ಸ್ಯಾಂಡಲ್ ವುಡ್ ನಟ, ನಿರ್ಮಾಪಕ ದಿನೇಶ್ ಗಾಂಧಿ ನಿಧನ
ಸ್ಯಾಂಡಲ್ ವುಡ್ ನಟ ಮತ್ತು ನಿರ್ಮಾಪಕ ದಿನೇಶ್ ಗಾಂಧಿ ಕೊನೆಯುಸಿರೆಳೆದಿದ್ದಾರೆ. ಇಂದು (ಅಕ್ಟೋಬರ್ 31) ಹೃದಯಾಘಾತದಿಂದ ದಿನೇಶ್ ಗಾಂಧಿ ನಿಧನ ಹೊಂದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
52 ವರ್ಷದ ದಿನೇಶ್ ಗಾಂಧಿ ಹಠಾತ್ ನಿಧನ ಕುಟುಂಬದವರಿಗೆ ಆಘಾತ ತಂದಿದೆ. ದಿನೇಶ್ ಗಾಂಧಿ ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ನಟ ರವಿಚಂದ್ರನ್ ನಟನೆಯ ಹೂ ಮತ್ತು ಮಲ್ಲಿಖಾರ್ಜುನ ಹಾಗೂ ಕಿಚ್ಚ ಸುದೀಪ್ ಅಭಿನಯದ ವೀರ ಮದಕರಿ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ದಿನೇಶ್ ಗಾಂಧಿ ನಟನಾಗಿಯೂ ಗುರುಸಿಕೊಂಡಿದ್ದಾರೆ.
ಕಿಚ್ಚ ಸುದೀಪ್ ಅಭಿನಯದ ವೀರ ಮದಕರಿ ಸಿನಿಮಾ ನಿರ್ಮಾಣ ಮಾಡುವ ಅಭಿನಯ ಕೂಡ ಮಾಡಿದ್ದಾರೆ. ಇನ್ನೂ ನಟ ಸಿದ್ಧಾಂತ ಅಭಿನಯದ ಚತ್ರಪತಿ ಸಿನಿಮಾವನ್ನು ನಿರ್ದೇಶನ ಮಾಡುವ ಮೂಲಕ ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದಾರೆ. ಇದೀಗ ಮಕ್ಕಳ ಸಿನಿಮಾವನ್ನು ನಿರ್ದೇಶನ ಮಾಡಲು ತಯಾರಿ ನಡೆಸಿದ್ದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಇವರ ಸಾವಿಗೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ದಿನೇಶ್ ಬಾಬು ಅಂತ್ಯಕ್ರಿಯೆ ಇಂದು ಶ್ರೀರಂಗಪಟ್ಟಣದ ನಗುವಿನಹಳ್ಳಿಯಲ್ಲಿ ನಡೆಯಲಿದೆ.


Click it and Unblock the Notifications











