Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ತಲೆದಂಡ' ಟ್ರೇಲರ್ ಬಿಡುಗಡೆ: ಸಂಚಾರಿ ವಿಜಯ್ ನಟನಾ ಪ್ರತಿಭೆಗೆ ಮತ್ತೊಂದು ಸಾಕ್ಷಿ
ಸಂಚಾರಿ ವಿಜಯ್ ನಿಧನ ಹೊಂದಿದ್ದಾರೆ. ಅವರು ಭೌತಿಕವಾಗಿ ನಮ್ಮನ್ನು ಅಗಲಿದ್ದರೂ ಸಿನಿಮಾಗಳ ಮೂಲಕ, ಅದ್ಭುತ ನಟನೆ ಮೂಲಕ ಸಿನಿಪ್ರೇಮಿಗಳ ಮನದಲ್ಲಿ ಸದಾ ಜೀವಂತವಿರಲಿದ್ದಾರೆ.
Recommended Video
ಸಂಚಾರಿ ವಿಜಯ್ ನಟನೆಯ 'ತಲೆದಂಡ' ಸಿನಿಮಾದ ಟ್ರೇಲರ್ ಅನ್ನು ಚಿತ್ರತಂಡ ಇದೀಗ ಬಿಡುಗಡೆ ಮಾಡಿದೆ. ಟ್ರೇಲರ್ನಲ್ಲಿ ವಿಜಯ್ ನಟನೆ ನೋಡಿದರೆ ಇಂಥಹಾ ಅದ್ಭುತ ನಟ ಅಕಾಲಿಕವಾಗಿ ಅಗಲಿ ಹೋಗಿಬಿಟ್ಟರಲ್ಲ ಎಂದು ಕರುಳು ಕಿವುಚಿದಂತಾಗುವುದು ಖಾತ್ರಿ.
'ತಲೆದಂಡ' ಸಿನಿಮಾದಲ್ಲಿ ಬುದ್ಧಿಮಾಂದ್ಯನ ಪಾತ್ರದಲ್ಲಿ ಸಂಚಾರಿ ವಿಜಯ್ ನಟಿಸಿದ್ದಾರೆ. ಬುದ್ದಿಮಾಂದ್ಯನಾದರೂ 'ಬುದ್ಧಿವಂತರು' ಮಾಡುವ ಅನ್ಯಾಯದ ವಿರುದ್ಧ ಹೋರಾಡುವ ಕಥಾವಸ್ತುವನ್ನು 'ತಲೆದಂಡ' ಸಿನಿಮಾ ಹೊಂದಿದೆ. ಟ್ರೇಲರ್ನಲ್ಲಿ ವಿಜಯ್ ನಟನೆ ಕಂಡು ಕಣ್ಣು ತುಂಬಿ ಬರುತ್ತದೆ.
ನಟನೆಗೆ ಈಗಾಗಲೇ ಒಂದು ರಾಷ್ಟ್ರಪ್ರಶಸ್ತಿ ಪಡೆದಿರುವ ವಿಜಯ್ಗೆ 'ತಲೆದಂಡ' ಸಿನಿಮಾಕ್ಕೆ ಮತ್ತೊಂದು ರಾಷ್ಟ್ರಪ್ರಶಸ್ತಿ ದೊರಕುವ ಸಂಭವ ದಟ್ಟವಾಗಿದೆ ಎಂಬುದು ಟ್ರೇಲರ್ ನೋಡಿದರೆ ಗೊತ್ತಾಗುತ್ತಿದೆ.
'ತಲೆದಂಡ' ಸಿನಿಮಾವು ಪರಿಸರ ಮತ್ತು ಮಾನವನ ನಡುವಿನ ಸಂಬಧ. ಪರಿಸರದ ಮೇಲೆ ಮಾನವನ ಅತಿಕ್ರಮಣ ಇತ್ಯಾದಿ ಸಾಮಾಜಿಕ ಕಳಕಳಿಯ ವಿಷಯಗಳನ್ನು ಇರಿಸಿಕೊಂಡು ನಿರ್ಮಿಸಲಾಗಿರುವ ಸಿನಿಮಾ ಆಗಿದೆ.
'ತಲೆದಂಡ' ಸಿನಿಮಾದ ಬಗ್ಗೆ ಸಂಚಾರಿ ವಿಜಯ್ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. 'ತಲೆದಂಡ' ಸಿನಿಮಾಕ್ಕೆ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವದಲ್ಲಿ ಅವಕಾಶ ನೀಡದೇ ಇದ್ದಾಗ. ಈ ನಿರ್ಣಯದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿ ವಿಡಿಯೋ ಪೋಸ್ಟ್ ಹಾಕಿ ಪ್ರತಿಭಟನೆ ವ್ಯಕ್ತಪಡಿಸಿದ್ದರು ವಿಜಯ್.
'ತಲೆದಂಡ' ಸಿನಿಮಾ ಬಿಡುಗಡೆ ಆಗಿಲ್ಲ. ಚಿತ್ರಮಂದಿರಗಳು ತೆರೆದ ಬಳಿಕ ಸಿನಿಮಾ ಬಿಡುಗಡೆ ಆಗುವ ಸಂಭವ ಇದೆ.