Don't Miss!
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ತಲೆದಂಡ' ಟ್ರೇಲರ್ ಬಿಡುಗಡೆ: ಸಂಚಾರಿ ವಿಜಯ್ ನಟನಾ ಪ್ರತಿಭೆಗೆ ಮತ್ತೊಂದು ಸಾಕ್ಷಿ
ಸಂಚಾರಿ ವಿಜಯ್ ನಿಧನ ಹೊಂದಿದ್ದಾರೆ. ಅವರು ಭೌತಿಕವಾಗಿ ನಮ್ಮನ್ನು ಅಗಲಿದ್ದರೂ ಸಿನಿಮಾಗಳ ಮೂಲಕ, ಅದ್ಭುತ ನಟನೆ ಮೂಲಕ ಸಿನಿಪ್ರೇಮಿಗಳ ಮನದಲ್ಲಿ ಸದಾ ಜೀವಂತವಿರಲಿದ್ದಾರೆ.
Recommended Video
ಸಂಚಾರಿ ವಿಜಯ್ ನಟನೆಯ 'ತಲೆದಂಡ' ಸಿನಿಮಾದ ಟ್ರೇಲರ್ ಅನ್ನು ಚಿತ್ರತಂಡ ಇದೀಗ ಬಿಡುಗಡೆ ಮಾಡಿದೆ. ಟ್ರೇಲರ್ನಲ್ಲಿ ವಿಜಯ್ ನಟನೆ ನೋಡಿದರೆ ಇಂಥಹಾ ಅದ್ಭುತ ನಟ ಅಕಾಲಿಕವಾಗಿ ಅಗಲಿ ಹೋಗಿಬಿಟ್ಟರಲ್ಲ ಎಂದು ಕರುಳು ಕಿವುಚಿದಂತಾಗುವುದು ಖಾತ್ರಿ.
'ತಲೆದಂಡ' ಸಿನಿಮಾದಲ್ಲಿ ಬುದ್ಧಿಮಾಂದ್ಯನ ಪಾತ್ರದಲ್ಲಿ ಸಂಚಾರಿ ವಿಜಯ್ ನಟಿಸಿದ್ದಾರೆ. ಬುದ್ದಿಮಾಂದ್ಯನಾದರೂ 'ಬುದ್ಧಿವಂತರು' ಮಾಡುವ ಅನ್ಯಾಯದ ವಿರುದ್ಧ ಹೋರಾಡುವ ಕಥಾವಸ್ತುವನ್ನು 'ತಲೆದಂಡ' ಸಿನಿಮಾ ಹೊಂದಿದೆ. ಟ್ರೇಲರ್ನಲ್ಲಿ ವಿಜಯ್ ನಟನೆ ಕಂಡು ಕಣ್ಣು ತುಂಬಿ ಬರುತ್ತದೆ.
ನಟನೆಗೆ ಈಗಾಗಲೇ ಒಂದು ರಾಷ್ಟ್ರಪ್ರಶಸ್ತಿ ಪಡೆದಿರುವ ವಿಜಯ್ಗೆ 'ತಲೆದಂಡ' ಸಿನಿಮಾಕ್ಕೆ ಮತ್ತೊಂದು ರಾಷ್ಟ್ರಪ್ರಶಸ್ತಿ ದೊರಕುವ ಸಂಭವ ದಟ್ಟವಾಗಿದೆ ಎಂಬುದು ಟ್ರೇಲರ್ ನೋಡಿದರೆ ಗೊತ್ತಾಗುತ್ತಿದೆ.
'ತಲೆದಂಡ' ಸಿನಿಮಾವು ಪರಿಸರ ಮತ್ತು ಮಾನವನ ನಡುವಿನ ಸಂಬಧ. ಪರಿಸರದ ಮೇಲೆ ಮಾನವನ ಅತಿಕ್ರಮಣ ಇತ್ಯಾದಿ ಸಾಮಾಜಿಕ ಕಳಕಳಿಯ ವಿಷಯಗಳನ್ನು ಇರಿಸಿಕೊಂಡು ನಿರ್ಮಿಸಲಾಗಿರುವ ಸಿನಿಮಾ ಆಗಿದೆ.
'ತಲೆದಂಡ' ಸಿನಿಮಾದ ಬಗ್ಗೆ ಸಂಚಾರಿ ವಿಜಯ್ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. 'ತಲೆದಂಡ' ಸಿನಿಮಾಕ್ಕೆ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವದಲ್ಲಿ ಅವಕಾಶ ನೀಡದೇ ಇದ್ದಾಗ. ಈ ನಿರ್ಣಯದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿ ವಿಡಿಯೋ ಪೋಸ್ಟ್ ಹಾಕಿ ಪ್ರತಿಭಟನೆ ವ್ಯಕ್ತಪಡಿಸಿದ್ದರು ವಿಜಯ್.
'ತಲೆದಂಡ' ಸಿನಿಮಾ ಬಿಡುಗಡೆ ಆಗಿಲ್ಲ. ಚಿತ್ರಮಂದಿರಗಳು ತೆರೆದ ಬಳಿಕ ಸಿನಿಮಾ ಬಿಡುಗಡೆ ಆಗುವ ಸಂಭವ ಇದೆ.