Don't Miss!
- News 2024ರ ಲೋಸಕಭೆ ಚುನಾವಣೆಗೆ ಮತ ಹಾಕುವುದು ಹೇಗೆ?
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಾಗರಹಾವು' ನೋಡೋಕೆ ಶಿವಣ್ಣ, ಸುದೀಪ್, ಯಶ್, ಉಪ್ಪಿ ರೆಡಿ
Recommended Video
ದಿವಂಗತ ನಟ ಸಾಹಸಸಿಂಹ ಡಾ ವಿಷ್ಣುವರ್ಧನ್ ನಾಯಕನಾಗಿ ಅಭಿನಯಿಸಿದ್ದ ಚೊಚ್ಚಲ ಸಿನಿಮಾ 'ನಾಗರಹಾವು' ಈಗ 7.1 ಸಿನಿಮಾಸ್ಕೋಪ್ ನಲ್ಲಿ ಆಧುನಿಕ ತಂತ್ರಜ್ಙಾನದೊಂದಿಗೆ ಮತ್ತೆ ಬಿಡುಗಡೆಯಾಗುತ್ತಿದೆ.
ಕನ್ನಡದ ಸಾರ್ವಕಾಲಿಕ ಎವರ್ ಗ್ರೀನ್ ಸಿನಿಮಾಗೆ ಒಳ್ಳೆಯದಾಗಲಿ ಹಾಗೂ ಈ ಸಿನಿಮಾವನ್ನ ಹೊಸ ರೂಪದಲ್ಲಿ ನೋಡಬೇಕೆಂದು ಇಂದಿನ ಸ್ಯಾಂಡಲ್ ವುಡ್ ಸ್ಟಾರ್ ಗಳು ಕಾಯುತ್ತಿದ್ದಾರೆ. ಈ ಬಗ್ಗೆ ಕನ್ನಡ ನಟರು ಮಾತನಾಡಿದ್ದು, ಈ ವಿಡಿಯೋ ಯೂಟ್ಯೂಬ್ ನಲ್ಲಿ ಅಪ್ ಲೌಡ್ ಮಾಡಲಾಗಿದೆ.
ಸೆಂಚುರಿಸ್ಟಾರ್ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಾಕಿಂಗ್ ಸ್ಟಾರ್ ಯಶ್, ಕಿಚ್ಚ ಸುದೀಪ್, ನಿರ್ದೇಶಕ ಯೋಗರಾಜ್ ಭಟ್, ನಟಿ ಸುಹಾಸಿನಿ, ವಿನೋದ್ ರಾಜ್, ರೆಬೆಲ್ ಸ್ಟಾರ್ ಅಂಬರೀಶ್ ಸೇರಿದಂತೆ ಎಲ್ಲರೂ ಈ ಚಿತ್ರವನ್ನ ನೋಡಲು ಸಜ್ಜಾಗಿದ್ದಾರೆ.
ಟಿಕೆಟ್ ತಗೊಂಡು 'ನಾಗರಹಾವು' ಸಿನಿಮಾ ನೋಡ್ತಿನಿ ಎಂದ ಅಂಬಿ
ರವಿಚಂದ್ರನ್ ಅವರ ತಂದೆ ವೀರಾಸ್ವಾಮಿ ಅವರು ಈಶ್ವರಿ ಪ್ರೊಡಕ್ಷನ್ ನಲ್ಲಿ ಈ ಸಿನಿಮಾ ನಿರ್ಮಾಣ ಮಾಡಿದ್ದರು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಲ್ ಈ ಚಿತ್ರ ನಿರ್ದೇಶನ ಮಾಡಿದ್ದರು. ಇದೀಗ, ಕ್ರೇಜಿಸ್ಟಾರ್ ಸಹೋದರ ಬಾಲಾಜಿ ಈ ಚಿತ್ರಕ್ಕೆ ಹೊಸ ತಂತ್ರಜ್ಙಾನದ ಟಚ್ ಕೊಟ್ಟು, ಮತ್ತೆ ತರ್ತಿದ್ದಾರೆ. ಇದೇ ತಿಂಗಳು 20 ರಂದು ನಾಗರಹಾವು ಸಿನಿಮಾ ರಿ-ರಿಲೀಸ್ ಆಗುತ್ತಿದ್ದು,
'ನಾಗರಹಾವು' ಸಿನಿಮಾ ಬಗ್ಗೆ ಮಾತನಾಡುವ ಯೋಗ್ಯತೆ ನನಗೆ ಇಲ್ಲ
ಡಾ ವಿಷ್ಣುವರ್ಧನ್, ಕೆ.ಎಸ್ ಅಶ್ವತ್ಥ್, ಶುಭ, ಲೀಲಾವತಿ, ಆರತಿ, ಅಂಬರೀಶ್, ಜಯಂತಿ, ಶಿವರಾಂ, ಎಂ.ಪಿ ಶಂಕರ್, ಲೋಕನಾಥ್, ವಜ್ರಮುನಿ ಸೇರಿದಂತೆ ಹಲವರು ಅಭಿನಯಿಸಿದ್ದರು. ವಿಜಯ ಬಾಸ್ಕರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದರು. ಮೂಲ ಸಿನಿಮಾ 1972 ರಲ್ಲಿ ಬಿಡುಗಡೆಯಾಗಿತ್ತು. ಇದೀಗ, 46 ವರ್ಷಗಳ ನಂತರ ಮತ್ತೆ ನಾಗರಹಾವು ಬಿಗ್ ಸ್ಕ್ರೀನ್ ಮೇಲೆ ಅಬ್ಬರಿಸಲು ಸಿದ್ಧವಾಗ್ತಿದೆ.