Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ನಿಧನ
ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ನಿಧನ ಹೊಂದಿದ್ದಾರೆ. ಕೆಲ ವರ್ಷಗಳಿಂದಲೂ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಕೆಲವು ದಿನಗಳ ಹಿಂದಷ್ಟೆ ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು, ಚಿಕಿತ್ಸೆಗೆ ಸ್ಪಂದಿಸದ ಸತ್ಯಜಿತ್ ಅಕ್ಟೋಬರ್ 09ರ ರಾತ್ರಿ ನಿಧನ ಹೊಂದಿದ್ದಾರೆ.
ಹೆಗಡೆನಗರದಲ್ಲಿರುವ ಸತ್ಯಜಿತ್ ನಿವಾಸದಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಇಸ್ಲಾಂ ಸಂಪ್ರದಾಯದಂತೆ ಅಂತಿಮಕ್ರಿಯೆ ಮಾಡಲಾಗುವುದು.
ಸತ್ಯಜಿತ್ ಸುಮಾರು 600 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೆಂಪು ಉರಿಕಂಗಳ ಸತ್ಯಜಿತ್ ಹಲವಾರು ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ.
ವೃತ್ತಿಯಲ್ಲಿ ಬಸ್ ಚಾಲಕ ಆಗಿದ್ದ ಸತ್ಯಜಿತ್ ನಾಟಕಗಳಲ್ಲಿ ಆಸಕ್ತಿ ಅರಳಿ ನಾಟಕಗಳಲ್ಲಿ ಅಭಿನಯಿಸಲು ಆರಂಭಿಸಿದರು. ಅದೇ ಮುಂದುವರೆದು ಸಿನಿಮಾಗಳಿಗೂ ಪ್ರವೇಶ ಪಡೆದುಕೊಂಡರು. ಆ ನಂತರ ಬೇರೆ ವೃತ್ತಿಯ ಕಡೆ ಗಮನ ಹರಿಸದಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿಬಿಟ್ಟರು.
ಹಿಂದಿಯಲ್ಲಿ ನಾಟಕ ಮಾಡುವಾಗ ನಾನಾ ಪಾಟೇಕರ್ ಸಹ ಸತ್ಯಜಿತ್ಗೆ ಗೆಳೆಯರಾಗಿದ್ದರು. ಸತ್ಯಜಿತ್ ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸತ್ಯಜಿತ್ ಮೂಲ ಹೆಸರು ಸಯ್ಯದ್ ನಿಜಾಮುದ್ದೀನ್ ಎಂದಿದ್ದು, ಸಿನಿಮಾ ರಂಗಕ್ಕೆ ಪ್ರವೇಶ ಪಡೆದ ಬಳಿಕ ತಮ್ಮ ಹೆಸರನ್ನು ಬದಲಾಯಿಸಿಕೊಂಡರು.
ಸತ್ಯಜಿತ್ ಕೆಲ ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಗ್ಯಾಂಗ್ರಿನ್ ಆಗಿ ಅವರ ಒಂದು ಕಾಲನ್ನು ವೈದ್ಯರು ತೆಗೆದು ಹಾಕಿದರು. ಅದಾದ ಮೇಲೂ ಸಕ್ಕರೆ ಖಾಯಿಲೆ ಹಾಗೂ ಇತರ ಖಾಯಿಲೆಗಳು ಅವರ ಬೆನ್ನು ಬಿಡಲಿಲ್ಲ. ಇದರ ಜೊತೆಗೆ ಕೌಟುಂಬಿಕ ಸಮಸ್ಯೆಗಳು ಸಹ ಬೆನ್ನು ಬಿದ್ದವು, ಕಳೆದ ಲಾಕ್ಡೌನ್ ಅವಧಿಯಲ್ಲಿ ಸ್ವಂತ ಮಗಳೇ ಸತ್ಯಜಿತ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.