೆ' ಎಂದು ಸಹೋದರ ಕಣ್ಣೀರಿಟ್ಟಿದ್ದಾರೆ.
ಶನಿವಾರ ರಾತ್ರಿ ಬೈಕ್ನಲ್ಲಿ ತೆರಳುತ್ತಿದ್ದ ಸಮಯದಲ್ಲಿ ಅಪಘಾತವಾಗಿದೆ. ಚಾಲಕ ನವೀನ್ ಪ್ರಾಣಾಪಾಯದಿಂದ ಪಾರಾಗಿದ್ದು, ವಿಜಯ್ಗೆ ಮೆದುಳಿನ ಬಲ ಭಾಗದಲ್ಲಿ ಗಂಭೀರವಾಗಿ ಪೆಟ್ಟಾಗಿದೆ. ತಲೆಗೆ ಹೆಚ್ಚು ಗಾಯವಾದ ಪರಿಣಾಮ ಕೋಮಾ ತಲುಪಿದ್ದಾರೆ.