Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೀಪಾವಳಿಗೆ ಹೊಸ ಪೋಸ್ಟರ್ಗಳನ್ನು ಬಿಟ್ಟು ಕುತೂಹಲ ಹೆಚ್ಚಿಸಿದ ಚಿತ್ರಗಳು
ಎಲ್ಲವೂ ಸಹಜವಾಗಿ ಇದ್ದಿದ್ದರೆ ದೀಪಾವಳಿ ಹಬ್ಬದ ಪ್ರಯುಕ್ತ ಯಾವುದಾರೂ ದೊಡ್ಡ ಸಿನಿಮಾಗಳು ತೆರೆಗೆ ಬರ್ತಿತ್ತು. ಆದ್ರೆ, ಕೊರೊನಾ ಎಂಬ ವೈರಸ್ನಿಂದ ಪರಿಸ್ಥಿತಿ ಬದಲಾಯ್ತು. ಆದರೂ ಅಭಿಮಾನಿಗಳನ್ನು ನಿರಾಸೆ ಮಾಡದ ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡಿ ದೀಪಾವಳಿಗೆ ಶುಭಕೋರಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ ರಾಬರ್ಟ್ ಚಿತ್ರತಂಡ ಕೇವಲ ಶುಭಾಶಯ ಮಾತ್ರ ಕೋರಿದೆ. ಸತೀಶ್ ನೀನಾಸಂ ನಟನೆಯ ದಸರಾ ಚಿತ್ರತಂಡವೂ ವಿಶ್ ಮಾಡಿದೆ. ಆದ್ರೆ, ಜೋಗಿ ಪ್ರೇಮ್, ರಕ್ಷಿತ್ ಶೆಟ್ಟಿ, ಉಪೇಂದ್ರ, ದುನಿಯಾ ವಿಜಯ್ ತಮ್ಮ ಚಿತ್ರಗಳ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಮುಂದೆ ಓದಿ...
ದೀಪಾವಳಿ ಹಬ್ಬಕ್ಕೆ ತಾರೆಯರ ಶುಭಾಶಯ: ದರ್ಶನ್, ಸುದೀಪ್, ಜಗ್ಗೇಶ್ ಹೇಳಿದ್ದೇನು?
ಏಕ್ ಲವ್ ಯಾ
ಜೋಗಿ ಪ್ರೇಮ್ ನಿರ್ದೇಶನ ಮಾಡುತ್ತಿರುವ ನಿರೀಕ್ಷೆಯ ಸಿನಿಮಾ ಏಕ್ ಲವ್ ಯಾ. ರಕ್ಷಿತಾ ಅವರ ಸಹೋದರ ರಾಣಾ ನಟಿಸುತ್ತಿರುವ ಚೊಚ್ಚಲ ಚಿತ್ರ. ದೀಪಾವಳಿ ಹಬ್ಬದ ಪ್ರಯುಕ್ತ ಏಕ್ ಲವ್ ಯಾ ಚಿತ್ರದ ವಿಶೇಷವಾದ ಪೋಸ್ಟರ್ ರಿಲೀಸ್ ಮಾಡಿದ್ದಾರೆ ನಿರ್ದೇಶಕ ಪ್ರೇಮ್.
ಶಶಾಂಕ್-ಉಪ್ಪಿ 54
ಶಶಾಂಕ್ ಮತ್ತು ಉಪೇಂದ್ರ ನಿರ್ದೇಶನದಲ್ಲಿ ಹೊಸ ಸಿನಿಮಾ ಬರ್ತಿದೆ. ಈ ಚಿತ್ರಕ್ಕೆ ಟೈಟಲ್ ಅಂತಿಮವಾಗಿಲ್ಲ. ಉಪ್ಪಿ ಅಭಿನಯದ 54ನೇ ಸಿನಿಮಾ ಇದಾಗಿದೆ. ನೈಜ ಘಟನೆಗಳನ್ನು ಆಧರಿಸಿ ತಯಾರಾಗಲಿರುವ ಈ ಚಿತ್ರ 2021ಕ್ಕೆ ಶುರುವಾಗಲಿದೆ.
ಚಾರ್ಲಿ 777
ರಕ್ಷಿತ್ ಶೆಟ್ಟಿ ನಟಿಸಿರುವ ಚಾರ್ಲಿ 777 ಸಿನಿಮಾ ಬಹುತೇಕ ಚಿತ್ರೀಕರಣ ಮುಗಿಸಿ ರಿಲೀಸ್ಗೆ ರೆಡಿಯಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಿರುವ ಚಿತ್ರ ಮುಂದಿನ ವರ್ಷದ ಆರಂಭದಲ್ಲಿ ರಿಲೀಸ್ ಆಗಬಹುದು.
ದುನಿಯಾ 'ಸಲಗ'
ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ಸಿನಿಮಾ ಸಲಗ. ಚೊಚ್ಚಲ ಬಾರಿ ವಿಜಿ ಆಕ್ಷನ್ ಕಟ್ ಹೇಳಿದ್ದಾರೆ. ಧನಂಜಯ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸಂಜನಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಕೆಪಿ ಶ್ರೀಕಾಂತ್ ನಿರ್ಮಾಣ ಮಾಡಿದ್ದಾರೆ. ದೀಪಾವಳಿ ಹಬ್ಬಕ್ಕೆ ಸಲಗ ಚಿತ್ರತಂಡವೂ ಶುಭಕೋರಿದೆ.
Recommended Video
ರಾಜಾಮಾರ್ತಂಡ
ದಿವಂಗತ ನಟ ಚಿರಂಜೀವಿ ಸರ್ಜಾ ನಟನೆಯಲ್ಲಿ ತಯಾರಾಗಿದ್ದ ಚಿತ್ರ ರಾಜಾಮಾರ್ತಂಡ. ಲಾಕ್ಡೌನ್ಗೂ ಮೊದಲೇ ರಿಲೀಸ್ ಗೆ ಸಿದ್ಧವಾಗಿತ್ತು. ಆದ್ರೆ, ಬಿಡುಗಡೆಯಾಗಿರಲಿಲ್ಲ. ಈಗ ತೆರೆಗೆ ಬರಲು ಸಜ್ಜಾಗಿರುವ ಚಿತ್ರತಂಡ ದೀಪಾವಳಿ ಹಬ್ಬಕ್ಕೆ ಶುಭಕೋರಿದೆ.