Don't Miss!
- News
ಕಾಂಗ್ರೆಸ್ ಸೇರ್ತಾರಾ ಸುದೀಪ್?; ನಟ ಸುದೀಪ್ ಕಾಂಗ್ರೆಸ್ ಗೆ ಬಂದರೆ ಸ್ವಾಗತ: ಸತೀಶ್ ಜಾರಕಿಹೊಳಿ
- Lifestyle
Horoscope Today 4 Feb 2023: ಶನಿವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Sports
ಅದೇನು ಕಷ್ಟದ ಸಿಕ್ಸರ್ ಅಲ್ಲ: ಹ್ಯಾರಿಸ್ ರೌಫ್ಗೆ ವಿರಾಟ್ ಕೊಹ್ಲಿ ಹೊಡೆದ ಸಿಕ್ಸರ್ ಬಗ್ಗೆ ಮಾಜಿ ಕ್ರಿಕೆಟಿಗನ ಪ್ರತಿಕ್ರಿಯೆ
- Technology
ಒಪ್ಪೋ ರೆನೋ 8T 5G ಫಸ್ಟ್ ಲುಕ್: ಪವರ್ಫುಲ್ ಫೀಚರ್ಸ್ ಜೊತೆಗೆ ಹೊಸ ಲುಕ್!
- Automobiles
ಹೊಸ ನವೀಕರಣಗಳೊಂದಿಗೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್
- Finance
ಅದಾನಿ ಕಳೆದುಕೊಂಡಿದ್ದು ಎಷ್ಟು ಲಕ್ಷ ಕೋಟಿ? ಕುಸಿಯುತ್ತಿವೆ ಷೇರುಗಳು- ಭಾರತದ ಶ್ರೀಮಂತನಿಗೆ ಮಂದೇನು ಕಾದಿದೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಕೊಟ್ಲಲ್ಲಪ್ಪೋ ಕೈ' ಸಿನಿಮಾ ಖ್ಯಾತಿಯ ಉದಯೋನ್ಮುಖ ನಟ ಧನುಷ್ ಅಕಾಲಿಕ ಮರಣ
ಕನ್ನಡ ಚಿತ್ರರಂಗದ ಮತ್ತೊಬ್ಬ ಉದಯೋನ್ಮುಖ ನಟ ಧನುಷ್(ಮುತ್ತುರಾಜ) ಕೊನೆಯುಸಿರೆಳೆದಿದ್ದಾರೆ. 'ಸಂಪಿಗೆಹಳ್ಳಿ', 'ಕೊಟ್ಲಲ್ಲಪ್ಪೋ ಕೈ' ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟ ಧನುಷ್ ನಟಿಸಿದ್ದರು. ಶಿವರಾಜ್ಕುಮಾರ್ ಜೊತೆ 'ಲೀಡರ್' ಚಿತ್ರದಲ್ಲೂ ಬಣ್ಣ ಹಚ್ಚಿದ್ದರು. ಸಿನಿಮಾ ಚಿತ್ರೀಕರಣಕ್ಕಾಗಿ ಲಡಾಕ್ಗೆ ತೆರಳಿದ್ದ ನಟ ಧನುಷ್ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೇ ನ್ಯುಮೋನಿಯಾದಿಂದ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
ಲಡಾಕ್ನಿಂದ ಧನುಷ್ ಅವರನ್ನು ಬೆಂಗಳೂರಿ ಮಣಿಪಾಲ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ 10.45ಕ್ಕೆ ಸಾವನ್ನಪ್ಪಿದ್ದಾರೆ. ಲಡಾಕ್ ವಾತಾವರಣದಲ್ಲಿ ಆರೋಗ್ಯದಲ್ಲಿ ಏರುಪೇರಾಗಿ ನ್ಯೂಮೋನಿಯಾ ಬಂದಿದ್ದೇ ಧನುಷ್ ಸಾವಿಗೆ ಕಾರಣ ಎನ್ನಲಾಗಿದೆ. ಮೂಲತ: ಬಾಗಲಕೋಟೆ ಜಿಲ್ಲೆಯ ಕೋಡಿಹಾಳ ಗ್ರಾಮದ ಮುತ್ತುರಾಜ್ ಚಿತ್ರರಂಗಕ್ಕೆ ಬಂದ ಮೇಲೆ ಧನುಷ್ ಎಂದು ಹೆಸರನ್ನು ಬದಲಿಸಿಕೊಂಡಿದ್ದರು. ಮೃತ ಧನುಷ್ ಪಾರ್ಥೀವ ಶರೀರವನ್ನು ಹುಟ್ಟೂರಿಗೆ ಕೊಂಡೊಯ್ದು ಅಂತ್ಯ ಸಂಸ್ಕಾರ ಮಾಡಲಾಗಿದೆ.
ತನ್ನ
ಎರಡನೇ
ತಮಿಳು
ಚಿತ್ರ
ಘೋಷಿಸಿದ
ಶಿವಣ್ಣ;
'ಕ್ಯಾಪ್ಟನ್
ಮಿಲ್ಲರ್'
ಪ್ರಪಂಚಕ್ಕೆ
ಸ್ವಾಗತ
ಎಂದ
ಧನುಷ್
'ಪ್ಯಾರ್ ಕಾ ಗೋಲ್ಗುಂಬಜ್', 'ಸ್ನೇಹಿತ', ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಚಿತ್ರರಂಗದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂದು ಹವಣಿಸುತ್ತಿದ್ದರು. ಆದರೆ ದೊಡ್ಡ ಅವಕಾಶಗಳು ಸಿಕ್ಕಿರಲಿಲ್ಲ. ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಮುನ್ನುಗ್ಗುತ್ತಿದ್ದರು. ಇಂತಹ ಹೊತ್ತಲ್ಲೇ ಅಕಾಲಿಕ ನಿಧನರಾಗಿದ್ದಾರೆ. ಧನುಷ್ ನಿಧನಕ್ಕೆ ಸ್ನೇಹಿತರು, ಚಿತ್ರರಂಗದ ಕಲಾವಿದರು ಸಂತಾಪ ಸೂಚಿಸುತ್ತಿದ್ದಾರೆ.