ದೀಪಾವಳಿ ಹಬ್ಬಕ್ಕೆ ತಾರೆಯರ ಶುಭಾಶಯ: ದರ್ಶನ್, ಸುದೀಪ್, ಜಗ್ಗೇಶ್ ಹೇಳಿದ್ದೇನು?
ದೇಶದಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮ, ಸಡಗರದಿಂದ ಆಚರಿಸುತ್ತಿದ್ದಾರೆ. ಬಾಳಿನಲ್ಲಿರುವ ಅಂಧಕಾರವನ್ನು ಹೋಗಲಾಡಿಸುವುದು ಈ ಹಬ್ಬದ ಉದ್ದೇಶ. ಲಕ್ಷ್ಮೀ ಪೂಜೆ, ಗೋ ಪೂಜೆ, ಬಲಿ ಪಾಡ್ಯಮಿ ಅಂತ ನಾಲ್ಕೈದು ದಿನಗಳು ಕಾಲ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಬೆಳಕಿನ ಹಬ್ಬಕ್ಕೆ ಗಣ್ಯರು ಶುಭಾಶಯ ತಿಳಿಸುತ್ತಿದ್ದಾರೆ. ಸಿನಿ ತಾರೆಯರು ತಮ್ಮ ಅಭಿಮಾನಿಗಳಿಗೆ ದೀಪಾವಳಿಯ ಶುಭಾಶಯ ತಿಳಿಸುತ್ತಿದ್ದಾರೆ. ನಟರಾದ ಜಗ್ಗೇಶ್, ದರ್ಶನ್ ಮತ್ತು ಸುದೀಪ್ ಸೇರಿದಂತೆ ಅನೇಕ ಕಲಾವಿದರು ಶುಭಾಶಯ ತಿಳಿಸಿದ್ದಾರೆ.
ಸುದೀಪ್ ಟ್ವೀಟ್ ಮಾಡಿ, 'ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು' ಎಂದು ಹೇಳಿದ್ದಾರೆ.

ಇನ್ನೂ ದರ್ಶನ್ ಟ್ವೀಟ್ ಮಾಡಿ, ಬದುಕಿನ ಅಂಧಕಾರಗಳೆಲ್ಲವೂ ದೂರವಾಗಿ ಎಲ್ಲರ ಮನೆ ಮನಗಳಲ್ಲಿ ನೆಮ್ಮದಿ ತುಂಬಿರಲಿ ಎಂದು ಹೇಳಿದ್ದಾರೆ. 'ಬದುಕಿನ ಅಂಧಕಾರಗಳೆಲ್ಲವೂ ದೂರವಾಗಿ ಎಲ್ಲರ ಮನೆ ಮನಗಳಲ್ಲಿ ನೆಮ್ಮದಿ, ಖುಷಿ ಸಡಗರ ತುಂಬಿ ತುಳುಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತ, ತೂಗುದೀಪ ಪರಿವಾರದಿಂದ ಸರ್ವರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು' ಎಂದು ಹೇಳಿದ್ದಾರೆ.
'ಬೆಳಕಿನೆಡೆಗೆ ಸಾಗುತ್ತಿರಿ ನೀವು ಸಂತೋಷ ಪಟ್ಟು ಅನ್ಯರಿಗು ಸಂತೋಷ ನೀಡಿ. ಶುಭದಿನ ಶುಭೋದಯ' ಎಂದು ಟ್ವೀಟ್ ಮಾಡಿದ್ದಾರೆ.


Click it and Unblock the Notifications











