Don't Miss!
- News ಡಾ.ಮಂಜುನಾಥ್ ಅವರಿಗೆ ಕೇಂದ್ರ ಸಚಿವ ಸ್ಥಾನ: ಸುಳಿವು ಕೊಟ್ಟ ಹೆಚ್ ಡಿ ದೇವೇಗೌಡ
- Automobiles Maruti Suzuki: 1 ವರ್ಷದಲ್ಲಿಯೇ ಹೊಸ ದಾಖಲೆ.. 134,735 ಫ್ರಾಂಕ್ಸ್ ಕಾರುಗಳು ಮಾರಾಟ, ಬೆಲೆ ರೂ.7.51 ಲಕ್ಷ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂದು ದಾದಾ.. ಇಂದು ಕಿಚ್ಚ ಸುದೀಪ್: ಪುರಿ ಬೀಚ್ನಲ್ಲಿ ಅರಳಿದ ಕಿಚ್ಚನ ಮರಳು ಶಿಲ್ಪ!
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಸುದೀಪ್ ಅದ್ದೂರಿ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಈ ವರ್ಷವೂ ಸರಳವಾಗಿ ಅಭಿಮಾನಿಗಳನ್ನು ಭೇಟಿ ಮಾಡಿ ಶುಭಾಶಯ ಸ್ವೀಕರಿಸಲಿದ್ದಾರೆ. ಇನ್ನು ಸುದೀಪ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಮರಳು ಶಿಲ್ಪದ ತವರೂರು ಒರಿಸ್ಸಾದ ಪುರಿ ಬೀಚ್ನಲ್ಲಿ ಸುದೀಪ್ ಅವರ ಮರಳು ಶಿಲ್ಪ ಅರಳಿದೆ.
ಭಾರತ ಸರ್ಕಾರದ ಅಂಚೆ ಇಲಾಖೆಯಿಂದ ಗೌರವ: ಶೀಘ್ರದಲ್ಲೇ ಕಿಚ್ಚನ ವಿಶೇಷ 'ಅಂಚೆ ಲಕೋಟೆ' ಬಿಡುಗಡೆ!
ಸುದೀಪ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಚಿರಪರಿಚಿತ. ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಶುರುವಾಗುವುದಕ್ಕೂ ಮೊದಲೇ ಬೇರೆ ಭಾಷೆಗಳಲ್ಲಿ ನಟಿಸಿ, ದೇಶ್ಯಾದ್ಯಂತ ಹೆಸರು ಮಾಡಿದ್ದರು. ಈ ಬಾರಿ ಸುದೀಪ್ ಹುಟ್ಟುಹಬ್ಬವನ್ನು ಸ್ಮರಣೀಯವಾಗಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. ಸುದೀಪ್ ಅವರ ಮರಳು ಶಿಲ್ಪ ನೋಡಿ ಅಭಿಮಾನಿಗಳಂತೂ ಖುಷಿಯಾಗಿದ್ದಾರೆ.
ಕಿಚ್ಚನ ಈ ಶಿಲ್ಪವು 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಎಂದು ಶಿಲ್ಪಿ ಮಾನಸ್ ಕುಮಾರ್ ತಿಳಿಸಿದ್ದಾರೆ. ದಕ್ಷಿಣ ಭಾರತದಲ್ಲಿಯೇ ಈ ಮರಳು ಶಿಲ್ಪ ಗೌರವಕ್ಕೆ ಪಾತ್ರವಾಗುತ್ತಿರುವ ಎರಡನೇ ಕಲಾವಿದರೆಂದರೆ ಅದು ಕಿಚ್ಚ ಸುದೀಪ್ ಮಾತ್ರ. ಈ ಹಿಂದೆ 2020ರಲ್ಲಿ ಡಾ.ವಿಷ್ಣುವರ್ಧನ್ ಅವರ 70ನೇ ಜನ್ಮದಿನ ಪ್ರಯುಕ್ತ ಮರಳು ಶಿಲ್ಪದ ಗೌರವ ನೀಡಲಾಗಿತ್ತು. ಮನೀಶ್ ಕುಮಾರ್ 6 ಅಡಿ ಎತ್ತರ 15 ಅಡಿ ಅಗಲದ ದಾದಾ ಮರಳು ಶಿಲ್ಪ ರಚಿಸಿದ್ದರು. ಆ ಮರಳು ಶಿಲ್ಪವೂ ಅಭಿಮಾನಿಗಳ ಮನಗೆದ್ದಿತ್ತು. ಇನ್ನು ಮರಳು ಶಿಲ್ಪದಲ್ಲಿ 'ಕನ್ನಡವೇ ನಮ್ಮಮ್ಮ' ಎಂದು ಬರೆದಿರುವುದು ಗಮನ ಸೆಳೆಯುತ್ತಿದೆ.
ವಿಷ್ಣು ದಾದಾ ಬಿಟ್ಟರೆ ಇದುವರೆಗೆ ಯಾವುದೇ ದಕ್ಷಿಣ ಭಾರತದ ನಟರಿಗೆ ಈ ಗೌರವ ದಕ್ಕಿರಲಿಲ್ಲ. ಇದೀಗ ಸುದೀಪ್ ಹುಟ್ಟುಹಬ್ಬದ ಸಂಭ್ರಮದಲ್ಲೇ ಅವರಿಗೆ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಈಗಾಗಲೇ ಭಾರತ ಸರ್ಕಾರದ ಅಂಚೆ ಇಲಾಖೆಯಿಂದ ವಿಶೇಷ ಲಕೋಟೆಯ ಗೌರವ ಕಿಚ್ಚನಿಗೆ ಸಿಗುತ್ತಿದೆ. ಇದರ ಬೆನ್ನಲ್ಲೇ ದೂರದ ಒರಿಸ್ಸಾದ ಪುರಿ ಬೀಚ್ನಲ್ಲಿ ಸುದೀಪ್ ಮರಳು ಶಿಲ್ಪ ಅರಳಿರುವುದು ವಿಶೇಷ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೊಗಳು ರಾರಾಜಿಸುತ್ತಿದೆ.