Don't Miss!
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್, ಶ್ರೀಮುರಳಿ ಸಿನಿಮಾಗಳ ಮೇಕಪ್ ಮ್ಯಾನ್ ಸೀನಣ್ಣ ನಿಧನ
ಕನ್ನಡ ಚಿತ್ರರಂಗದಲ್ಲಿ ಮೇಕಪ್ ಸೀನಣ್ಣ ಎಂದೇ ಖ್ಯಾತಿಗಳಿಸಿದ್ದ ಮೇಕಪ್ ಕಲಾವಿದ ಶ್ರೀನಿವಾಸ್ ಇಂದು (ಏಪ್ರಿಲ್ 28) ಕೊನೆಯುಸಿರೆಳೆದಿದ್ದಾರೆ. ಉಸಿರಾಟ ಸಮಸ್ಯೆಯಿಂದ ಬಳುತ್ತಿದ್ದ ಶ್ರೀನಿವಾಸ್ ಅವರನ್ನು ಕೆಲವು ದಿನಗಳ ಹಿಂದೆ ಆಸ್ಪತ್ರೆೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಅನೇಕ ವರ್ಷಗಳಿಂದ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಅವರು ಅನೇಕ ಖ್ಯಾತ ಕಲಾವಿದರಿಗೆ ಬಣ್ಣ ಹಚ್ಚಿದ್ದಾರೆ. ಸದ್ಯ ಶ್ರೀನಿವಾಸ್ ಅವರು ವರ್ಣಾಲಂಕಾರ ಮತ್ತು ಕೇಶಲಂಕಾರ ಕಲಾವಿದರ ಸಂಘದ ಉಪಾಧ್ಯಕ್ಷರಾಗಿದ್ದರು.
ಪುಟ್ಟಣ್ಣ ಕಣಗಾಲ್ ಪುತ್ರನ ಸಾವಿಗೆ ಟಿಎನ್ ಸೀತಾರಾಮ್ ಸಂತಾಪ
ಸೀನಣ್ಣ ನಿರ್ದೇಶಕ ಚೇತನ್ ಕುಮಾರ್ ಸಾರಥ್ಯ ಬಹದ್ದೂರ್, ಭರ್ಜರಿ, ಭರಾಟೆ ಮತ್ತು ಇನ್ನು ಅನೇಕ ಸಿನಿಮಾಗಳಿಗೆ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡಿದ್ದಾರೆ. ಸದ್ಯ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾಗೂ ಮೇಕಪ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅನೇಕ ಯುವ ನಿರ್ದೇಶಕರ ಸಿನಿಮಾಗಳಿಗೆ ಸೀನಣ್ಣ ಕೆಲಸ ಮಾಡಿದ್ದಾರೆ.
ಸೀನಣ್ಣ ನಿಧನಕ್ಕೆ ನಿರ್ದೇಶಕ ಚೇತನ್ ಸಂತಾಪ ಸೂಚಿಸಿದ್ದಾರೆ. 'ನಮ್ಮ ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಚಿತ್ರಗಳಿಗೆ ಹಾಗೂ ಕನ್ನಡದ ಬಹಳಷ್ಟು ಚಿತ್ರಗಳಿಗೆ ಕಂಪೆನಿ ಮೇಕಪ್ ಮ್ಯಾನ್ ಆಗಿ (ವರ್ಣಾಲಂಕಾರ) ಕಾರ್ಯನಿರ್ವಹಿಸಿದ "ಮೇಕಪ್ ಸೀನಣ್ಣ" (ಶ್ರೀನಿವಾಸ್) ರವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ ಅಣ್ಣ' ಎಂದು ಟ್ವೀಟ್ ಮಾಡಿದ್ದಾರೆ.
Recommended Video
ಇನ್ನು ನಿರ್ದೇಶಕ ಎಪಿ ಅರ್ಜುನ್ ಟ್ವೀಟ್ ಮಾಡಿ. 'ನನ್ನ ಎಲ್ಲಾ ಸಿನಿಮಾಗಳಿಗೂ makeup ಕಲಾವಿದರಾಗಿ ಕೆಲಸ ನಿರ್ವಹಿಸುತ್ತಿದ್ದ ಸೀನಣ್ಣ ಇಂದು ಬೆಳಿಗ್ಗೆ ದೈವಾಧೀನರಾಗಿದ್ದಾರೆ. ಒಂದು ವಾರದ ಹಿಂದೆ ನಗುನಗುತ್ತಾ ಬಂದು ಭೇಟಿಯಾಗಿದ್ದ ವ್ಯಕ್ತಿ ಇಂದು ಇಲ್ಲ ಎಂದರೆ ನಿಜವಾಗಿಯೂ ನಂಬಲಾಗುತ್ತಿಲ್ಲ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸೀನಣ್ಣ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.