Don't Miss!
- Sports Hardik Pandya: ಹಾರ್ದಿಕ್ ಪಾಂಡ್ಯರಲ್ಲಿನ ನಾಯಕತ್ವದ ಗುಣಗಳು ಕಾಣೆಯಾಗಿವೆಯಾ?
- Finance ಕಳೆದ 5 ವರ್ಷಗಳಲ್ಲಿ ಸಂಸದ ಡಿಕೆ ಸುರೇಶ್ ಅವರ ಆಸ್ತಿ 75% ರಷ್ಟು ಹೆಚ್ಚಳ, ವಿವರ
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೊಟ್ಲಲ್ಲಪ್ಪೋ ಕೈ' ಸಿನಿಮಾ ಖ್ಯಾತಿಯ ಉದಯೋನ್ಮುಖ ನಟ ಧನುಷ್ ಅಕಾಲಿಕ ಮರಣ
ಕನ್ನಡ ಚಿತ್ರರಂಗದ ಮತ್ತೊಬ್ಬ ಉದಯೋನ್ಮುಖ ನಟ ಧನುಷ್(ಮುತ್ತುರಾಜ) ಕೊನೆಯುಸಿರೆಳೆದಿದ್ದಾರೆ. 'ಸಂಪಿಗೆಹಳ್ಳಿ', 'ಕೊಟ್ಲಲ್ಲಪ್ಪೋ ಕೈ' ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟ ಧನುಷ್ ನಟಿಸಿದ್ದರು. ಶಿವರಾಜ್ಕುಮಾರ್ ಜೊತೆ 'ಲೀಡರ್' ಚಿತ್ರದಲ್ಲೂ ಬಣ್ಣ ಹಚ್ಚಿದ್ದರು. ಸಿನಿಮಾ ಚಿತ್ರೀಕರಣಕ್ಕಾಗಿ ಲಡಾಕ್ಗೆ ತೆರಳಿದ್ದ ನಟ ಧನುಷ್ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೇ ನ್ಯುಮೋನಿಯಾದಿಂದ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
ಲಡಾಕ್ನಿಂದ ಧನುಷ್ ಅವರನ್ನು ಬೆಂಗಳೂರಿ ಮಣಿಪಾಲ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ 10.45ಕ್ಕೆ ಸಾವನ್ನಪ್ಪಿದ್ದಾರೆ. ಲಡಾಕ್ ವಾತಾವರಣದಲ್ಲಿ ಆರೋಗ್ಯದಲ್ಲಿ ಏರುಪೇರಾಗಿ ನ್ಯೂಮೋನಿಯಾ ಬಂದಿದ್ದೇ ಧನುಷ್ ಸಾವಿಗೆ ಕಾರಣ ಎನ್ನಲಾಗಿದೆ. ಮೂಲತ: ಬಾಗಲಕೋಟೆ ಜಿಲ್ಲೆಯ ಕೋಡಿಹಾಳ ಗ್ರಾಮದ ಮುತ್ತುರಾಜ್ ಚಿತ್ರರಂಗಕ್ಕೆ ಬಂದ ಮೇಲೆ ಧನುಷ್ ಎಂದು ಹೆಸರನ್ನು ಬದಲಿಸಿಕೊಂಡಿದ್ದರು. ಮೃತ ಧನುಷ್ ಪಾರ್ಥೀವ ಶರೀರವನ್ನು ಹುಟ್ಟೂರಿಗೆ ಕೊಂಡೊಯ್ದು ಅಂತ್ಯ ಸಂಸ್ಕಾರ ಮಾಡಲಾಗಿದೆ.
ತನ್ನ ಎರಡನೇ ತಮಿಳು ಚಿತ್ರ ಘೋಷಿಸಿದ ಶಿವಣ್ಣ; 'ಕ್ಯಾಪ್ಟನ್ ಮಿಲ್ಲರ್' ಪ್ರಪಂಚಕ್ಕೆ ಸ್ವಾಗತ ಎಂದ ಧನುಷ್
'ಪ್ಯಾರ್ ಕಾ ಗೋಲ್ಗುಂಬಜ್', 'ಸ್ನೇಹಿತ', ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಚಿತ್ರರಂಗದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂದು ಹವಣಿಸುತ್ತಿದ್ದರು. ಆದರೆ ದೊಡ್ಡ ಅವಕಾಶಗಳು ಸಿಕ್ಕಿರಲಿಲ್ಲ. ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಮುನ್ನುಗ್ಗುತ್ತಿದ್ದರು. ಇಂತಹ ಹೊತ್ತಲ್ಲೇ ಅಕಾಲಿಕ ನಿಧನರಾಗಿದ್ದಾರೆ. ಧನುಷ್ ನಿಧನಕ್ಕೆ ಸ್ನೇಹಿತರು, ಚಿತ್ರರಂಗದ ಕಲಾವಿದರು ಸಂತಾಪ ಸೂಚಿಸುತ್ತಿದ್ದಾರೆ.