Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ, ಅಂಗಾಂಗ ದಾನ ಮಾಡಲು ಕುಟುಂಬ ನಿರ್ಧಾರ
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತಿಲ್ಲ ಎಂದು ವೈದ್ಯ ಡಾ ಅರುಣ್ ನಾಯಕ್ ಸೋಮವಾರ ಬೆಳಗ್ಗೆ ಮಾಹಿತಿ ನೀಡಿದ್ದಾರೆ. ಶಸ್ತ್ರ ಚಿಕಿತ್ಸೆ ಬಳಿಕ ಸುಮಾರು 36 ಗಂಟೆಗಳು ಆಗಿವೆ. ಇದುವರೆಗೂ ವಿಜಯ್ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಮೆದುಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಆಘಾತಕಾರಿ ವಿಷಯ ತಿಳಿಸಿದರು.
ವೈದ್ಯರು ಹೇಳಿಕೆ ಪ್ರಕಾರ ನಟ ಸಂಚಾರಿ ವಿಜಯ್ ಬದುಕುಳಿಯುವ ಸಾಧ್ಯತೆ ಬಹಳ ಕಡಿಮೆ ಇದೆ. ಈ ಬಗ್ಗೆ ವಿಜಯ್ ಸಹೋದರ ಸಿದ್ದೇಶ್ ಸಹ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, 'ವಿಜಯ್ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದೇವೆ'' ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಸಂಚಾರಿ ವಿಜಯ್ ಚಿಕಿತ್ಸಾ ವೆಚ್ಚ ಭರಿಸಿದ ಡಾ ಅಶ್ವಥ್ ನಾರಾಯಣ
'ವೈದ್ಯರ ಹೇಳಿಕೆ ಪ್ರಕಾರ ವಿಜಯ್ ಬದುಕಿ ಬರುವ ಸಾಧ್ಯತೆ ಬಹಳ ಕಡಿಮೆ. ಒಂದು ವೇಳೆ ಏನಾದರು ಅನಾಹುತ ಆದರೆ ಸಹೋದರನ ಅಂಗಾಂಗಗಳನ್ನು ದಾನ ಮಾಡುತ್ತೇವೆ. ರಾಷ್ಟ್ರ ಪ್ರಶಸ್ತಿ, ರಾಜ್ಯಪ್ರಶಸ್ತಿ ಎಂಬ ಅಹಂ ಇಲ್ಲದೇ ಜನರ ಜೊತೆ ಇದ್ದ. ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದ. ಕೋವಿಡ್ ಸಂದರ್ಭದಲ್ಲಿ 24 ಗಂಟೆಗೂ ಕೆಲಸ ಮಾಡಿದ್ದ. ಹಾಗಾಗಿ, ಅವನ ದೇಹದ ಅಂಗಾಂಗಗಳು ಸಮಾಜಕ್ಕೆ ಬಳಕೆಯಾಗಲಿ'' ಎಂದು ಗದ್ಗದಿತರಾದರು.
'ವಿಜಯ್ ಬರ್ತಾರೆ ಎಂಬ ಭರವಸೆ ಬಹಳ ಕುಗ್ಗಿದೆ. ಇನ್ನು ತಡವಾದರೆ ಅಂಗಾಂಗಗಳು ದಾನ ಮಾಡಲು ಆಗಲ್ಲ. ವೈದ್ಯಕೀಯ ಕಾರಣಕ್ಕಾಗಿ ಅಂಗಾಂಗಳನ್ನು ದಾನ ಮಾಡುವ ಬಗ್ಗೆ ಬೇಗ ನಿರ್ಣಯ ಮಾಡಲಾಗಿದೆ' ಎಂದು ಸಹೋದರ ಕಣ್ಣೀರಿಟ್ಟಿದ್ದಾರೆ.
ಶನಿವಾರ ರಾತ್ರಿ ಬೈಕ್ನಲ್ಲಿ ತೆರಳುತ್ತಿದ್ದ ಸಮಯದಲ್ಲಿ ಅಪಘಾತವಾಗಿದೆ. ಚಾಲಕ ನವೀನ್ ಪ್ರಾಣಾಪಾಯದಿಂದ ಪಾರಾಗಿದ್ದು, ವಿಜಯ್ಗೆ ಮೆದುಳಿನ ಬಲ ಭಾಗದಲ್ಲಿ ಗಂಭೀರವಾಗಿ ಪೆಟ್ಟಾಗಿದೆ. ತಲೆಗೆ ಹೆಚ್ಚು ಗಾಯವಾದ ಪರಿಣಾಮ ಕೋಮಾ ತಲುಪಿದ್ದಾರೆ.